AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿ ದಾಳಿ ಬಗ್ಗೆ ಮಾತಾಡಿ ಸೋನು ಸೂದ್​ಗೆ ಕುಟುಕಿದ ಕಪಿಲ್​ ಶರ್ಮಾ; ರಿಯಲ್​ ಹೀರೋ ಪ್ರತಿಕ್ರಿಯೆ ಹೇಗಿತ್ತು?

Sonu Sood: ‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮದಲ್ಲಿ ಸೋನು ಸೂದ್​ ಮತ್ತು ಕಪಿಲ್​ ಶರ್ಮಾ ಜೊತೆಯಾಗಿ 25 ಲಕ್ಷ ರೂ. ಗಳಿಸಿದರು. ಅದನ್ನು ‘ಸೂದ್​ ಚಾರಿಟಿ ಫೌಂಡೇಶನ್​’ಗೆ ನೀಡಲಾಯಿತು.

ಐಟಿ ದಾಳಿ ಬಗ್ಗೆ ಮಾತಾಡಿ ಸೋನು ಸೂದ್​ಗೆ ಕುಟುಕಿದ ಕಪಿಲ್​ ಶರ್ಮಾ; ರಿಯಲ್​ ಹೀರೋ ಪ್ರತಿಕ್ರಿಯೆ ಹೇಗಿತ್ತು?
ಕಪಿಲ್​ ಶರ್ಮಾ, ಸೋನು ಸೂದ್
TV9 Web
| Updated By: ಮದನ್​ ಕುಮಾರ್​|

Updated on: Nov 14, 2021 | 8:12 AM

Share

ನಟ ಸೋನು ಸೂದ್​ (Sonu Sood) ಅವರು ಅನೇಕರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ. ಮೊದಲ ಲಾಕ್​ಡೌನ್​ನಿಂದ ಇಲ್ಲಿಯವರೆಗೆ ಅವರು ಸಾವಿರಾರು ಜನರಿಗೆ ಸಹಾಯ ಮಾಡಿದ್ದಾರೆ. ಸಹಾಯಕ್ಕಾಗಿ ಪ್ರತಿದಿನ ಅವರ ಬಳಿ ಅಪಾರ ಸಂಖ್ಯೆಯ ಜನರು ಮನವಿ ಮಾಡಿಕೊಳ್ಳುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಸೋನು ಸೂದ್​ ಅವರ ಇಮೇಜ್​ ಬದಲಾಗಿದೆ. ಈ ಮೊದಲು ಸಿನಿಮಾಗಳಲ್ಲಿ ಅವರು ವಿಲನ್​ ಪಾತ್ರ ಮಾಡುತ್ತಿದ್ದರು. ಆದರೆ ಈಗ ಅವರು ಅಂಥ ಪಾತ್ರ ಮಾಡಿದರೆ ಜನರು ಒಪ್ಪುವುದಿಲ್ಲ. ಅಷ್ಟರಮಟ್ಟಿಗೆ ಅವರ ಮೇಲೆ ಜನರಿಗೆ ಗೌರವ ಭಾವನೆ ಮೂಡಿದೆ. ಆದರೆ ಅಂಥ ನಟನಿಗೆ ಕಾಮಿಡಿಯಲ್​ ಕಪಿಲ್​ ಶರ್ಮಾ (Kapil Sharma) ಅವರು ಲೇವಡಿ ಮಾಡಿದ್ದಾರೆ. ಈ ಘಟನೆಗೆ ಸಾಕ್ಷಿ ಆಗಿದ್ದು ‘ಕೌನ್​ ಬನೇಗಾ ಕರೋಡ್​ಪತಿ’ ಶೋ (Kaun Banega Crorepati). ಅಮಿತಾಭ್​ ಬಚ್ಚನ್​ (Amitabh Bachchan) ನಡೆಸಿಕೊಡುವ ಈ ಕಾರ್ಯಕ್ರಮಕ್ಕೆ ಸೋನು ಸೂದ್​ ಮತ್ತು ಕಪಿಲ್​ ಶರ್ಮಾ ಅವರು ಇತ್ತೀಚೆಗೆ ಅತಿಥಿಗಳಾಗಿ ಭಾಗವಹಿಸಿದ್ದರು.  

ಕೆಲವೇ ತಿಂಗಳ ಹಿಂದೆ ಸೋನು ಸೂದ್ ಅವರ ಮನೆ ಮೇಲೆ ಐಟಿ ದಾಳಿ ಆಗಿದ್ದು ಗೊತ್ತೇ ಇದೆ. ಅದನ್ನೇ ಇಟ್ಟುಕೊಂಡು ಕಪಿಲ್​ ಶರ್ಮಾ ಈಗ ಕಾಮಿಡಿ ಮಾಡಿದ್ದಾರೆ. ‘ಇವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಷ್ಟರಮೇಲೂ ಅವರು ಹಣ ಗಳಿಸಲು ಈ ಶೋಗೆ ಬಂದಿದ್ದಾರೆ’ ಎಂದರು ಕಪಿಲ್​ ಶರ್ಮಾ. ಅದಕ್ಕೆ ನಗುವಿನಿಂದಲೇ ಪ್ರತಿಕ್ರಿಯಿಸಿದರು ಸೋನು ಸೂದ್​.

ವೇದಿಕೆ ಮೇಲೆ ಕಪಿಲ್​ ಶರ್ಮಾ ಮತ್ತು ಸೋನು ಸೂದ್​ ಸ್ಕಿಟ್​ ಮಾಡಬೇಕಿತ್ತು. ‘ನನ್ನ ಬಳಿ ಗಾಡಿ ಇದೆ, ಹಣ ಇದೆ, ಬ್ಯಾಂಕ್​ ಬ್ಯಾಲೆನ್ಸ್​ ಇದೆ. ನಿನ್ನ ಬಳಿ ಏನಿದೆ’ ಎಂದು ಸೋನು ಸೂದ್​ ಅವರು ‘ದೀವಾರ್​’ ಸಿನಿಮಾದ ಡೈಲಾಗ್​ ಹೊಡೆದರು. ಅದಕ್ಕೆ ಉತ್ತರಿಸಿದ ಕಪಿಲ್​ ಶರ್ಮಾ, ‘ನನ್ನ ಬಳಿ ಐಟಿ ಅಧಿಕಾರಿಗಳ ಫೋನ್​ ನಂಬರ್​ ಇದೆ, ಕೊಡಲೇ?’ ಎಂದು ಕುಟುಕಿದರು. ಕಪಿಲ್​ ಶರ್ಮಾ ಅವರ ಯಾವ ಮಾತುಗಳನ್ನೂ ಕೂಡ ಸೋನು ಸೂದ್​ ಗಂಭೀರವಾಗಿ ಪರಿಗಣಿಸಲಿಲ್ಲ. ಈ ಎಲ್ಲ ಮಾತುಗಳನ್ನು ಅವರು ತಮಾಷೆಗೆ ಹೇಳಿದ್ದಾರೆ ಎಂಬುದನ್ನು ಪ್ರತ್ಯೇಕವಾಗಿ ವಿವರಿಸಬೇಕಿಲ್ಲ. ಹಾಗಾಗಿ ಅವರು ಜೋರಾಗಿ ನಕ್ಕು ಎಂಜಾಯ್​ ಮಾಡಿದರು.

ಈ ಕಾರ್ಯಕ್ರಮದಲ್ಲಿ ಸೋನು ಮತ್ತು ಕಪಿಲ್​ ಶರ್ಮಾ ಜೊತೆಯಾಗಿ 25 ಲಕ್ಷ ರೂ. ಗಳಿಸಿದರು. ಅದನ್ನು ‘ಸೂದ್​ ಚಾರಿಟಿ ಫೌಂಡೇಶನ್​’ಗೆ ನೀಡಲಾಯಿತು. ಆ ಮೂಲಕ ಜನರಿಗೆ ಸಹಾಯ ಮಾಡುವಲ್ಲಿ ಕಪಿಲ್​ ಕೂಡ ನೆರವಾಗಿದ್ದಾರೆ.

ಇದನ್ನೂ ಓದಿ:

ಪದ್ಮಶ್ರೀ ಪ್ರಶಸ್ತಿ ಸಿಗದಿದ್ದಕ್ಕೆ ಸೋನು ಸೂದ್​ಗೆ ಬೇಸರ? ನಟನ ಪ್ರತಿಕ್ರಿಯೆ ಏನು?

KBC: 25 ಲಕ್ಷ ರೂಪಾಯಿ ಪ್ರಶ್ನೆಗೆ ಸ್ಟಾರ್​ ನಟರೇ ಹೇಳಿಲ್ಲ ಉತ್ತರ; ನೀವು ಉತ್ತರಿಸಬಲ್ಲಿರಾ?

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು