AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ನಾಯಕತ್ವ ತ್ಯಜಿಸಲು ಇದೇ ಕಾರಣ ಎಂದ ಕಪಿಲ್ ಶರ್ಮಾ; ಅದಕ್ಕೆ ಎಲ್ಲರೂ ನಕ್ಕಿದ್ದೇಕೆ?

Kapil Sharma Show: ಕಪಿಲ್ ಶರ್ಮಾ ಶೋ ಹೇಳಿಕೇಳಿ ಪಕ್ಕಾ ಕಾಮಿಡಿ ಕಾರ್ಯಕ್ರಮ. ಅದರಲ್ಲಿ ವಿರಾಟ್ ಕೊಹ್ಲಿ ನಾಯಕತ್ವ ತ್ಯಜಿಸಿದ್ದಕ್ಕೆ ಕುತೂಹಲಕರ ಕಾರಣವೊಂದನ್ನು ಕಪಿಲ್ ಶರ್ಮಾ ತಿಳಿಸಿದ್ದಾರೆ. ಏನದು?

Virat Kohli: ವಿರಾಟ್ ನಾಯಕತ್ವ ತ್ಯಜಿಸಲು ಇದೇ ಕಾರಣ ಎಂದ ಕಪಿಲ್ ಶರ್ಮಾ; ಅದಕ್ಕೆ ಎಲ್ಲರೂ ನಕ್ಕಿದ್ದೇಕೆ?
ವಿರಾಟ್ ಕೊಹ್ಲಿ, ಕಪಿಲ್ ಶರ್ಮಾ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Dec 24, 2021 | 2:58 PM

Share

ಏಕದಿನ ಕ್ರಿಕೆಟ್ ಪ್ರಕಾರದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕರಾಗಿದ್ದ ವಿರಾಟ್ ಕೊಹ್ಲಿಯವರನ್ನು ಕೆಳಗಿಳಿಸಿದ್ದು ದೇಶಾದ್ಯಂತ ಹಲವು ಆಯಾಮಗಳಲ್ಲಿ ಚರ್ಚೆಯಾಗಿತ್ತು. ಟಿ20 ಮಾದರಿಯಲ್ಲಿ ನಾಯಕನ ಸ್ಥಾನಕ್ಕೆ ಸ್ವತಃ ನಿವೃತ್ತಿ ಘೋಷಿಸಿದ್ದ ಕೊಹ್ಲಿಯೂ (Virat Kohli) ಕೂಡ, ಏಕದಿನ ಕ್ರಿಕೆಟ್ ನಾಯಕನ ಸ್ಥಾನದಿಂದ ಇಳಿಯುವ ಯೋಚನೆಯಲ್ಲಿರಲಿಲ್ಲ. ಆದರೆ ಮ್ಯಾನೇಜ್​ಮೆಂಟ್ ನಿರ್ಧಾರ ಬೇರೆಯಾಗಿತ್ತು. ಈ ಕುರಿತು ಪರ- ವಿರೋಧ ಚರ್ಚೆಗಳು ಈಗಾಗಲೇ ನಡೆದುಹೋಗಿವೆ. ಆದರೆ ಖ್ಯಾತ ನಿರೂಪಕ ಕಪಿಲ್ ಶರ್ಮಾ (Kapil Sharma) ವಿರಾಟ್ ನಾಯಕನ ಸ್ಥಾನದಿಂದ ಇಳಿಯಲು ಕಾರಣವಾಗಿದ್ದಕ್ಕೆ ಕಾರಣವಾದ ಹೊಸ ಘಟನೆಯನ್ನು ಬಹಿರಂಗವಾಗಿ ಹಂಚಿಕೊಂಡಿದ್ದಾರೆ. ಅಚ್ಚರಿಯ ವಿಚಾರವೆಂದರೆ ಕಪಿಲ್ ಶರ್ಮಾ ಹೇಳಿದ ಘಟನೆ ಯಾರಿಗೂ ಶಾಕಿಂಗ್ ಎನ್ನಿಸಲೇ ಇಲ್ಲ, ಬದಲಾಗಿ ಬಿದ್ದು ಬಿದ್ದು ನಕ್ಕಿದ್ದಾರೆ. ಇದೇಕೆ ಅಂತೀರಾ?

ಕಪಿಲ್ ಶರ್ಮಾ ಶೋಗೆ ಬಾಲಿವುಡ್​ ತಾರೆಯರು ತಮ್ಮ ಸಿನಿಮಾ ಪ್ರಚಾರಕ್ಕಾಗಿ ಆಗಮಿಸುತ್ತಾರೆ. ಇದೇ ಮಾದರಿಯಲ್ಲಿ ಬಾಲಿವುಡ್ ನಟ ಶಾಹಿದ್ ಕಪೂರ್ (Shahid Kapoor) ಹಾಗೂ ನಟಿ ಮೃಣಾಲ್ ಠಾಕೂರ್ (Mrunal Thakur) ಆಗಮಿಸಿದ್ದರು. ‘ಜೆರ್ಸಿ’ ಚಿತ್ರದ ಪ್ರಚಾರಕ್ಕಾಗಿ ಈ ತಾರೆಯರು ಶೋಗೆ ಬಂದಿದ್ದರು. ಕ್ರಿಕೆಟ್ ಕುರಿತಾದ ಕತೆಯನ್ನು ಹೊಂದಿರುವ ‘ಜೆರ್ಸಿ’ಯ ಕುರಿತು ಎಲ್ಲಾ ತಾರೆಯರು ಮಾತನಾಡುತ್ತಿದ್ದರು.

ಆಗ ನಟ ಚಂದನ್ ಪ್ರಭಾಕರ್ (Chandan Prabhakar) ಶಾಹಿದ್ ಕಪೂರ್ ಜತೆ ಮಾತನಾಡುತ್ತಾ ಅವರಿಗೆ ಕ್ರಿಕೆಟ್ ಕುರಿತು ಬಹಳ ಆಸಕ್ತಿ ಇರುವುದಾಗಿ ಹೇಳಿಕೊಂಡರು. ಚಂದನ್ ಶಾಹಿದ್ ಬಳಿ, ‘‘ಸರ್, ನಿಮ್ಮ ಕ್ರಿಕೆಟ್ ಕುರಿತಾದ ಚಿತ್ರ ಬರುತ್ತಿದೆ. ನಿಮಗೆ ಒಂದು ವಿಷಯ ಹೇಳಬೇಕು, ನನಗೂ ಕ್ರಿಕೆಟ್ ಕುರಿತು ಬಹಳ ಆಸಕ್ತಿ ಇದೆ’’ ಎಂದಿದ್ದಾರೆ. ತಕ್ಷಣ ಮಧ್ಯಪ್ರವೇಶಿಸಿದ ಕಪಿಲ್ ಶರ್ಮಾ ಚಂದನ್ ಪ್ರಭಾಕರ್ ಕಾಲೆಳೆದಿದ್ದಾರೆ.

ಕಪಿಲ್ ಮಾತನಾಡುತ್ತಾ, ‘‘ಚಂದನ್​ ಯಾವಾಗ ಕ್ರಿಕೆಟ್ ಕುರಿತು ಆಸಕ್ತಿ ತೋರಿಸಲು ಪ್ರಾರಂಭಿಸಿದರೋ, ಆಗಿನಿಂದ ವಿರಾಟ್ ಕೊಹ್ಲಿ ನಾಯಕತ್ವ ಬಿಟ್ಟಿದ್ದಾರೆ’’ ಎಂದು ತಮಾಷೆ ಮಾಡಿದ್ದಾರೆ. ಇದು ಶಾಹಿದ್ ಹಾಗೂ ಮೃಣಾಲ್ ಅವರನ್ನು ನಗೆಗಡಲಲ್ಲಿ ತೇಲಿಸಿದೆ. ಇಷ್ಟಕ್ಕೇ ಸುಮ್ಮನಾಗದ ಕಪಿಲ್, ‘ಜೆರ್ಸಿ’ ಸಿನಿಮಾ ಹೆಸರಿನ ಟೈಟಲ್ ಕುರಿತೂ ತಮಾಷೆ ಮಾಡಿದ್ದಾರೆ. ‘ಜೆರ್ಸಿ’ ಬೇಸಿಗೆ ಕಾಲದಲ್ಲಿ ಬಿಡುಗಡೆಯಾಗಿದ್ದರೆ ಅದಕ್ಕೆ ‘ಬನಿಯನ್’ ಹೆಸರಿಡುತ್ತಿದ್ದರೇನೋ ಎಂದು ತಮಾಷೆಯಾಗಿ ಕೇಳಿದ್ದಾರೆ.

ಕಾರ್ಯಕ್ರಮದ ಪ್ರೋಮೋ ಇಲ್ಲಿದೆ:

‘ಜೆರ್ಸಿ’ ಚಿತ್ರವು ರಾಷ್ಟ್ರ ಪ್ರಶಸ್ತಿ ವಿಜೇತ ತೆಲುಗಿನ ಅದೇ ಹೆಸರಿನ ಚಿತ್ರದ ರಿಮೇಕ್ ಆಗಿದೆ. ಶಾಹಿದ್ ಪತ್ನಿ ಪಾತ್ರದಲ್ಲಿ ಮೃಣಾಲ್ ಠಾಕೂರ್ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್ 31ಕ್ಕೆ ಚಿತ್ರ ತೆರೆಕಾಣಲಿದೆ.

ಇದನ್ನೂ ಓದಿ:

ಮಗಳ ಪಾತ್ರ ಮಾಡಿದ್ದ ನಟಿ ಜತೆ ಆಮಿರ್​ ಖಾನ್​ ಶಾದಿ? ವೈರಲ್​ ಫೋಟೋದ ಅಸಲಿಯತ್ತು ಇಲ್ಲಿದೆ

Anil Kapoor Birthday: ಪಕ್ಕಾ ಫ್ಯಾಮಿಲಿ ಮ್ಯಾನ್ ಅನಿಲ್ ಕಪೂರ್; 65ನೇ ವಸಂತಕ್ಕೆ ಕಾಲಿಟ್ಟ ನಟನ ಅಪರೂಪದ ಚಿತ್ರಗಳು ಇಲ್ಲಿವೆ

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್