AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಕನ್ನಡತಿ’ಯಲ್ಲಿ ಶೀಘ್ರವೇ ಭುವಿ-ಹರ್ಷನ ಮದುವೆ?; ಇದಕ್ಕಿದೆ ಮಹತ್ವದ ಕಾರಣ

ರತ್ನಮಾಲಾಗೆ ಅನಾರೋಗ್ಯ ಕಾಡಿರುವುದರಿಂದ ಶೀಘ್ರವೇ ಹರ್ಷ ಹಾಗೂ ಭುವಿ ಮದುವೆ ನಡೆಯಬಹುದು. ರತ್ನಮಾಲಾ ಕೂಡ ಮಗನ ಮದುವೆ ನೋಡೋಕೆ ಕಾತುರದಿಂದ ಕಾದಿದ್ದಾಳೆ.

 ‘ಕನ್ನಡತಿ’ಯಲ್ಲಿ ಶೀಘ್ರವೇ ಭುವಿ-ಹರ್ಷನ ಮದುವೆ?; ಇದಕ್ಕಿದೆ ಮಹತ್ವದ ಕಾರಣ
ಕಿರಣ್​ ರಾಜ್​-ರಂಜನಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Mar 01, 2022 | 9:26 PM

Share

‘ಕನ್ನಡತಿ’ ಧಾರಾವಾಹಿ (Kannadathi Serial) ಹಲವು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಹರ್ಷ ಹಾಗೂ ಭುವಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಹರ್ಷನ ಹಲವು ಕೋರಿಕೆಗಳ ನಂತರದಲ್ಲಿ ಆತನ ಪ್ರೀತಿಯನ್ನು ಭುವಿ ಒಪ್ಪಿಕೊಂಡಿದ್ದಾಳೆ. ಹರ್ಷನನ್ನು ವರು ಸಾಕಷ್ಟು ಪ್ರೀತಿಸುತ್ತಾಳೆ. ಆತನಿಗೋಸ್ಕರ ಏನು ಮಾಡೋಕೂ ಆಕೆ ರೆಡಿ ಆಗಿದ್ದಾಳೆ. ಇದು ಭುವಿಯ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿ ಇಬ್ಬರೂ ಪ್ರೀತಿ ವಿಚಾರವನ್ನು ವರುಧಿನಿಗೆ ಇನ್ನೂ ಹೇಳಿಲ್ಲ. ಈ ಕಾರಣಕ್ಕೆ ಭುವಿ ಒಂದೊಂದೇ ಕಾರಣ ನೀಡಿ ಮದುವೆ ಮುಂದೂಡುತ್ತಿದ್ದಾಳೆ. ಆದರೆ, ಇಬ್ಬರ ಮದುವೆ ಶೀಘ್ರವೇ ನಡೆಯುವ ಸಾಧ್ಯತೆ ಇದೆ. ಇದಕ್ಕೆ ಇಂದಿನ (ಮಾರ್ಚ್​ 1) ಸಂಚಿಕೆಯಲ್ಲಿ ನಡೆದ ಘಟನೆಯೇ ಕಾರಣ. ಅಷ್ಟಕ್ಕೂ ಭುವಿ ಹಾಗೂ ಹರ್ಷನ ಮದುವೆ ಬೇಗ ಆಗೋಕೆ ನಡೆದಂತಹ ಘಟನೆ ಯಾವುದು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಹರ್ಷನ ತಾಯಿ ರತ್ನಮಾಲಾಗೆ ಭುವಿ ಕಂಡರೆ ಎಲ್ಲಿಲ್ಲದ ಪ್ರೀತಿ. ಇದಕ್ಕೆ ಕಾರಣವಾಗಿದ್ದು ಹಸಿರುಪೇಟೆ ಮತ್ತು ಭುವಿಯ ಗುಣ. ರತ್ನಮಾಲಾ ಕೂಡ ಹಸಿರುಪೇಟೆಯವಳು. ಅಲ್ಲಿಂದ ಬೆಂಗಳೂರಿಗೆ ಬಂದು ಈಗ ದೊಡ್ಡ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾಳೆ. ಅವರಿಗೆ ಈ ಮೊದಲಿನಿಂದಲೂ ಅನಾರೋಗ್ಯ ಕಾಡುತ್ತಲೇ ಇದೆ. ಈಗ ಅವರ ಆರೋಗ್ಯ ತುಂಬಾನೇ ಹದಗೆಟ್ಟಿದೆ. ಈ ಬಗ್ಗೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ರತ್ನಮಾಲಾ ಯಾವಾಗ ಬೇಕಾದರೂ ಸಾಯಬಹುದು ಎಂದು ವೈದ್ಯರು ನೇರವಾಗಿಯೇ ಹೇಳಿದ್ದಾರೆ. ಇದರಿಂದ ಮನೆಯವರ ಆತಂಕ ಹೆಚ್ಚಾಗಿದೆ. ಆಕೆಯ ಮನವನ್ನು ನೋಯಿಸದಿರಲು ವೈದ್ಯರು ಸೂಚನೆ ನೀಡಿದ್ದಾರೆ. ಹೀಗಾಗಿ, ಅಮ್ಮನಿಗೋಸ್ಕರ ಹರ್ಷ ಏನು ಬೇಕಾದರೂ ಮಾಡೋಕೆ ರೆಡಿ ಆಗಿದ್ದಾನೆ.

ತಾಯಿ ಬಳಿ ಬಂದ ಹರ್ಷ ‘ನಿನ್ನನ್ನು ಎಲ್ಲಾದರೂ ಕರೆದುಕೊಂಡು ಹೋಗಬೇಕೆ?’ ಎಂದು ಪ್ರಶ್ನಿಸಿದ್ದಾನೆ.  ಸದ್ಯ, ಭುವಿ ತನ್ನ ತಂಗಿಯ ಜತೆ ಹಸಿರುಪೇಟೆಗೆ ತೆರಳಿದ್ದಾಳೆ. ಹೀಗಾಗಿ, ರತ್ನಮಾಲಾ ಕೂಡ ಹಸಿರುಪೇಟೆಗೆ ತೆರಳುವ ಇಂಗಿತ ವ್ಯಕ್ತಪಡಿಸಬಹುದು. ಹೀಗಾದಲ್ಲಿ, ಅಲ್ಲಿಯೇ ಮದುವೆ ಮಾತುಕತೆ ನಡೆಯಲಿದೆ.

ರತ್ನಮಾಲಾಗೆ ಅನಾರೋಗ್ಯ ಕಾಡಿರುವುದರಿಂದ ಶೀಘ್ರವೇ ಹರ್ಷ ಹಾಗೂ ಭುವಿ ಮದುವೆ ನಡೆಯಬಹುದು. ರತ್ನಮಾಲಾ ಕೂಡ ಮಗನ ಮದುವೆ ನೋಡೋಕೆ ಕಾತುರದಿಂದ ಕಾದಿದ್ದಾಳೆ. ಹೀಗಾಗಿ, ಮದುವೆ ಯಾವಾಗ ನಡೆಯಲಿದೆ ಎನ್ನುವ ಕುತೂಹಲ ವೀಕ್ಷಕರ ವಲಯದಲ್ಲಿದೆ. ಹರ್ಷ ಹಾಗೂ ಭುವಿಯ ಅದ್ದೂರಿ ಮದುವೆ ನೋಡೋಕೆ ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ‘ಕನ್ನಡತಿ’ ಭುವಿಗೆ ಎದುರಾಯ್ತು ಹೊಸ ತಲೆನೋವು; ವರುಧಿನಿಗೆ ಗೊತ್ತಾಗಲಿದೆ ಆ ಸತ್ಯ?

‘ಕನ್ನಡತಿ’ಯಲ್ಲಿ ಟ್ವಿಸ್ಟ್​​: ಭುವಿಯನ್ನು ಕೊಲ್ಲಲು ಸಾನಿಯಾ ಸುಪಾರಿ; ಇದಕ್ಕೆ 5 ಲಕ್ಷ ನೀಡಿದ್ದು ರತ್ನಮಾಲಾ

ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ