AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನ ಮನೆಗೆ ಸಾಮಾನ್ಯರು ಓಡಾಡುವ ಕಾರಿನಲ್ಲಿ ಬಂದ ಖ್ಯಾತ ನಟ; ಅದೇ ತಪ್ಪಾಯ್ತು

ಹಿಂದಿ ಬಿಗ್​ ಬಾಸ್​ ಸೀಸನ್​ 13ರ ವಿನ್ನರ್ ಸಿದ್ದಾರ್ಥ್​  ಶುಕ್ಲಾ ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಅನೇಕರು ಸಿದ್ದಾರ್ಥ್​ ಶುಕ್ಲಾ ತಾಯಿ ಬಳಿ ತೆರಳಿ ಸಾಂತ್ವನ ಹೇಳುತ್ತಿದ್ದಾರೆ.

ಸಾವಿನ ಮನೆಗೆ ಸಾಮಾನ್ಯರು ಓಡಾಡುವ ಕಾರಿನಲ್ಲಿ ಬಂದ ಖ್ಯಾತ ನಟ; ಅದೇ ತಪ್ಪಾಯ್ತು
TV9 Web
| Edited By: |

Updated on: Sep 17, 2021 | 6:57 PM

Share

ಸೆಲೆಬ್ರಿಟಿ ಪಟ್ಟ ಸಿಕ್ಕ ನಂತರ ಸಾಕಷ್ಟು ಮಂದಿ ಐಷಾರಾಮಿ ಕಾರು, ಮನೆ ಖರೀದಿ ಮಾಡುತ್ತಾರೆ. ಸೆಲೆಬ್ರಿಟಿ ಆದವರು ಐಷಾರಾಮಿ ಆಗಿ ಇರಲೇಬೇಕು ಎನ್ನುವ ಮನಸ್ಥಿತಿ ಎಲ್ಲರಲ್ಲೂ ಬೆಳೆದಿದೆ. ಸ್ಟಾರ್​ ಆಗಿದ್ದರೂ ಸರಳವಾಗಿ ಜೀವನ ನಡೆಸುತ್ತಿರುವ ಅನೇಕರಿಗೆ ಇದರಿಂದ ತೊಂದರೆ ಆಗುತ್ತಿದೆ. ಈಗ ಹಿಂದಿ ಕಿರುತೆರೆ ನಟನಿಗೆ ಈ ವಿಚಾರಕ್ಕೆ ಅವಮಾನ ಆಗಿದೆ. ಇದಕ್ಕೆ ಅವರು ಕಠಿಣವಾಗಿ ಪ್ರತಿಕ್ರಿಯಿಸಿದ್ದಾರೆ.

ಹಿಂದಿ ಬಿಗ್​ ಬಾಸ್​ ಸೀಸನ್​ 13ರ ವಿನ್ನರ್ ಸಿದ್ದಾರ್ಥ್​  ಶುಕ್ಲಾ ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಅನೇಕರು ಸಿದ್ದಾರ್ಥ್​ ಶುಕ್ಲಾ ತಾಯಿ ಬಳಿ ತೆರಳಿ ಸಾಂತ್ವನ ಹೇಳುತ್ತಿದ್ದಾರೆ. ನಟ ಕರಣ್​​ವೀರ್ ​ಬೊಹ್ರಾ ಕೂಡ ಸಿದ್ದಾರ್ಥ್​ ತಾಯಿಯನ್ನು ಭೇಟಿ ಆಗಿದ್ದಾರೆ. ಈ ಭೇಟಿಗೆ ತೆರಳುವಾಗ ಅವರು ಮಾರುತಿ ಸುಜುಕಿ ಕಾರನ್ನು ಏರಿ ಹೋಗಿದ್ದಾರೆ. ಅವರು ಬಂದ ಕಾರಿನ ಬೆಲೆ 10 ಲಕ್ಷದ ಆಸುಪಾಸು ಇದೆ. ಇದೇ ವಿಚಾರ ಇಟ್ಟುಕೊಂಡು ಪಾಪರಾಜಿಗಳು ನಟನನ್ನು ಟ್ರೋಲ್​ ಮಾಡಿದ್ದಾರೆ. ಈ ವಿಡಿಯೋ ಪೋಸ್ಟ್ ಮಾಡಿ ಅದಕ್ಕೆ ‘ಬಡವ’ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ. ಇದು ನಟನಿಗೆ ಸಿಟ್ಟು ತರಿಸಿದೆ. ಈ ವಿಚಾರವಾಗಿ ಅವರು ಆಕ್ರೋಶ ಹೊರ ಹಾಕಿದ್ದಾರೆ.

‘ಅನೇಕ ಯುವಕರು ನನ್ನನ್ನು ಫಾಲೋ ಮಾಡುತ್ತಿರುತ್ತಾರೆ. ಯಾವ ಬಟ್ಟೆ ಧರಿಸಬೇಕು, ಯಾವ ಕಾರನ್ನು ಡ್ರೈವ್​ ಮಾಡಬೇಕು ಎನ್ನುವುದನ್ನು ಯೋಚಿಸುತ್ತಿರುತ್ತಾರೆ. ಅವರೆಲ್ಲರಿಗೂ ನಾನು ಮಾದರಿ ಆಗಬಹುದು. ಸಾಮಾನ್ಯರು ಓಡಾಡುವ​ ಕಾರಿನಲ್ಲಿ ಬಂದರೆ ಸಮಸ್ಯೆ ಏನು? ನಾವು ಅಲ್ಲಿಗೆ ಐಷಾರಾಮಿತನ ತೋರಿಸೋಕೆ ಹೋಗಿಲ್ಲ. ಮೃತನ ತಾಯಿಗೆ ಸಾಂತ್ವನ ಹೇಳೋಕೆ ಹೋಗಿದ್ದೆವು. ಅದಕ್ಕೆ ಈ ರೀತಿ ಹೇಳುವುದು ಎಷ್ಟು ಸರಿ’ ಎಂದು ಕರಣ್​ವೀರ್​ ಪ್ರಶ್ನೆ ಮಾಡಿದ್ದಾರೆ.

ಕರಣ್​​ವೀರ್ ಬಳಿ ಐಷಾರಾಮಿ ಕಾರುಗಳಿವೆ. ಆದರೆ, ಅದನ್ನು ಅವರು ಮಾರಾಟ ಮಾಡಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಹಾಗಂತ ಅವರಿಗೆ ಆರ್ಥಿಕ ಸಮಸ್ಯೆ ಬಂದಿದೆ ಎಂದರ್ಥವಲ್ಲ. ಬದಲಿಗೆ, ಈ ಹಣವನ್ನು ಅವರು ಮಗಳ ಶಿಕ್ಷಣಕ್ಕಾಗಿ ಖರ್ಚು ಮಾಡಲು ನಿರ್ಧರಿಸಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಅಲ್ಲದೆ, ನಟನ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: Megha Shetty: ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ಸಿನಿಮಾಗಾಗಿ ಕಾಯ್ತಾ ಇದೀರಾ?; ಇಲ್ಲಿದೆ ಗುಡ್​ ನ್ಯೂಸ್

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬರುತ್ತಿದೆ ಹೊಸ ಧಾರಾವಾಹಿ; ಎಷ್ಟು ಗಂಟೆಗೆ?

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ