AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್​ ಜೋಹರ್ ಹೆಗಲಿಗೆ ಹಿಂದಿ ಬಿಗ್​ ಬಾಸ್​ ನಿರೂಪಣೆ; ಹಾಗಾದರೆ, ಸಲ್ಮಾನ್​ ಖಾನ್​ ಕಥೆ ಏನು?

ಸಾಮಾನ್ಯವಾಗಿ ಬಿಗ್​ ಬಾಸ್ ಪ್ರತೀ ಸೀಸನ್​ 100ರಿಂದ 120 ದಿನಗಳ ಕಾಲ ನಡೆಯುತ್ತದೆ. ಅಂದರೆ ನಾಲ್ಕು ತಿಂಗಳಿಗೆ ಬಿಗ್​ ಬಾಸ್​ ಪೂರ್ಣಗೊಳ್ಳುತ್ತದೆ. ಆದರೆ, ಈಗ ಇದನ್ನು ಎರಡು ತಿಂಗಳು ಹೆಚ್ಚುವರಿಯಾಗಿ ನಡೆಸೋಕೆ ವಾಹಿನಿ ನಿರ್ಧರಿಸಿದೆ.

ಕರಣ್​ ಜೋಹರ್ ಹೆಗಲಿಗೆ ಹಿಂದಿ ಬಿಗ್​ ಬಾಸ್​ ನಿರೂಪಣೆ; ಹಾಗಾದರೆ, ಸಲ್ಮಾನ್​ ಖಾನ್​ ಕಥೆ ಏನು?
ಕರಣ್ ಜೋಹರ್
TV9 Web
| Edited By: |

Updated on: Jul 24, 2021 | 2:45 PM

Share

‘ಹಿಂದಿ ಬಿಗ್​ ಬಾಸ್​ ಸೀಸನ್​ 15’ ಆಗಸ್ಟ್​ 8ರಿಂದ ಆರಂಭಗೊಳ್ಳುತ್ತಿದೆ. ವೂಟ್​ ಆ್ಯಪ್​ಗೆ ಈ ಬಾರಿ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ಹೀಗಾಗಿ, ಬಿಗ್​ ಬಾಸ್​ ಒಟಿಟಿಯನ್ನು ವೂಟ್​ ಪರಿಚಯಿಸಿದೆ. ಮೊದಲು ಆರು ವಾರದ ಎಪಿಸೋಡ್​ಗಳು ವೂಟ್​ನಲ್ಲಿ ಮಾತ್ರ ಪ್ರಸಾರವಾಗಲಿದ್ದು ನಂತರ ಟಿವಿಗೆ ಶಿಫ್ಟ್​ ಆಗಲಿದೆ. ಒಟಿಟಿ ಶೋಅನ್ನು ನಡೆಸಿಕೊಡೋಕೆ ಖ್ಯಾತ ಬಾಲಿವುಡ್​ ನಿರ್ಮಾಪಕ ಕರಣ್​ ಜೋಹರ್ ಆಗಮಿಸಿದ್ದಾರೆ. ಟಿವಿಯಲ್ಲಿ ಪ್ರಸಾರವಾಗುವ ಶೋ ಅನ್ನು ಸಲ್ಮಾನ್ ಖಾನ್​ ನಡೆಸಿಕೊಡಲಿದ್ದಾರೆ. 

ಸಾಮಾನ್ಯವಾಗಿ ಬಿಗ್​ ಬಾಸ್ ಪ್ರತೀ ಸೀಸನ್​ 100ರಿಂದ 120 ದಿನಗಳ ಕಾಲ ನಡೆಯುತ್ತದೆ. ಅಂದರೆ ನಾಲ್ಕು ತಿಂಗಳಿಗೆ ಬಿಗ್​ ಬಾಸ್​ ಪೂರ್ಣಗೊಳ್ಳುತ್ತದೆ. ಆದರೆ, ಈಗ ಇದನ್ನು ಎರಡು ತಿಂಗಳು ಹೆಚ್ಚುವರಿಯಾಗಿ ನಡೆಸೋಕೆ ವಾಹಿನಿ ನಿರ್ಧರಿಸಿದೆ. ಇದು ತುಂಬಾನೇ ದೀರ್ಘ ಎನಿಸಿರುವುದರಿಂದ ಮೊದಲ ಆರು ವಾರ ಈ ಶೋ ಅನ್ನು ಒಟಿಟಿಯಲ್ಲಿ ಪ್ರಸಾರ ಮಾಡುವ ನಿರ್ಧಾರಕ್ಕೆ ಬರಲಾಗಿದೆ. ಈಗ ಈ ಶೋ ಅನ್ನು ಕರಣ್​ ನಡೆಸಿಕೊಡಲಿದ್ದಾರೆ.

ಕರಣ್​ ಅವರನ್ನು ಈ ಶೋಗೆ ಆಯ್ಕೆ ಮಾಡಿಕೊಳ್ಳೋಕೂ ಒಂದು ಕಾರಣವಿದೆ. ಕರಣ್​ ಜೋಹರ್​ ಈಗಾಗಲೇ ಸಾಕಷ್ಟು ಶೋಗಳನ್ನು ಅದ್ಭುತವಾಗಿ ನಡೆಸಿಕೊಟ್ಟಿದ್ದಾರೆ. ಕಾಫಿ ವಿತ್​ ಕರಣ್​ಗೆ ದೊಡ್ಡ ಮಟ್ಟದ ವೀಕ್ಷಕರ ವಲಯ ಇದೆ. ಹೀಗಾಗಿ, ಬಿಗ್​ ಬಾಸ್​ ಒಟಿಟಿಯನ್ನು ಅವರು ನಡೆಸಿಕೊಟ್ಟರೆ ವೀಕ್ಷಕರನ್ನು ಸೆಳೆದುಕೊಳ್ಳಬಹುದು ಎಂಬುದು ವಾಹಿನಿಯ ಲೆಕ್ಕಾಚಾರ.

‘ಬಿಗ್​ ಬಾಸ್​ಗೆ ನಾನುನ ನನ್ನ ತಾಯಿ ದೊಡ್ಡ ಅಭಿಮಾನಿಗಳಾಗಿದ್ದೇವೆ ​​​. ಆದ್ದರಿಂದ, ಒಂದೇ ಒಂದು ದಿನವೂ ಬಿಗ್​ ಬಾಸ್​ ಸಂಚಿಕೆ ಮಿಸ್​ ಮಾಡಿಕೊಂಡಿಲ್ಲ. ವೀಕ್ಷಕನಾಗಿ ಇದು ಸಾಕಷ್ಟು ಮನರಂಜನೆ ನೀಡಿದೆ. ನಾನು ದಶಕಗಳಿಂದ ಈ ಶೋ ಎಂಜಾಯ್​ ಮಾಡುತ್ತಿದ್ದೇನೆ. ಈಗ ಬಿಗ್​ ಬಾಸ್​ ಒಟಿಟಿ ಶೋ ನಡೆಸಿಕೊಡುತ್ತಿರುವುದಕ್ಕೆ ಖುಷಿ ಆಗಿದೆ. ನನ್ನ ತಾಯಿಯ ಕನಸು ಈಗ ಈಡೇರುತ್ತಿದೆ’ ಎಂದಿದ್ದಾರೆ ಕರಣ್​.

ಇದನ್ನೂ ಓದಿ: ಈ ವಾರ ಡಬಲ್​ ಎಲಿಮಿನೇಷನ್? ಸೂಚನೆ ಕೊಟ್ಟ ಬಿಗ್​ ಬಾಸ್​; ಔಟ್​ ಆಗೋರು ಯಾರು?

ರಣವೀರ್​ ಸಿಂಗ್-ಆಲಿಯಾ ಭಟ್​ ಹೊಸ ಪ್ರೇಮ್​ ಕಹಾನಿ; ಇದರ ಸೂತ್ರಧಾರ ಕರಣ್​ ಜೋಹರ್​

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ