ಪೋಷಕರೇ ಹುಷಾರ್​! ಬೆತ್ತಲಾಗ್ತಾರೆ ಬಿಗ್​ ಬಾಸ್​ ಸ್ಪರ್ಧಿಗಳು; ವೀಕ್ಷಕರೇ ಶಿಕ್ಷೆ ಕೊಡಬಹುದು

Bigg Boss OTT: ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಯಾರಿಗೆ ಟ್ರೋಫಿ ಸಿಗಲಿದೆ ಎಂಬುದಕ್ಕೆ ಆ.8ರಂದು ಉತ್ತರ ಸಿಗಲಿದೆ. ಅದೇ ದಿನ ಹಿಂದಿಯಲ್ಲಿ ‘ಬಿಗ್​ ಬಾಸ್​ ಓಟಿಟಿ’ ಶುರುವಾಗಲಿದೆ.

ಪೋಷಕರೇ ಹುಷಾರ್​! ಬೆತ್ತಲಾಗ್ತಾರೆ ಬಿಗ್​ ಬಾಸ್​ ಸ್ಪರ್ಧಿಗಳು; ವೀಕ್ಷಕರೇ ಶಿಕ್ಷೆ ಕೊಡಬಹುದು
ಪೋಷಕರೇ ಹುಷಾರ್​! ಬೆತ್ತಲಾಗ್ತಾರೆ ಬಿಗ್​ ಬಾಸ್​ ಸ್ಪರ್ಧಿಗಳು; ವೀಕ್ಷಕರೇ ಶಿಕ್ಷೆ ಕೊಡಬಹುದು
Follow us
| Updated By: ಮದನ್​ ಕುಮಾರ್​

Updated on: Aug 04, 2021 | 7:57 AM

ಬಿಗ್​ ಬಾಸ್​ (Bigg Boss) ರಿಯಾಲಿಟಿ ಶೋಗೆ ದೊಡ್ಡ ಪ್ರೇಕ್ಷಕವರ್ಗ ಇದೆ. ಮನೆಮಂದಿಯೆಲ್ಲ ಕುಳಿತು ಈ ಕಾರ್ಯಕ್ರಮವನ್ನು ನೋಡುತ್ತಾರೆ. ಮಕ್ಕಳು ಕೂಡ ಬಿಗ್​ ಬಾಸ್​ಗೆ ಫಿದಾ ಆಗಿದ್ದಾರೆ. ಆದರೆ ಇನ್ಮುಂದೆ ಬಿಗ್​ ಬಾಸ್​ ಎಂದರೆ ಸ್ವಲ್ಪ ಎಚ್ಚರಿಕೆಯಿಂದ ನೋಡಬೇಕಾದ ಸಂದರ್ಭ ಎದುರಾಗುತ್ತಿದೆ. ಈಗಾಗಲೇ ತಿಳಿದಿರುವಂತೆ ಕನ್ನಡ (BBK), ತೆಲುಗು, ಮಲಯಾಳಂ ಭಾಷೆಗಳ ಬಿಗ್​ ಬಾಸ್​ಗೆ ಹೋಲಿಸಿದರೆ ಹಿಂದಿ ಬಿಗ್​ ಬಾಸ್​ ಕೊಂಚ ಬೋಲ್ಡ್​ ಆಗಿರುತ್ತದೆ. ಈಗ ಅದನ್ನೂ ಮೀರಿ, ‘ಬಿಗ್​ ಬಾಸ್​ ಓಟಿಟಿ’ (Bigg Boss OTT) ಎಂಬ ಹೊಸ ಶೈಲಿಯನ್ನು ಪರಿಚಯಿಸಲಾಗುತ್ತಿದೆ. ಇಲ್ಲಿ ಸ್ಪರ್ಧಿಗಳು ಬೆತ್ತಲಾದರೂ ಅಚ್ಚರಿ ಏನಿಲ್ಲ!

ಆ.8ರಿಂದ ‘ಬಿಗ್​ ಬಾಸ್​ ಓಟಿಟಿ’ ಪ್ರಸಾರ ಆಗಲಿದೆ. ವೂಟ್​ ಓಟಿಟಿ ಪ್ಲಾಟ್​ಫಾರ್ಮ್​ನಲ್ಲಿ ಇದು ಪ್ರಸಾರ ಆಗಲಿದ್ದು, ಖ್ಯಾತ ನಿರ್ಮಾಪಕ/ನಿರ್ದೇಶಕ ಕರಣ್​ ಜೋಹರ್​ ಅವರು ಇದಕ್ಕೆ ನಿರೂಪಣೆ ಮಾಡಲಿದ್ದಾರೆ. ಇಲ್ಲಿನ ನಿಯಮಗಳೇ ಬೇರೆ. ಅದರ ಝಲಕ್​ ತೋರಿಸುವ ಸಲುವಾಗಿ ಒಂದು ಪ್ರೋಮೋ ಬಿಡುಗಡೆ ಮಾಡಲಾಗಿದೆ. ಅದನ್ನು ನೋಡಿದರೆ ಫ್ಯಾಮಿಲಿ ಆಡಿಯನ್ಸ್​ಗೆ ಶಾಕ್​ ಆಗುವುದು ಗ್ಯಾರಂಟಿ.

‘ಸಲ್ಮಾನ್​ ಖಾನ್​ ಅವರು ಟಿವಿಯಲ್ಲಿ ಸೂಟು​ ಬೂಟು ಧರಿಸಿ ನಿರೂಪಣೆ ಮಾಡುತ್ತಾರೆ. ನಾನು ವೂಟ್​ನಲ್ಲಿ ಬಿಗ್​ ಬಾಸ್​ ನಿರೂಪಣೆ ಮಾಡುತ್ತೇನೆ. ಇಲ್ಲಿ ಇಂಥ ಬಟ್ಟೆಯನ್ನು (ನಗ್ನ) ಸ್ಪರ್ಧಿಗಳು ಧರಿಸಬೇಕು. ಕಿಸ್​​ ಮಾಡುವಂತಹ ಬೋಲ್ಡ್​ ಟಾಸ್ಕ್​ಗಳು ಇರುತ್ತವೆ. ಸ್ಪರ್ಧಿಗಳಿಗೆ ವೀಕ್ಷಕರೇ ಶಿಕ್ಷೆ ಕೊಡಬಹುದು’ ಎಂದು ಪ್ರೋಮೋದಲ್ಲಿ ಕರಣ್​ ಜೋಹರ್​ ಹೇಳಿದ್ದಾರೆ. ಇದು ಮಕ್ಕಳು ಜೊತೆ ಕುಳಿತು ನೋಡುವಂತಹ ಶೋ ಅಲ್ಲವೇ ಅಲ್ಲ ಎಂಬುದಕ್ಕೆ ಈ ಪ್ರೋಮೋ ಸಾಕ್ಷಿ ನೀಡುತ್ತಿದೆ.

View this post on Instagram

A post shared by Karan Johar (@karanjohar)

ಇನ್ನು, ಕನ್ನಡ ಬಿಗ್​ ಬಾಸ್​ ಫಿನಾಲೆಗೆ ದಿನಗಣನೆ ಆರಂಭ ಆಗಿದೆ. ಆ.8ರಂದು ಅದ್ದೂರಿಯಾಗಿ ಫಿನಾಲೆ ನಡೆಯಲಿದೆ. ಸದ್ಯ ಮನೆಯಲ್ಲಿ ವೈಷ್ಣವಿ ಗೌಡ, ದಿವ್ಯಾ ಸುರೇಶ್​, ದಿವ್ಯಾ ಉರುಡುಗ, ಪ್ರಶಾಂತ್​ ಸಂಬರಗಿ, ಅರವಿಂದ್​ ಕೆಪಿ, ಮಂಜು ಪಾವಗಡ ನಡುವೆ ಸ್ಪರ್ಧೆ ಮುಂದುವರಿದಿದೆ. ಅಂತಿಮವಾಗಿ ಯಾರಿಗೆ ಟ್ರೋಫಿ ಸಿಗಲಿದೆ ಎಂಬುದಕ್ಕೆ ಆ.8ರಂದು ಉತ್ತರ ಸಿಗಲಿದೆ. ಅದೇ ದಿನ ಹಿಂದಿಯಲ್ಲಿ ‘ಬಿಗ್​ ಬಾಸ್​ ಓಟಿಟಿ’ ಶುರುವಾಗಲಿದೆ.

ಇದನ್ನೂ ಓದಿ:

ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ; ದಿನಕ್ಕೆ 50 ಲಕ್ಷ ಸಂಭಾವನೆ ಕೇಳಿದ ಸ್ಪರ್ಧಿ

ಬಿಗ್​ ಬಾಸ್​ನಲ್ಲಿ ‘ಕಣ್ಣೇ ಅದಿರಿಂದಿ’ ಗಾಯಕಿ ಮಂಗ್ಲಿ? ಹೆಚ್ಚಿತು ವೀಕ್ಷಕರ ನಿರೀಕ್ಷೆ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ