AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಜಾನೆ 4 ಗಂಟೆ ಜಿಮ್​ ಸೆಷನ್​ ವಿಡಿಯೋ ಹಂಚಿಕೊಂಡು ಟ್ರೋಲ್​ ಆದ ಕಪಿಲ್​ ಶರ್ಮಾ

ಈ ವಿಡಿಯೋಗೆ ಹಲವರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವರು ಕಪಿಲ್​ ಶರ್ಮಾ ಅವರ ಬದ್ಧತೆಯನ್ನು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಫನ್ನಿಯಾಗಿ ಕಮೆಂಟ್​ ಮಾಡಿದ್ದಾರೆ.

ಮುಂಜಾನೆ 4 ಗಂಟೆ ಜಿಮ್​ ಸೆಷನ್​ ವಿಡಿಯೋ ಹಂಚಿಕೊಂಡು ಟ್ರೋಲ್​ ಆದ ಕಪಿಲ್​ ಶರ್ಮಾ
ಕಪಿಲ್​ ಶರ್ಮಾ-ಅಕ್ಷಯ್​ ಕುಮಾರ್​
TV9 Web
| Edited By: |

Updated on:Mar 16, 2022 | 6:00 PM

Share

ನಟ, ನಿರೂಪಕ ಕಪಿಲ್​ ಶರ್ಮಾ (Kapil Sharma) ಇತ್ತೀಚೆಗೆ ಸಖತ್​ ಸುದ್ದಿಯಲ್ಲಿದ್ದಾರೆ. ‘ದಿ ಕಪಿಲ್​ ಶರ್ಮಾ ಶೋ’ಗೆ (The Kapil Sharma Show) ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ತಂಡಕ್ಕೆ ಆಹ್ವಾನ ನೀಡೋಕೆ ಅವರು ನಿರಾಕರಿಸಿದ್ದರು ಎನ್ನುವ ವಿಚಾರ ದೊಡ್ಡ ಚರ್ಚೆ ಹುಟ್ಟುಹಾಕಿತ್ತು. ಈಗ ಕಪಿಲ್​ ಶರ್ಮಾ ಮತ್ತೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣವಾಗಿದ್ದು, ಅವರು ಮುಂಜಾನೆ ನಾಲ್ಕು ಗಂಟೆಗೆ ವರ್ಕೌಟ್​ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದು. ಈ ವಿಡಿಯೋಗೆ ನಾನಾ ರೀತಿಯಲ್ಲಿ ಕಮೆಂಟ್​ಗಳು ಬರುತ್ತಿವೆ. ಅನೇಕರು ಕಪಿಲ್ ಶರ್ಮಾ ಅವರನ್ನು ಕಾಲೆಳೆಯುತ್ತಿದ್ದಾರೆ.

ಮುಂಜಾನೆ ನಾಲ್ಕು ಗಂಟೆಗೆ ಜಿಮ್​ ಮಾಡುತ್ತಿರುವುದಾಗಿ ಕಪಿಲ್​ ಶರ್ಮಾ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.  ‘ಆರು ಗಂಟೆಗೆ ಕೆಲಸಕ್ಕೆ ಹಾಜರಾಗಬೇಕು ಎಂದಾದಾಗ ನಾಲ್ಕು ಗಂಟೆಗೆ ಜಿಮ್​ಗೆ ತೆರಳಬೇಕು’ ಎಂದು ಅವರು ವಿಡಿಯೋಗೆ ಕ್ಯಾಪ್ಶನ್​ ನೀಡಿದ್ದಾರೆ. ಇದಕ್ಕೆ ಹಲವರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವರು ಕಪಿಲ್​ ಶರ್ಮಾ ಅವರ ಬದ್ಧತೆಯನ್ನು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಫನ್ನಿಯಾಗಿ ಕಮೆಂಟ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್ ಅವರು ಮುಂಜಾನೆ ನಾಲ್ಕು ಗಂಟೆಗೆ ಎದ್ದು ಜಿಮ್​ ಮಾಡುವ ಹವ್ಯಾಸ ಇಟ್ಟುಕೊಂಡಿದ್ದಾರೆ. ಅನೇಕ ಬಾರಿ ಈ ವಿಚಾರವನ್ನು ಅವರು ಹೇಳಿಕೊಂಡಿದ್ದಿದೆ. ಇದೇ ವಿಚಾರ ಇಟ್ಟುಕೊಂಡು ಕಪಿಲ್​ ಅವರ ಕಾಲು ಎಳೆಯಲಾಗಿದೆ. ‘ಅಕ್ಷಯ್​ ಕುಮಾರ್ ಬರುತ್ತೇನೆ ಎಂದು ಹೇಳಿರಬೇಕು ಅದಕ್ಕೆ ನೀವು ಇಷ್ಟು ಬೇಗ ಎದ್ದಿದ್ದೀರಾ’ ಎಂದು ಅಭಿಮಾನಿಯೋರ್ವ ಕಮೆಂಟ್​ ಮಾಡಿದ್ದಾರೆ. ‘ಅಕ್ಷಯ್​ ಕುಮಾರ್ ಅವರು ನಿಮಗೆ ತರಬೇತಿ ನೀಡುತ್ತಿದ್ದಾರೆ ಅನಿಸುತ್ತಿದೆ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು, ‘ಕಪಿಲ್ ಶರ್ಮಾ ಶೋಗೆ ಯಾವುದೋ ಜನಪ್ರಿಯ ಹೀರೋಯಿನ್​ ಬರುತ್ತಿದ್ದಾರೆ. ಹೀಗಾಗಿ, ಅವರು ಫಿಟ್​ ಆಗುತ್ತಿದ್ದಾರೆ’ ಎಂದಿದ್ದಾರೆ.

ಹುಟ್ಟಿತ್ತು ವಿವಾದ..

1990ರಲ್ಲಿ ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದುಗಳನ್ನು ಹತ್ಯೆ ಮಾಡಿದ ಕಥೆ ಆಧರಿಸಿ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಸಿದ್ಧಗೊಂಡಿದೆ. ಈ ಸಿನಿಮಾ ತಂಡವನ್ನು ಕಪಿಲ್​ ಶರ್ಮಾ ಶೋಗೆ ಕರೆಯದೇ ಇರೋದಕ್ಕೆ ಕೆಲವರು ಅಸಮಾಧಾನಗೊಂಡಿದ್ದರು. ಈ ಬಗ್ಗೆ ಕಪಿಲ್​ ಶರ್ಮಾ ಅವರನ್ನು ಪ್ರಶ್ನೆ ಮಾಡಿದ್ದರು. ಆದರೆ, ಇದು ಸುಳ್ಳು ಎಂದು ಕಪಿಲ್​ ಶರ್ಮಾ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಅಕ್ಕಿಗೆ ಕಪಿಲ್​ ಶರ್ಮಾ ನಂಬಿಕೆ ದ್ರೋಹ​; ‘ದಿ ಕಪಿಲ್​ ಶರ್ಮಾ ಶೋ’ ಬೈಕಾಟ್​ ಮಾಡಿದ ಅಕ್ಷಯ್​ ಕುಮಾರ್

ಒಟಿಟಿ ಸಂಸ್ಥೆಯಿಂದ 135 ಕೋಟಿ ರೂಪಾಯಿ ಬಾಚಿದ ಅಕ್ಷಯ್​ ಕುಮಾರ್ ಕುಮಾರ್ ಸಿನಿಮಾ

Published On - 5:59 pm, Wed, 16 March 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು