AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 2’ ಯಾವಾಗ? ಕೊನೆಗೂ ಉತ್ತರಿಸಿದ ರಿಷಬ್ ಶೆಟ್ಟಿ

'ಕಾಂತಾರ: ಚಾಪ್ಟರ್ 1' ಸಿನಿಮಾ 600 ಕೋಟಿ ರೂ.ಗೂ ಹೆಚ್ಚು ಗಳಿಸಿ ಬ್ಲಾಕ್‌ಬಸ್ಟರ್ ಆಯಿತು. ರಿಷಬ್ ಶೆಟ್ಟಿ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. 'ಕಾಂತಾರ: ಚಾಪ್ಟರ್ 2' ಬರಲಿದೆ ಎಂದು ಘೋಷಿಸಲಾಗಿದ್ದರೂ, ಸದ್ಯಕ್ಕೆ ಅದರ ಕೆಲಸ ಆರಂಭ ಆಗಿಲ್ಲ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

‘ಕಾಂತಾರ: ಚಾಪ್ಟರ್ 2’ ಯಾವಾಗ? ಕೊನೆಗೂ ಉತ್ತರಿಸಿದ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 14, 2025 | 7:57 AM

Share

‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬುದು ವಿಶೇಷ. ಈ ಚಿತ್ರದ ಮೂಲಕ ರಿಷಬ್ ಶೆಟ್ಟಿ ಅವರು ದೊಡ್ಡ ಮಟ್ಟದಲ್ಲಿ ಗೆಲುವು ಕಂಡರು. ಈ ಸಿನಿಮಾಗೆ ಮತ್ತೊಂದು ಭಾಗ ಬರಲಿದೆ ಎಂದು ಚಾಪ್ಟರ್ 1 ಕ್ಲೈಮ್ಯಾಕ್ಸ್​ನಲ್ಲಿ ಹೇಳಲಾಗಿತ್ತು. ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ.

‘ಕಾಂತಾರ’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಆ ಬಳಿಕ ಈ ಚಿತ್ರಕ್ಕೆ ಸೀಕ್ವೆಲ್ ಮಾಡೋದಾಗಿ ತಂಡದವರು ಹೇಳಿದರು. ರಿಷಬ್ ಅವರು ಒಂದು ವರ್ಷಗಳ ಕಾಲ ಸ್ಕ್ರಿಪ್ಟ್ ಕೆಲಸಗಳಲ್ಲಿ ತೊಡಗಿಕೊಂಡರು. ಈ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು.

ಇದನ್ನೂ ಓದಿ
Image
ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕಾವ್ಯಾ ಕಣ್ಣಿಗೆ ಹೆದರಿದ ಗಿಲ್ಲಿ
Image
‘ನಂದ ಗೋಕುಲ’ ಧಾರಾವಾಹಿಯಲ್ಲಿ ವಲ್ಲಭ-ಅಮೂಲ್ಯ ವಿವಾಹ; ದೊಡ್ಡ ಟ್ವಿಸ್ಟ್
Image
ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬರಲಿದೆ ಎಂಬ ಮಾಹಿತಿ ನೀಡಲಾಗಿದೆ. ‘ಕಾಂತಾರ’ ಸಿನಿಮಾದ ಸೀಕ್ವೆಲ್ ಇದಾಗಲಿದೆ. ಈ ಚಿತ್ರ ಯಾವಾಗ ರಿಲೀಸ್ ಆಗಲಿದೆ ಎಂಬ ಬಗ್ಗೆ ರಿಷಬ್ ಅವರು ಇಷ್ಟು ದಿನ ಪ್ರತಿಕ್ರಿಯೆ ನೀಡಿರಿಲಿಲ್ಲ. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ರಿಷಬ್ ಸದ್ಯ ಬ್ರೇಕ್​ನಲ್ಲಿ ಇದ್ದಾರೆ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

ಜೀ ಕನ್ನಡದಲ್ಲಿ ರಿಷಬ್

View this post on Instagram

A post shared by Zee Kannada (@zeekannada)

ಜೀ ಕನ್ನಡದಲ್ಲಿ ‘ಜೀ ಕುಟುಂಬ ಅವಾರ್ಡ್ಸ್’ ಪ್ರಸಾರ ಕಾಣುವುದಿದೆ. ಇದರ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ. ರಿಷಬ್ ಶೆಟ್ಟಿ ಅವರು ಇದಕ್ಕೆ ಅತಿಥಿಯಾಗಿ ತೆರಳಿದ್ದರು. ಆಗ ‘ಕಾಂತಾರ: ಚಾಪ್ಟರ್ 2’ ಚಿತ್ರದ ಬಗ್ಗೆ ಪ್ರಶ್ನೆ ಮಾಡಲಾಯಿತು. ‘ನೆಕ್ಸ್ಟ್​ ರೆಸ್ಟ್’ ಎಂದು ರಿಷಬ್ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ವಿಶ್ವ ಮಟ್ಟದಲ್ಲಿ 700 ಕೋಟಿ; ಕನ್ನಡಕ್ಕಿಂತ ಹಿಂದಿಯಲ್ಲೇ ಹೆಚ್ಚು ಗಳಿಕೆ

‘ನನಗೆ ಕೆರ್ಕೊಳಕೆ ಪುರುಸೊತ್ತು ಇರಬಾರದು, ಅಷ್ಟು ಕೆಲಸ ಕೊಡಬೇಕು’ ಎಂದು ರಿಷಬ್ ದೇವರ ಬಳಿ ಕೇಳಿಕೊಂಡಿದ್ದರಂತೆ. ಅದು ಈಗ ಈಡೇರಿದೆ. ಈ ವಿಚಾರದಲ್ಲಿ ಅವರಿಗೆ ಖುಷಿ ಇದೆ. ಸದ್ಯಕ್ಕಂತೂ, ‘ಕಾಂತಾರ: ಚಾಪ್ಟರ್ 2’ ಸೆಟ್ಟೇರಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ