AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಸಾವಿರ ಕೋಟಿ ರೂಪಾಯಿ ಗಳಿಸುತ್ತಾ? ಈ ಪ್ರಮುಖ ದಿನದಂದೇ ನಿರ್ಧಾರ

‘ಕಾಂತಾರ: ಚಾಪ್ಟರ್ 1’ ಕೇವಲ ಎಂಟೇ ದಿನಗಳಲ್ಲಿ 500 ಕೋಟಿ ಗಳಿಸಿದೆ. ಸಿನಿಮಾ ಸಾವಿರ ಕೋಟಿ ರೂಪಾಯಿ ಗಳಿಸುತ್ತದೆಯೇ ಎಂಬ ಪ್ರಶ್ನೆಗೆ ದೀಪಾವಳಿ ಹಬ್ಬದ ಕಲೆಕ್ಷನ್ ನಿರ್ಣಾಯಕ ಆಗಲಿದೆ. ಅಕ್ಟೋಬರ್ 20-22ರ ದೀಪಾವಳಿ ಸಮಯದಲ್ಲಿ ವಿಶ್ವ ಮಟ್ಟದಲ್ಲಿ 200 ಕೋಟಿ ಗಳಿಸಿದರೆ, 1000 ಕೋಟಿ ಗುರಿ ತಲುಪುವ ನಿರೀಕ್ಷೆಯಿದೆ.

‘ಕಾಂತಾರ: ಚಾಪ್ಟರ್ 1’ ಸಾವಿರ ಕೋಟಿ ರೂಪಾಯಿ ಗಳಿಸುತ್ತಾ? ಈ ಪ್ರಮುಖ ದಿನದಂದೇ ನಿರ್ಧಾರ
ರುಕ್ಮಿಣಿ
ರಾಜೇಶ್ ದುಗ್ಗುಮನೆ
|

Updated on: Oct 11, 2025 | 12:30 PM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ (Kantara: Chapter 1) ಕೇವಲ ಎಂಟೇ ದಿನಕ್ಕೆ 500 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಕನ್ನಡ ಮಾತ್ರವಲ್ಲದೆ, ಪರಭಾಷೆಯ ಜನರು ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಇದರಿಂದ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಸಲು ಸಾಧ್ಯವಾಯಿತು. ಈ ಚಿತ್ರದ ಕಲೆಕ್ಷನ್ ಮುಂದಿನ ಕೆಲ ವಾರ ಭರ್ಜರಿಯಾಗಿ ಇರಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಆದರೆ, ಸಿನಿಮಾ ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡುತ್ತದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ಕೇವಲ 15 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಗಳಿಕೆ ಮಾಡಿತು. ಈಗ ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ‘ಕಾಂತಾರ: ಚಾಪ್ಟರ್ 1’ ಚಿತ್ರ ಕೇವಲ ಒಂದೇ ವಾರಕ್ಕೆ 500 ಕೋಟಿ ರೂಪಾಯಿ ಗಡಿ ತಲುಪಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಆ ಒಂದು ದಿನ ಸಿನಿಮಾಗೆ ನಿರ್ಣಾಯಕವಾಗಲಿದೆ.

ಯಾವುದೇ ವಿಶೇಷ ಹಬ್ಬಗಳು ಬಂದಾಗ ಸಿನಿಮಾ ನೋಡಲು ತೆರಳುವವರ ಸಂಖ್ಯೆ ಹೆಚ್ಚಲಿದೆ. ಈಗ ದೀಪಾವಳಿ ಸಮೀಪಿಸಿದೆ. ಕೆಲವೇ ದಿನಗಳಲ್ಲಿ ಹಿಂದೂಗಳ ಈ ಪ್ರಮುಖ ಹಬ್ಬ ಆಗಮಿಸಲಿದೆ. ಆ ಸಮಯದಲ್ಲಿ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಸುತ್ತದೆ ಎಂಬುದರ ಆಧಾರದ ಮೇಲೆ ಸಿನಿಮಾದ ಒಟ್ಟಾರೆ ಕಲೆಕ್ಷನ್ ನಿರ್ಧಾರವಾಗಲಿದೆ. ದೀಪಾವಳಿ ಹಬ್ಬವನ್ನು ಅಕ್ಟೋಬರ್ 20, 21 ಹಾಗೂ 22ರಂದು ಆಚರಿಸಲಾಗುತ್ತಿದೆ. ಈ ಸಮಯದಲ್ಲಿ ಸಿನಿಮಾ ವಿಶ್ವ ಮಟ್ಟದಲ್ಲಿ ಕನಿಷ್ಠ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡಬೇಕು. ಒಂದೊಮ್ಮೆ ಇದು ಸಂಭವಿಸಿದಲ್ಲಿ ಸಿನಿಮಾದ ಒಟ್ಟಾರೆ ಕಲೆಕ್ಷನ್ 1000 ಕೋಟಿ ರೂಪಾಯಿ ಆಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ
Image
ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ತಾಳ್ಮೆಯ ಕಟ್ಟೆ
Image
‘ಕಾಂತಾರ: ಚಾಪ್ಟರ್ 1’; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಮಗಳು ಗೌತಮ್​ಗೆ ಸಿಕ್ಕೇ ಬಿಟ್ಳು

ಇದನ್ನೂ ಓದಿ: ಹಿಂದಿಯಲ್ಲಿ ‘ಕಾಂತಾರ: ಚಾಪ್ಟರ್ 1’ ಭರ್ಜರಿ ಕಲೆಕ್ಷನ್; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ

‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ರಿಷಬ್ ಅವರು ದೈವದ ಕಥೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ‘ಕಾಂತಾರ: ಚಾಪ್ಟರ್ 2’ ಸಿನಿಮಾ ಕೂಡ ಮಾಡೋದಾಗಿ ಘೋಷಿಸಿದ್ದಾರೆ. ಆ ಸಿನಿಮಾ ಸಿದ್ಧವಾದರೆ ಅದರ ಬಜೆಟ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ