AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಜಾನೆ 4 ಗಂಟೆ ಜಿಮ್​ ಸೆಷನ್​ ವಿಡಿಯೋ ಹಂಚಿಕೊಂಡು ಟ್ರೋಲ್​ ಆದ ಕಪಿಲ್​ ಶರ್ಮಾ

ಈ ವಿಡಿಯೋಗೆ ಹಲವರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವರು ಕಪಿಲ್​ ಶರ್ಮಾ ಅವರ ಬದ್ಧತೆಯನ್ನು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಫನ್ನಿಯಾಗಿ ಕಮೆಂಟ್​ ಮಾಡಿದ್ದಾರೆ.

ಮುಂಜಾನೆ 4 ಗಂಟೆ ಜಿಮ್​ ಸೆಷನ್​ ವಿಡಿಯೋ ಹಂಚಿಕೊಂಡು ಟ್ರೋಲ್​ ಆದ ಕಪಿಲ್​ ಶರ್ಮಾ
ಕಪಿಲ್​ ಶರ್ಮಾ-ಅಕ್ಷಯ್​ ಕುಮಾರ್​
TV9 Web
| Edited By: |

Updated on:Mar 16, 2022 | 6:00 PM

Share

ನಟ, ನಿರೂಪಕ ಕಪಿಲ್​ ಶರ್ಮಾ (Kapil Sharma) ಇತ್ತೀಚೆಗೆ ಸಖತ್​ ಸುದ್ದಿಯಲ್ಲಿದ್ದಾರೆ. ‘ದಿ ಕಪಿಲ್​ ಶರ್ಮಾ ಶೋ’ಗೆ (The Kapil Sharma Show) ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ತಂಡಕ್ಕೆ ಆಹ್ವಾನ ನೀಡೋಕೆ ಅವರು ನಿರಾಕರಿಸಿದ್ದರು ಎನ್ನುವ ವಿಚಾರ ದೊಡ್ಡ ಚರ್ಚೆ ಹುಟ್ಟುಹಾಕಿತ್ತು. ಈಗ ಕಪಿಲ್​ ಶರ್ಮಾ ಮತ್ತೆ ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣವಾಗಿದ್ದು, ಅವರು ಮುಂಜಾನೆ ನಾಲ್ಕು ಗಂಟೆಗೆ ವರ್ಕೌಟ್​ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದು. ಈ ವಿಡಿಯೋಗೆ ನಾನಾ ರೀತಿಯಲ್ಲಿ ಕಮೆಂಟ್​ಗಳು ಬರುತ್ತಿವೆ. ಅನೇಕರು ಕಪಿಲ್ ಶರ್ಮಾ ಅವರನ್ನು ಕಾಲೆಳೆಯುತ್ತಿದ್ದಾರೆ.

ಮುಂಜಾನೆ ನಾಲ್ಕು ಗಂಟೆಗೆ ಜಿಮ್​ ಮಾಡುತ್ತಿರುವುದಾಗಿ ಕಪಿಲ್​ ಶರ್ಮಾ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.  ‘ಆರು ಗಂಟೆಗೆ ಕೆಲಸಕ್ಕೆ ಹಾಜರಾಗಬೇಕು ಎಂದಾದಾಗ ನಾಲ್ಕು ಗಂಟೆಗೆ ಜಿಮ್​ಗೆ ತೆರಳಬೇಕು’ ಎಂದು ಅವರು ವಿಡಿಯೋಗೆ ಕ್ಯಾಪ್ಶನ್​ ನೀಡಿದ್ದಾರೆ. ಇದಕ್ಕೆ ಹಲವರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕೆಲವರು ಕಪಿಲ್​ ಶರ್ಮಾ ಅವರ ಬದ್ಧತೆಯನ್ನು ಮೆಚ್ಚಿಕೊಂಡಿದ್ದಾರೆ. ಇನ್ನೂ ಕೆಲವರು ಫನ್ನಿಯಾಗಿ ಕಮೆಂಟ್​ ಮಾಡಿದ್ದಾರೆ.

ಅಕ್ಷಯ್​ ಕುಮಾರ್ ಅವರು ಮುಂಜಾನೆ ನಾಲ್ಕು ಗಂಟೆಗೆ ಎದ್ದು ಜಿಮ್​ ಮಾಡುವ ಹವ್ಯಾಸ ಇಟ್ಟುಕೊಂಡಿದ್ದಾರೆ. ಅನೇಕ ಬಾರಿ ಈ ವಿಚಾರವನ್ನು ಅವರು ಹೇಳಿಕೊಂಡಿದ್ದಿದೆ. ಇದೇ ವಿಚಾರ ಇಟ್ಟುಕೊಂಡು ಕಪಿಲ್​ ಅವರ ಕಾಲು ಎಳೆಯಲಾಗಿದೆ. ‘ಅಕ್ಷಯ್​ ಕುಮಾರ್ ಬರುತ್ತೇನೆ ಎಂದು ಹೇಳಿರಬೇಕು ಅದಕ್ಕೆ ನೀವು ಇಷ್ಟು ಬೇಗ ಎದ್ದಿದ್ದೀರಾ’ ಎಂದು ಅಭಿಮಾನಿಯೋರ್ವ ಕಮೆಂಟ್​ ಮಾಡಿದ್ದಾರೆ. ‘ಅಕ್ಷಯ್​ ಕುಮಾರ್ ಅವರು ನಿಮಗೆ ತರಬೇತಿ ನೀಡುತ್ತಿದ್ದಾರೆ ಅನಿಸುತ್ತಿದೆ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು, ‘ಕಪಿಲ್ ಶರ್ಮಾ ಶೋಗೆ ಯಾವುದೋ ಜನಪ್ರಿಯ ಹೀರೋಯಿನ್​ ಬರುತ್ತಿದ್ದಾರೆ. ಹೀಗಾಗಿ, ಅವರು ಫಿಟ್​ ಆಗುತ್ತಿದ್ದಾರೆ’ ಎಂದಿದ್ದಾರೆ.

ಹುಟ್ಟಿತ್ತು ವಿವಾದ..

1990ರಲ್ಲಿ ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದುಗಳನ್ನು ಹತ್ಯೆ ಮಾಡಿದ ಕಥೆ ಆಧರಿಸಿ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಸಿದ್ಧಗೊಂಡಿದೆ. ಈ ಸಿನಿಮಾ ತಂಡವನ್ನು ಕಪಿಲ್​ ಶರ್ಮಾ ಶೋಗೆ ಕರೆಯದೇ ಇರೋದಕ್ಕೆ ಕೆಲವರು ಅಸಮಾಧಾನಗೊಂಡಿದ್ದರು. ಈ ಬಗ್ಗೆ ಕಪಿಲ್​ ಶರ್ಮಾ ಅವರನ್ನು ಪ್ರಶ್ನೆ ಮಾಡಿದ್ದರು. ಆದರೆ, ಇದು ಸುಳ್ಳು ಎಂದು ಕಪಿಲ್​ ಶರ್ಮಾ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಅಕ್ಕಿಗೆ ಕಪಿಲ್​ ಶರ್ಮಾ ನಂಬಿಕೆ ದ್ರೋಹ​; ‘ದಿ ಕಪಿಲ್​ ಶರ್ಮಾ ಶೋ’ ಬೈಕಾಟ್​ ಮಾಡಿದ ಅಕ್ಷಯ್​ ಕುಮಾರ್

ಒಟಿಟಿ ಸಂಸ್ಥೆಯಿಂದ 135 ಕೋಟಿ ರೂಪಾಯಿ ಬಾಚಿದ ಅಕ್ಷಯ್​ ಕುಮಾರ್ ಕುಮಾರ್ ಸಿನಿಮಾ

Published On - 5:59 pm, Wed, 16 March 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ