AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಸಾವಿರ ಕೋಟಿ ರೂಪಾಯಿ ಗಳಿಸುತ್ತಾ? ಈ ಪ್ರಮುಖ ದಿನದಂದೇ ನಿರ್ಧಾರ

‘ಕಾಂತಾರ: ಚಾಪ್ಟರ್ 1’ ಕೇವಲ ಎಂಟೇ ದಿನಗಳಲ್ಲಿ 500 ಕೋಟಿ ಗಳಿಸಿದೆ. ಸಿನಿಮಾ ಸಾವಿರ ಕೋಟಿ ರೂಪಾಯಿ ಗಳಿಸುತ್ತದೆಯೇ ಎಂಬ ಪ್ರಶ್ನೆಗೆ ದೀಪಾವಳಿ ಹಬ್ಬದ ಕಲೆಕ್ಷನ್ ನಿರ್ಣಾಯಕ ಆಗಲಿದೆ. ಅಕ್ಟೋಬರ್ 20-22ರ ದೀಪಾವಳಿ ಸಮಯದಲ್ಲಿ ವಿಶ್ವ ಮಟ್ಟದಲ್ಲಿ 200 ಕೋಟಿ ಗಳಿಸಿದರೆ, 1000 ಕೋಟಿ ಗುರಿ ತಲುಪುವ ನಿರೀಕ್ಷೆಯಿದೆ.

‘ಕಾಂತಾರ: ಚಾಪ್ಟರ್ 1’ ಸಾವಿರ ಕೋಟಿ ರೂಪಾಯಿ ಗಳಿಸುತ್ತಾ? ಈ ಪ್ರಮುಖ ದಿನದಂದೇ ನಿರ್ಧಾರ
ರುಕ್ಮಿಣಿ
ರಾಜೇಶ್ ದುಗ್ಗುಮನೆ
|

Updated on: Oct 11, 2025 | 12:30 PM

Share

‘ಕಾಂತಾರ: ಚಾಪ್ಟರ್ 1’ ಸಿನಿಮಾ (Kantara: Chapter 1) ಕೇವಲ ಎಂಟೇ ದಿನಕ್ಕೆ 500 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಕನ್ನಡ ಮಾತ್ರವಲ್ಲದೆ, ಪರಭಾಷೆಯ ಜನರು ಈ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಇದರಿಂದ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಸಲು ಸಾಧ್ಯವಾಯಿತು. ಈ ಚಿತ್ರದ ಕಲೆಕ್ಷನ್ ಮುಂದಿನ ಕೆಲ ವಾರ ಭರ್ಜರಿಯಾಗಿ ಇರಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಆದರೆ, ಸಿನಿಮಾ ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡುತ್ತದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ಕೇವಲ 15 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಗಳಿಕೆ ಮಾಡಿತು. ಈಗ ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ‘ಕಾಂತಾರ: ಚಾಪ್ಟರ್ 1’ ಚಿತ್ರ ಕೇವಲ ಒಂದೇ ವಾರಕ್ಕೆ 500 ಕೋಟಿ ರೂಪಾಯಿ ಗಡಿ ತಲುಪಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಆ ಒಂದು ದಿನ ಸಿನಿಮಾಗೆ ನಿರ್ಣಾಯಕವಾಗಲಿದೆ.

ಯಾವುದೇ ವಿಶೇಷ ಹಬ್ಬಗಳು ಬಂದಾಗ ಸಿನಿಮಾ ನೋಡಲು ತೆರಳುವವರ ಸಂಖ್ಯೆ ಹೆಚ್ಚಲಿದೆ. ಈಗ ದೀಪಾವಳಿ ಸಮೀಪಿಸಿದೆ. ಕೆಲವೇ ದಿನಗಳಲ್ಲಿ ಹಿಂದೂಗಳ ಈ ಪ್ರಮುಖ ಹಬ್ಬ ಆಗಮಿಸಲಿದೆ. ಆ ಸಮಯದಲ್ಲಿ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಸುತ್ತದೆ ಎಂಬುದರ ಆಧಾರದ ಮೇಲೆ ಸಿನಿಮಾದ ಒಟ್ಟಾರೆ ಕಲೆಕ್ಷನ್ ನಿರ್ಧಾರವಾಗಲಿದೆ. ದೀಪಾವಳಿ ಹಬ್ಬವನ್ನು ಅಕ್ಟೋಬರ್ 20, 21 ಹಾಗೂ 22ರಂದು ಆಚರಿಸಲಾಗುತ್ತಿದೆ. ಈ ಸಮಯದಲ್ಲಿ ಸಿನಿಮಾ ವಿಶ್ವ ಮಟ್ಟದಲ್ಲಿ ಕನಿಷ್ಠ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡಬೇಕು. ಒಂದೊಮ್ಮೆ ಇದು ಸಂಭವಿಸಿದಲ್ಲಿ ಸಿನಿಮಾದ ಒಟ್ಟಾರೆ ಕಲೆಕ್ಷನ್ 1000 ಕೋಟಿ ರೂಪಾಯಿ ಆಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ
Image
ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ತಾಳ್ಮೆಯ ಕಟ್ಟೆ
Image
‘ಕಾಂತಾರ: ಚಾಪ್ಟರ್ 1’; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಮಗಳು ಗೌತಮ್​ಗೆ ಸಿಕ್ಕೇ ಬಿಟ್ಳು

ಇದನ್ನೂ ಓದಿ: ಹಿಂದಿಯಲ್ಲಿ ‘ಕಾಂತಾರ: ಚಾಪ್ಟರ್ 1’ ಭರ್ಜರಿ ಕಲೆಕ್ಷನ್; ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಮಂದಿ

‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ರಿಷಬ್ ಅವರು ದೈವದ ಕಥೆ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ‘ಕಾಂತಾರ: ಚಾಪ್ಟರ್ 2’ ಸಿನಿಮಾ ಕೂಡ ಮಾಡೋದಾಗಿ ಘೋಷಿಸಿದ್ದಾರೆ. ಆ ಸಿನಿಮಾ ಸಿದ್ಧವಾದರೆ ಅದರ ಬಜೆಟ್ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!