Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಗೆದ್ದವರ ಹಿಂದೆ ಲಾಬಿ ಇದೆಯೋ ಇಲ್ಲವೋ? ನೇರವಾಗಿ ಮಾತಾಡಿದ ಸ್ಪರ್ಧಿ ಕರಣ್​ ಕುಂದ್ರಾ

ಬಿಗ್​ ಬಾಸ್​ ಮನೆಯಲ್ಲಿ ಇದ್ದಾಗಲೇ ಕರಣ್​ ಕುಂದ್ರಾ ಮತ್ತು ತೇಜಸ್ವಿ ಪ್ರಕಾಶ್​ ನಡುವೆ ಪ್ರೀತಿ ಚಿಗುರಿತ್ತು. ಈಗ ತಮ್ಮ ಪ್ರೇಯಸಿಯ ಪರವಾಗಿ ಕರಣ್​ ಬ್ಯಾಟ್​ ಬೀಸಿದ್ದಾರೆ.

ಬಿಗ್​ ಬಾಸ್​ ಗೆದ್ದವರ ಹಿಂದೆ ಲಾಬಿ ಇದೆಯೋ ಇಲ್ಲವೋ? ನೇರವಾಗಿ ಮಾತಾಡಿದ ಸ್ಪರ್ಧಿ ಕರಣ್​ ಕುಂದ್ರಾ
ತೇಜಸ್ವಿ ಪ್ರಕಾಶ್, ಕರಣ್ ಕುಂದ್ರಾ
Follow us
TV9 Web
| Updated By: ಮದನ್​ ಕುಮಾರ್​

Updated on:Feb 04, 2022 | 9:58 AM

ಹಿಂದಿ ಕಿರುತೆರೆಯ ಖ್ಯಾತ ನಟಿ ತೇಜಸ್ವಿ ಪ್ರಕಾಶ್​ (Tejasswi Prakash) ಅವರು ‘ಹಿಂದಿ ಬಿಗ್​ ಬಾಸ್​ 15’ರ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಜ.30ರ ರಾತ್ರಿ ನಡೆದ ಅದ್ದೂರಿ​ ಫಿನಾಲೆಯಲ್ಲಿ ಅವರು ವಿನ್ನರ್​ ಪಟ್ಟ ಪಡೆದುಕೊಂಡರು. ಅವರು ಬಿಗ್​ ಬಾಸ್​ ವಿನ್ನರ್​ (Bigg Boss 15 winner) ಆಗುವುದಕ್ಕೂ ಮುನ್ನವೇ ಅವರ ಜೊತೆ ಒಂದು ಒಪ್ಪಂದ ನಡೆದಿತ್ತು. ಏನದು? ಬಹುನಿರೀಕ್ಷಿತ ‘ನಾಗಿನ್​ 6’ (Naagin 6) ಧಾರಾವಾಹಿಗೆ ತೇಜಸ್ವಿ ಪ್ರಕಾಶ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ತೇಜಸ್ವಿ ಪ್ರಕಾಶ್ ಅವರು ಬಿಗ್​ ಬಾಸ್​ ಮನೆಯೊಳಗೆ ಇದ್ದಾಗಲೇ ಈ ಆಯ್ಕೆ ಪ್ರಕ್ರಿಯೆ ನಡೆದಿತ್ತು! ಹಾಗಾಗಿ ಅವರು ಬಿಗ್​ ಬಾಸ್​ ಗೆಲ್ಲುವುದಕ್ಕೂ, ‘ನಾಗಿನ್​ 6’ ಧಾರಾವಾಹಿಗೆ ಆಯ್ಕೆ ಆಗುವುದಕ್ಕೂ ಏನೋ ಲಿಂಕ್​ ಇದೆ ಎಂಬುದು ಕೆಲವರ ಅನುಮಾನ. ಆ ಕುರಿತು ಬಿಗ್​ ಬಾಸ್​ ಸ್ಪರ್ಧಿ ಕರಣ್​ ಕುಂದ್ರಾ ಮಾತನಾಡಿದ್ದಾರೆ. ಬಿಗ್​ ಬಾಸ್​ ಕಾರ್ಯಕ್ರಮದ ಪಾರದರ್ಶಕತೆ ಬಗ್ಗೆ ಕೆಲವರಿಗೆ ಮೊದಲಿನಿಂದಲೂ ಅನುಮಾನ ಇದೆ.

ಪ್ರತಿ ಬಾರಿ ಬಿಗ್​ ಬಾಸ್​ ವಿನ್ನರ್​ ಹೆಸರು ಘೋಷಣೆ ಆದಾಗ ಜನರಿಗೆ ಒಂದಷ್ಟು ಅನುಮಾನಗಳು ಹುಟ್ಟಿಕೊಳ್ಳುತ್ತವೆ. ಪ್ರೇಕ್ಷಕರ ವೋಟ್​ ಮಾತ್ರವಲ್ಲದೇ ಇನ್ನೂ ಅನೇಕ ಕಾರಣಗಳಿಂದಾಗಿ ವಿನ್ನರ್​ ಯಾರು ಎಂಬುದು ನಿರ್ಧಾರ ಆಗುತ್ತದೆ ಎಂಬ ಅನುಮಾನ ಪ್ರತಿ ಸೀಸನ್​ನಲ್ಲೂ ವ್ಯಕ್ತವಾಗುತ್ತದೆ. ಈಗಲೂ ಹಾಗೆಯೇ ಆಗಿದೆ. ಆದರೆ ಆ ಅನುಮಾನವನ್ನು ಕರಣ್​ ಕುಂದ್ರಾ ತಳ್ಳಿ ಹಾಕಿದ್ದಾರೆ. ಆ ರೀತಿ ಶಂಕೆ ವ್ಯಕ್ತಪಡಿಸುವುದು ನಾನ್​-ಸೆನ್ಸ್​ ಎಂದು ಅವರು ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಇದ್ದಾಗಲೇ ಕರಣ್​ ಕುಂದ್ರಾ ಮತ್ತು ತೇಜಸ್ವಿ ಪ್ರಕಾಶ್​ ನಡುವೆ ಪ್ರೀತಿ ಚಿಗುರಿತ್ತು. ತೇಜಸ್ವಿ ಪ್ರಕಾಶ್​ ವಿನ್ನರ್​ ಆಗಿ ಹೊರಹೊಮ್ಮಿದರೆ, ಮೂರನೇ ಸ್ಥಾನಕ್ಕೆ ಕರಣ್​ ತೃಪ್ತಿಪಟ್ಟುಕೊಂಡರು. ತಮ್ಮ ಪ್ರೇಯಸಿಯ ಗೆಲುವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದವರಿಗೆ ಕರಣ್​ ತಿರುಗೇಟು ನೀಡಿದ್ದಾರೆ. ‘ಇಂಡಿಯಾ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ.

‘ಲಾಬಿ ನಡೆದಿದೆ ಎಂಬುದೆಲ್ಲ ಬರೀ ನಾನ್​ ಸೆನ್ಸ್​ ಅಂತ ನನಗೆ ಅನಿಸುತ್ತದೆ. ನನ್ನನ್ನು ಮತ್ತು ಪ್ರತೀಕ್​ ಸೆಹಜ್ಪಾಲ್​ ಅವರನ್ನು ಅನೇಕ ಜನರು ಇಷ್ಟಪಟ್ಟರು ಮತ್ತು ಬೆಂಬಲ ನೀಡಿದರು. ತೇಜಸ್ವಿ ಗೆಲ್ಲಲಿ ಎಂದು ಬಿಗ್​ ಬಾಸ್​ ಮನೆಯಲ್ಲಿ ಇರುವ ಯಾರೂ ಬಯಸಿರಲಿಲ್ಲ. ಆದರೆ ಆಕೆ ಗೆಲ್ಲಲಿ ಎಂದು ಜನರು ಬಯಸಿದರು. ಅದಕ್ಕಾಗಿಯೇ ವೋಟ್​ ಮಾಡಿದರು. ವೋಟ್​ಗಳನ್ನು ಬದಲಾಯಿಸಲು ಸಾಧ್ಯವಿಲ್ಲ. ಫಲಿತಾಂಶವನ್ನು ಬದಲಿಸಲು ಸಾಧ್ಯವಿಲ್ಲ. ಅಂಥದ್ದೆಲ್ಲ ನಡೆಯುವುದಿಲ್ಲ’ ಎಂದು ಕರಣ್​ ಕುಂದ್ರಾ ಹೇಳಿದ್ದಾರೆ.

ಇದನ್ನೂ ಓದಿ:

Bigg Boss 15 Winner: ನಟಿ ತೇಜಸ್ವಿ ಪ್ರಕಾಶ್​ಗೆ ‘ಬಿಗ್​ ಬಾಸ್​ 15’ ವಿನ್ನರ್​ ಪಟ್ಟ; ಬಹುಮಾನದ ಮೊತ್ತ ಎಷ್ಟು?

‘ಬಿಗ್​ ಬಾಸ್​ 15’ ಗೆದ್ದ ಸುಂದರಿ ತೇಜಸ್ವಿ ಪ್ರಕಾಶ್; ಇಲ್ಲಿವೆ ಖ್ಯಾತ ನಟಿಯ ಮನಮೋಹಕ ಫೋಟೋಗಳು

Published On - 9:58 am, Fri, 4 February 22

ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಕಾರಿನಿಂದ ಗುದ್ದಿ ಕೊಲ್ಲಲು ಯತ್ನ: ಬಚಾವಾದ ಬಗ್ಗೆ ಮುರಳಿ ಪ್ರಸಾದ್ ಮಾತು
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?