AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಶೋನಲ್ಲಿ ಅಪಹಾಸ್ಯ; ಅಸಮಾಧಾನಗೊಂಡ ಕರಣ್ ಜೋಹರ್ ಏನು ಮಾಡಿದ್ರು ನೋಡಿ

‘ನಾನು ನನ್ನ ತಾಯಿಯೊಂದಿಗೆ ಟಿವಿ ನೋಡುತ್ತಿದ್ದೆ. ನಾನು ವಾಹಿನಿಯೊಂದರಲ್ಲಿ ಪ್ರಸಾರ ಕಾಣುತ್ತಿರುವ ಕಾಮಿಡಿ ರಿಯಾಲಿಟಿ ಶೋನ ಪ್ರೋಮೋವನ್ನು ನೋಡಿದೆ. ಅದರಲ್ಲಿ ಓರ್ವ ಹಾಸ್ಯನಟ ನನ್ನನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಅನುಕರಿಸುತ್ತಿದ್ದರು' ಎಂದು ಕರಣ್ ಜೋಹರ್ ತಮ್ಮ ಬರಹ ಆರಂಭಿಸಿದ್ದಾರೆ.

ರಿಯಾಲಿಟಿ ಶೋನಲ್ಲಿ ಅಪಹಾಸ್ಯ; ಅಸಮಾಧಾನಗೊಂಡ ಕರಣ್ ಜೋಹರ್ ಏನು ಮಾಡಿದ್ರು ನೋಡಿ
ಕರಣ್
 ಶ್ರೀಲಕ್ಷ್ಮೀ ಎಚ್
| Edited By: |

Updated on: May 06, 2024 | 11:18 AM

Share

ಬಾಲಿವುಡ್ ಇಂಡಸ್ಟ್ರಿಯ ಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ (Karan Johar) ಕಾಮಿಡಿ ಶೋ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಶೋನಲ್ಲಿ ಕರಣ್ ಅವರನ್ನು ತುಂಬಾ ಕೆಟ್ಟದಾಗಿ ಬಿಂಬಿಸಲಾಗಿತ್ತು. ಭಾನುವಾರ ರಾತ್ರಿ ಕರಣ್ ಇನ್​ಸ್ಟಾಗ್ರಾಮ್ ಸ್ಟೇಟಸ್​ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ‘ಮ್ಯಾಡ್ನೆಸ್ ಮಚಾಯೆಂಗೆ ಇಂಡಿಯಾ ಕೋ ಹಸಾಯೆಂಗೆ’ ಶೋನಲ್ಲಿ ಕೇತನ್ ಸಿಂಗ್ ಎಂಬುವವರು ಕರಣ್ ಜೋಹರ್ ಅವರನ್ನು ಅನುಕರಿಸಿ ಮಾತನಾಡಿದ್ದರು. ಇವರನ್ನು ಉದ್ದೇಶಿಸಿ ಕರಣ್ ಜೋಹರ್ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.

‘ನಾನು ನನ್ನ ತಾಯಿಯೊಂದಿಗೆ ಟಿವಿ ನೋಡುತ್ತಿದ್ದೆ. ನಾನು ವಾಹಿನಿಯೊಂದರಲ್ಲಿ ಪ್ರಸಾರ ಕಾಣುತ್ತಿರುವ ಕಾಮಿಡಿ ರಿಯಾಲಿಟಿ ಶೋನ ಪ್ರೋಮೋವನ್ನು ನೋಡಿದೆ. ಅದರಲ್ಲಿ ಓರ್ವ ಹಾಸ್ಯನಟ ನನ್ನನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಅನುಕರಿಸುತ್ತಿದ್ದರು’ ಎಂದು ತಮ್ಮ ಬರಹ ಆರಂಭಿಸಿದ್ದಾರೆ ಕರಣ್ ಜೋಹರ್.

‘ಟ್ರೋಲರ್‌ಗಳು, ಮುಖವಿಲ್ಲದ ಮತ್ತು ಹೆಸರಿಲ್ಲದ ಜನರಿಂದ ನಾನು ಇದನ್ನು ನಿರೀಕ್ಷಿಸುತ್ತೇನೆ. ಆದರೆ ನಿಮ್ಮದೇ ಇಂಡಸ್ಟ್ರಿಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ಮಾಡುತ್ತಿರುವ ವ್ಯಕ್ತಿಯನ್ನು ಅವಮಾನಿಸಿದಾಗ ಬೇಸರ ಆಗುತ್ತದೆ. ಇದರ ಬಗ್ಗೆ ನನಗೆ ಕೋಪವಿಲ್ಲ, ಆದರೆ ನನಗೆ ವಿಷಾದವಿದೆ’ ಎಂದು ಕರಣ್ ಜೋಹರ್ ಅಸಮಾಧಾನ ವ್ಯಕ್ತಪಡಿಸಿದರು.

ಕರಣ್ ಅವರ ಈ ಪೋಸ್ಟ್‌ಗೆ ಹಲವರು ಪ್ರತಿಕ್ರಿಯಿಸಿದ್ದಾರೆ. ನಿರ್ಮಾಪಕಿ ಏಕ್ತಾ ಕಪೂರ್ ಅವರು ಕರಣ್​ನ ಬೆಂಬಲಿಸಿದ್ದಾರೆ. ‘ಇದು ಹಲವು ಬಾರಿ ನಡೆದಿದೆ. ರಿಯಾಲಿಟಿ ಶೋಗಳಲ್ಲಿ, ಅವಾರ್ಡ್ ಫಂಕ್ಷನ್​ಗಳಲ್ಲಿ ಕೆಟ್ಟದಾಗಿ ತಮಾಷೆ ಮಾಡಲಾಗುತ್ತದೆ. ಈ ಅವಾರ್ಡ್ ಕಾರ್ಯಕ್ರಮದಲ್ಲಿ ನೀವು ಹಾಜರಾಗಬೇಕೆಂದು ಅವರು ನಿರೀಕ್ಷಿಸುತ್ತಾರೆ. ಕರಣ್ ದಯವಿಟ್ಟು ನಿಮ್ಮ ಯಾವುದಾದರೂ ಒಂದು ಸಿನಿಮಾವನ್ನು ಇಮಿಟೇಟ್ ಮಾಡಲು ಹೇಳಿ’ ಎಂದು ಬರೆದುಕೊಂಡಿದ್ದಾರೆ. ಏಕ್ತಾ ಅವರ ಈ ಪೋಸ್ಟ್ ಅನ್ನು ಕರಣ್ ಅವರು ತಮ್ಮ ಇನ್​ಸ್ಟಾ ಖಾತೆಯಲ್ಲಿ ರೀ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಜೂ. ಎನ್​ಟಿಆರ್​ ಜತೆ ಕೈ ಜೋಡಿಸಿದ ಕರಣ್​ ಜೋಹರ್​; ‘ದೇವರ’ ದೊಡ್ಡ ಪ್ಲ್ಯಾನ್​

ಕರಣ್ ತಮ್ಮ ಪೋಸ್ಟ್‌ನಲ್ಲಿ ಯಾವುದೇ ಕಾರ್ಯಕ್ರಮ ಅಥವಾ ಚಾನೆಲ್ ಹೆಸರಿಸದಿದ್ದರೂ, ಅನೇಕರು ಇದನ್ನು ಊಹಿಸಿದ್ದಾರೆ. ‘ಮ್ಯಾಡ್ನೆಸ್ ಮಚಾಯೇಂಗೆ ಇಂಡಿಯಾ ಕೋ ಹಸೇಂಗೆ’ ಸೋನಿ ಎಂಟರ್‌ಟೈನ್‌ಮೆಂಟ್ ಟೆಲಿವಿಷನ್‌ನಲ್ಲಿ ಪ್ರಸಾರ ಕಾಣುತ್ತಿದೆ. ಈ ಶೋನಲ್ಲಿ ಕರಣ್ ಅವರ ಕಾರ್ಯಕ್ರಮ ‘ಕಾಫಿ ವಿತ್ ಕರಣ್’ ಶೋನ ‘ಟಾಫಿ ವಿತ್ ಚುರನ್’ ಎಂದು ಮರುನಾಮಕರಣ ಮಾಡಿ ಟೀಕಿಸಲಾಗಿದೆ. ಅನೇಕರು ವಾಹಿನಿ ವಿರುದ್ಧ ಅಪಸ್ವರ ತೆಗೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ