AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 2’ ಯಾವಾಗ? ಕೊನೆಗೂ ಉತ್ತರಿಸಿದ ರಿಷಬ್ ಶೆಟ್ಟಿ

'ಕಾಂತಾರ: ಚಾಪ್ಟರ್ 1' ಸಿನಿಮಾ 600 ಕೋಟಿ ರೂ.ಗೂ ಹೆಚ್ಚು ಗಳಿಸಿ ಬ್ಲಾಕ್‌ಬಸ್ಟರ್ ಆಯಿತು. ರಿಷಬ್ ಶೆಟ್ಟಿ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. 'ಕಾಂತಾರ: ಚಾಪ್ಟರ್ 2' ಬರಲಿದೆ ಎಂದು ಘೋಷಿಸಲಾಗಿದ್ದರೂ, ಸದ್ಯಕ್ಕೆ ಅದರ ಕೆಲಸ ಆರಂಭ ಆಗಿಲ್ಲ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

‘ಕಾಂತಾರ: ಚಾಪ್ಟರ್ 2’ ಯಾವಾಗ? ಕೊನೆಗೂ ಉತ್ತರಿಸಿದ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Oct 14, 2025 | 7:57 AM

Share

‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಈ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 600 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಎಂಬುದು ವಿಶೇಷ. ಈ ಚಿತ್ರದ ಮೂಲಕ ರಿಷಬ್ ಶೆಟ್ಟಿ ಅವರು ದೊಡ್ಡ ಮಟ್ಟದಲ್ಲಿ ಗೆಲುವು ಕಂಡರು. ಈ ಸಿನಿಮಾಗೆ ಮತ್ತೊಂದು ಭಾಗ ಬರಲಿದೆ ಎಂದು ಚಾಪ್ಟರ್ 1 ಕ್ಲೈಮ್ಯಾಕ್ಸ್​ನಲ್ಲಿ ಹೇಳಲಾಗಿತ್ತು. ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ.

‘ಕಾಂತಾರ’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಆ ಬಳಿಕ ಈ ಚಿತ್ರಕ್ಕೆ ಸೀಕ್ವೆಲ್ ಮಾಡೋದಾಗಿ ತಂಡದವರು ಹೇಳಿದರು. ರಿಷಬ್ ಅವರು ಒಂದು ವರ್ಷಗಳ ಕಾಲ ಸ್ಕ್ರಿಪ್ಟ್ ಕೆಲಸಗಳಲ್ಲಿ ತೊಡಗಿಕೊಂಡರು. ಈ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು.

ಇದನ್ನೂ ಓದಿ
Image
ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಕಾವ್ಯಾ ಕಣ್ಣಿಗೆ ಹೆದರಿದ ಗಿಲ್ಲಿ
Image
‘ನಂದ ಗೋಕುಲ’ ಧಾರಾವಾಹಿಯಲ್ಲಿ ವಲ್ಲಭ-ಅಮೂಲ್ಯ ವಿವಾಹ; ದೊಡ್ಡ ಟ್ವಿಸ್ಟ್
Image
ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬರಲಿದೆ ಎಂಬ ಮಾಹಿತಿ ನೀಡಲಾಗಿದೆ. ‘ಕಾಂತಾರ’ ಸಿನಿಮಾದ ಸೀಕ್ವೆಲ್ ಇದಾಗಲಿದೆ. ಈ ಚಿತ್ರ ಯಾವಾಗ ರಿಲೀಸ್ ಆಗಲಿದೆ ಎಂಬ ಬಗ್ಗೆ ರಿಷಬ್ ಅವರು ಇಷ್ಟು ದಿನ ಪ್ರತಿಕ್ರಿಯೆ ನೀಡಿರಿಲಿಲ್ಲ. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ರಿಷಬ್ ಸದ್ಯ ಬ್ರೇಕ್​ನಲ್ಲಿ ಇದ್ದಾರೆ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ.

ಜೀ ಕನ್ನಡದಲ್ಲಿ ರಿಷಬ್

View this post on Instagram

A post shared by Zee Kannada (@zeekannada)

ಜೀ ಕನ್ನಡದಲ್ಲಿ ‘ಜೀ ಕುಟುಂಬ ಅವಾರ್ಡ್ಸ್’ ಪ್ರಸಾರ ಕಾಣುವುದಿದೆ. ಇದರ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ. ರಿಷಬ್ ಶೆಟ್ಟಿ ಅವರು ಇದಕ್ಕೆ ಅತಿಥಿಯಾಗಿ ತೆರಳಿದ್ದರು. ಆಗ ‘ಕಾಂತಾರ: ಚಾಪ್ಟರ್ 2’ ಚಿತ್ರದ ಬಗ್ಗೆ ಪ್ರಶ್ನೆ ಮಾಡಲಾಯಿತು. ‘ನೆಕ್ಸ್ಟ್​ ರೆಸ್ಟ್’ ಎಂದು ರಿಷಬ್ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ವಿಶ್ವ ಮಟ್ಟದಲ್ಲಿ 700 ಕೋಟಿ; ಕನ್ನಡಕ್ಕಿಂತ ಹಿಂದಿಯಲ್ಲೇ ಹೆಚ್ಚು ಗಳಿಕೆ

‘ನನಗೆ ಕೆರ್ಕೊಳಕೆ ಪುರುಸೊತ್ತು ಇರಬಾರದು, ಅಷ್ಟು ಕೆಲಸ ಕೊಡಬೇಕು’ ಎಂದು ರಿಷಬ್ ದೇವರ ಬಳಿ ಕೇಳಿಕೊಂಡಿದ್ದರಂತೆ. ಅದು ಈಗ ಈಡೇರಿದೆ. ಈ ವಿಚಾರದಲ್ಲಿ ಅವರಿಗೆ ಖುಷಿ ಇದೆ. ಸದ್ಯಕ್ಕಂತೂ, ‘ಕಾಂತಾರ: ಚಾಪ್ಟರ್ 2’ ಸೆಟ್ಟೇರಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ