AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ಟಿವಿಯಲ್ಲಿ ಬರಲಿದೆ ‘ಕಾಂತಾರ’ ಸಿನಿಮಾ; ದಾಖಲೆಯ ಟಿಆರ್​ಪಿ ಗ್ಯಾರಂಟಿ ಅಂತಿದ್ದಾರೆ ಫ್ಯಾನ್ಸ್​

Kantara Movie On TV: ‘ಕಾಂತಾರ’ ಚಿತ್ರದ ಟೆಲಿವಿಷನ್​ ಪ್ರೀಮಿಯರ್​ಗೆ ಸಮಯ ಹತ್ತಿರವಾಗಿದೆ. ಈ ಕುರಿತು ‘ಸ್ಟಾರ್​ ಸುವರ್ಣ’ ವಾಹಿನಿ ಗುಡ್​ ನ್ಯೂಸ್​ ನೀಡಿದೆ.

Kantara: ಟಿವಿಯಲ್ಲಿ ಬರಲಿದೆ ‘ಕಾಂತಾರ’ ಸಿನಿಮಾ; ದಾಖಲೆಯ ಟಿಆರ್​ಪಿ ಗ್ಯಾರಂಟಿ ಅಂತಿದ್ದಾರೆ ಫ್ಯಾನ್ಸ್​
ಕಾಂತಾರ
TV9 Web
| Edited By: |

Updated on:Jan 03, 2023 | 8:26 PM

Share

ದೇಶವೇ ಕೊಂಡಾಡಿದ ಕನ್ನಡ ಸಿನಿಮಾ ‘ಕಾಂತಾರ’ (Kantara Movie) ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಚಿತ್ರಮಂದಿರದಲ್ಲಿ ಧೂಳೆಬ್ಬಿಸಿದ ಈ ಸಿನಿಮಾ ನಂತರ ಒಟಿಟಿಗೆ ಕಾಲಿಟ್ಟು ಅಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತು. ಈಗ ಈ ಚಿತ್ರದ ಟೆಲಿವಿಷನ್​ ಪ್ರೀಮಿಯರ್​ಗೆ (Kantara Movie Television Premiere) ಸಮಯ ಹತ್ತಿರ ಆಗಿದೆ. ‘ಸ್ಟಾರ್​ ಸುವರ್ಣ’ ವಾಹಿನಿಯು ‘ಕಾಂತಾರ’ ಚಿತ್ರದ ಪ್ರಸಾರ ಹಕ್ಕುಗಳನ್ನು ಕೊಂಡುಕೊಂಡಿದೆ. ಶೀಘ್ರದಲ್ಲೇ ಟಿವಿಯಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ. ಅದನ್ನು ತಿಳಿಸುವ ಸಲುವಾಗಿ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಪ್ರೋಮೋ ಹಂಚಿಕೊಳ್ಳಲಾಗಿದೆ. ಅದನ್ನು ಕಂಡು ವೀಕ್ಷಕರು ಎಗ್ಸೈಟ್​ ಆಗಿದ್ದಾರೆ. ರಿಷಬ್​ ಶೆಟ್ಟಿ (Rishab Shetty) ನಟನೆ, ನಿರ್ದೇಶನದ ಈ ಸಿನಿಮಾವನ್ನು ಟಿವಿಯಲ್ಲಿ ನೋಡಿ ಆನಂದಿಸಲು ವೀಕ್ಷಕರು ಕಾದಿದ್ದಾರೆ.

‘ಹೊಂಬಾಳೆ ಫಿಲ್ಮ್ಸ್​​’ ಬ್ಯಾನರ್​ ಅಡಿಯಲ್ಲಿ ಮೂಡಿಬಂದ ‘ಕಾಂತಾರ’ ಚಿತ್ರದಲ್ಲಿ ತುಳುನಾಡಿನ ಸಂಸ್ಕೃತಿಯಾದ ಕಂಬಳ, ಭೂತಕೋಲ ಮುಂತಾದ ವಿಚಾರಗಳ ಬಗ್ಗೆ ಹೇಳಲಾಗಿದೆ. ರಿಷಬ್​ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಅಚ್ಯುತ್​ ಕುಮಾರ್​, ಪ್ರಮೋದ್​​ ಶೆಟ್ಟಿ, ಕಿಶೋರ್​ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: Kantara Movie: ‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿ ತಲೆಯಲ್ಲಿ ಏನು ಓಡ್ತಿದೆ? ಪ್ರಮೋದ್​ ಶೆಟ್ಟಿ ಕೊಟ್ರು ಉತ್ತರ

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಕನ್ನಡದ ‘ಕಾಂತಾರ’ ಸಿನಿಮಾ ಬೇರೆ ಭಾಷೆಗಳಿಗೂ ಡಬ್​ ಆಗಿ ಬಿಡುಗಡೆ ಆಯಿತು. ಎಲ್ಲ ರಾಜ್ಯಗಳಲ್ಲೂ ಈ ಚಿತ್ರಕ್ಕೆ ಅತ್ಯುತ್ತಮ ಸ್ಪಂದನೆ ವ್ಯಕ್ತವಾಯ್ತು. ಎಲ್ಲ ಭಾಷೆಗಳಿಂದ ಸೇರಿ ‘ಕಾಂತಾರ’ ಗಳಿಸಿದ್ದು 400 ಕೋಟಿ ರೂಪಾಯಿಗಿಂತಲೂ ಅಧಿಕ. ಕನ್ನಡ ಸಿನಿಮಾದ ಈ ಸಾಧನೆಗೆ ಇಡೀ ದೇಶವೇ ಸಲಾಂ ಎಂದಿದೆ. ಇಂಥ ಚಿತ್ರವನ್ನು ಮನೆಯಲ್ಲೇ ಕುಳಿತು ಟಿವಿ ಪರದೆಯಲ್ಲಿ ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳಿಗೆ ‘ಸ್ಟಾರ್​ ಸುವರ್ಣ’ ವಾಹಿನಿ ಗುಡ್​ ನ್ಯೂಸ್​ ನೀಡಿದೆ.

ಇದನ್ನೂ ಓದಿ: Kantara Painting: ಮೈಸೂರಿನ ಉರಗ ಸಂರಕ್ಷಕ ಸ್ನೇಕ್ ಶ್ಯಾಮ್ ಮನೆಯ ಗೋಡೆಯಲ್ಲಿ ಮಹಿಷಾಸುರ, ಕಾಂತಾರ

ಟಿವಿಯಲ್ಲಿ ‘ಕಾಂತಾರ’ ಚಿತ್ರ ಯಾವಾಗ ಪ್ರಸಾರ ಆಗಲಿದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಪ್ರಸಾರ ದಿನಾಂಕದ ಬಗ್ಗೆ ಸದ್ಯದಲ್ಲೇ ವಾಹಿನಿಯವರು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಚಿತ್ರ ಪ್ರಸಾರ ಆಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ಈ ಸಿನಿಮಾಗಾಗಿ ಹಲವು ದಿನಗಳಿಂದ ಕಾದಿರುವುದಾಗಿ ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ.

ಚಿತ್ರಮಂದಿರ ಮತ್ತು ಒಟಿಟಿಯಲ್ಲಿ ‘ಕಾಂತಾರ’ ಸಿನಿಮಾ ದಾಖಲೆ ಮಾಡಿದ್ದಾಗಿದೆ. ಈಗ ಟಿವಿಯಲ್ಲಿ ಪ್ರಸಾರವಾದರೆ ದಾಖಲೆ ಮಟ್ಟದ ಟಿಆರ್​ಪಿ ಸಿಗುವುದು ಗ್ಯಾರಂಟಿ ಎಂದು ರಿಷಬ್​ ಶೆಟ್ಟಿ ಅಭಿಮಾನಿಗಳು ಭವಿಷ್ಯ ನುಡಿಯುತ್ತಿದ್ದಾರೆ. ‘ನಾಡಿಗೆ ನಾಡೇ ಭಕ್ತಿಯಿಂದ ಕೈಮುಗಿದು ಎದೆಗೊತ್ತಿಕೊಂಡ ಕನ್ನಡದ ಹೆಮ್ಮೆಯ ಕಳಶ ಕಾಂತಾರ. ಅತೀ ಶೀಘ್ರದಲ್ಲಿ ನಿಮ್ಮ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ’ ಎಂಬ ಕ್ಯಾಪ್ಷನ್​ ಜೊತೆಗೆ ಪ್ರೋಮೋ ಹಂಚಿಕೊಳ್ಳಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:26 pm, Tue, 3 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?