AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಮಸ್ತ್ ಕಲೆಕ್ಷನ್; ‘ವಿಕ್ರಾಂತ್ ರೋಣ’ ಕಲೆಕ್ಷನ್ ಹಿಂದಿಕ್ಕಲು ಕೆಲವೇ ಕೋಟಿ ಬಾಕಿ

ಹಿಂದಿಯಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಆದರೆ, ಯಾವ ಚಿತ್ರಗಳೂ ಹೇಳಿಕೊಳ್ಳುವಂತಹ ಯಶಸ್ಸು ಪಡೆಯುತ್ತಿಲ್ಲ.ಆದರೆ, ಹಿಂದಿಗೆ ಡಬ್ ಆಗಿ ತೆರೆಕಂಡ ‘ಕಾಂತಾರ’ ಸಿನಿಮಾ ಒಳ್ಳೆಯ ರೀತಿಯಲ್ಲಿ ಕಮಾಯಿ ಮಾಡುತ್ತಿದೆ.

‘ಕಾಂತಾರ’ ಮಸ್ತ್ ಕಲೆಕ್ಷನ್; ‘ವಿಕ್ರಾಂತ್ ರೋಣ’ ಕಲೆಕ್ಷನ್ ಹಿಂದಿಕ್ಕಲು ಕೆಲವೇ ಕೋಟಿ ಬಾಕಿ
ರಿಷಬ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 20, 2022 | 3:39 PM

Share

ರಿಷಬ್ ಶೆಟ್ಟಿ (Rishab Shetty) ನಟನೆಯ ‘ಕಾಂತಾರ’ ಸಿನಿಮಾದ ಕಲೆಕ್ಷನ್ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಪರಭಾಷೆಗಳಿಂದಲೂ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ, ಎಲ್ಲರೂ ಚಿತ್ರವನ್ನು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ಒಮ್ಮೆ ಸಿನಿಮಾ ನೋಡಿದವರು ಮರಳಿ ಮರಳಿ ಚಿತ್ರಮಂದಿರಕ್ಕೆ ಬರುತ್ತಿದ್ದಾರೆ. ಇದರಿಂದ ಸದ್ಯಕ್ಕಂತೂ ‘ಕಾಂತಾರ’ (Kantara Movie) ಕಲೆಕ್ಷನ್ ಕುಗ್ಗುವ ಸೂಚನೆ ಸಿಗುತ್ತಿಲ್ಲ. ಶೀಘ್ರದಲ್ಲೇ ದೀಪಾವಳಿ ಹಬ್ಬ ಆರಂಭ ಆಗಲಿದೆ. ಆ ಸಂದರ್ಭದಲ್ಲಿ ‘ಕಾಂತಾರ’ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ. ಹೀಗಾಗಿ, ಸಿನಿಮಾ ಅನಾಯಾಸವಾಗಿ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ.

ಹಿಂದಿಯಲ್ಲಿ ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಆದರೆ, ಯಾವ ಚಿತ್ರಗಳೂ ಹೇಳಿಕೊಳ್ಳುವಂತಹ ಯಶಸ್ಸು ಪಡೆಯುತ್ತಿಲ್ಲ. ರಶ್ಮಿಕಾ ಮಂದಣ್ಣ ಹಾಗೂ ಅಮಿತಾಭ್ ಬಚ್ಚನ್ ನಟನೆಯ ‘ಗುಡ್​ಬೈ’ ಸಿನಿಮಾ ರಿಲೀಸ್ ಆಗಿ ಫ್ಲಾಪ್ ಆಯಿತು. ಆಯುಷ್ಮಾನ್ ಖುರಾನ ನಟನೆಯ ‘ಡಾಕ್ಟರ್ ಜಿ’ ಸಿನಿಮಾ ಕೂಡ ದೊಡ್ಡ ಮಟ್ಟದ ಕಲೆಕ್ಷನ್ ಮಾಡಿಲ್ಲ. ಆದರೆ, ಹಿಂದಿಗೆ ಡಬ್ ಆಗಿ ತೆರೆಕಂಡ ‘ಕಾಂತಾರ’ ಸಿನಿಮಾ ಒಳ್ಳೆಯ ರೀತಿಯಲ್ಲಿ ಕಮಾಯಿ ಮಾಡುತ್ತಿದೆ.

ಅಕ್ಟೋಬರ್ 19ರಂದು ‘ಕಾಂತಾರ’ 1.95ಕೋಟಿ ರೂಪಾಯಿ (ಹಿಂದಿ ವರ್ಷನ್​) ಗಳಿಕೆ ಮಾಡಿದೆ. ವಾರದ ದಿನಗಳಲ್ಲಿ ಡಬ್ ಆಗಿ ತೆರೆಕಂಡ ಸಿನಿಮಾ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್​ ಮಾಡಿದೆ ಅನ್ನೋದು ನಿಜಕ್ಕೂ ಹೆಮ್ಮೆಯ ವಿಚಾರ. ಈ ಮೂಲಕ ಚಿತ್ರದ ಹಿಂದಿಕಲೆಕ್ಷನ್ 13.10 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ
Image
Kantara Movie: ‘ಕಾಂತಾರ ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತ’; ರಿಷಬ್ ಸಿನಿಮಾಗೆ ಪ್ರಭಾಸ್​ ಹೊಗಳಿಕೆ
Image
Sapthami Gowda: ಜನರ ಮಧ್ಯೆ ‘ಕಾಂತಾರ’ ನಾಯಕಿ ಸಪ್ತಮಿ ಗೌಡ ಬಿಂದಾಸ್​ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ತೆಲುಗಿನಲ್ಲೂ ‘ಕಾಂತಾರ’ ಚಿತ್ರಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ನೋಡಿದ ಅನೇಕರು ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಸಿನಿಮಾ ಹಂಚಿಕೆ ಜವಾಬ್ದಾರಿ ತೆಗೆದುಕೊಂಡು ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಅವರು ಒಳ್ಳೆಯ ಲಾಭ ಕಂಡಿದ್ದಾರೆ. ತೆಲುಗಿನಲ್ಲಿ ಈಗಾಗಲೇ ಚಿತ್ರದ ಕಲೆಕ್ಷನ್ ಎರಡಂಕಿ ಮುಟ್ಟಿದೆ. ಅವರು ಮೂರು ಕೋಟಿ ರೂಪಾಯಿಗೆ ಸಿನಿಮಾ ಹಂಚಿಕೆ ಜವಾಬ್ದಾರಿ ಪಡೆದುಕೊಂಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Kantara Movie: ‘ಕಾಂತಾರ’ ಸಿನಿಮಾ ನೋಡಿ ಮೂಕವಿಸ್ಮಿತನಾದೆ’; ರಿಷಬ್ ಶೆಟ್ಟಿ ಕೆಲಸಕ್ಕೆ ಕಿಚ್ಚನ ಚಪ್ಪಾಳೆ 

ಸದ್ಯ ಸಿನಿಮಾದ ಕಲೆಕ್ಷನ್ 150 ಕೋಟಿ ಸಮೀಪಿಸಿದೆ. ಈ ಮೂಲಕ ಶೀಘ್ರವೇ ಪುನೀತ್ ನಟನೆಯ ‘ಜೇಮ್ಸ್’ (151 ಕೋಟಿ ರೂಪಾಯಿ), ‘ವಿಕ್ರಾಂತ್ ರೋಣ’ (156 ಕೋಟಿ ರೂಪಾಯಿ) ಚಿತ್ರವನ್ನು ರಿಷಬ್ ಶೆಟ್ಟಿ ಚಿತ್ರ ಹಿಂದಿಕ್ಕುವ ಸಾಧ್ಯತೆ ಇದೆ.

Published On - 10:32 am, Thu, 20 October 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ