AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಿಗೆ ಪ್ರಪೋಸ್ ಮಾಡಿಯೇ ಬಿಟ್ಟ ಕರ್ಣ; ಮಗುವಿನಂತೆ ಮಲಗಿಬಿಟ್ಟ ಕಥಾ ನಾಯಕ

Karna Kannada Serial: ಕರ್ಣ ಧಾರಾವಾಹಿಯಲ್ಲಿ ನಿಧಿಗೆ ಮೊದಲಿಗೆ ಕರ್ಣನ ಮೇಲೆ ಪ್ರೀತಿ ಮೂಡಿತು ಮತ್ತು ಅದನ್ನು ಕರ್ಣನ ಎದುರು ಹಂಚಿಕೊಂಡಳು. ಆದರೆ, ಕರ್ಣ ಇದಕ್ಕೆ ಮೊದಲು ಒಪ್ಪಿಕೊಂಡೇ ಇರಲಿಲ್ಲ. ಆ ಬಳಿಕ ಕರ್ಣನಿಗೂ ನಿಧಾನವಾಗಿ ನಿಧಿಯ ಮೇಲೆ ಪ್ರೀತಿ ಮೂಡುವಂತೆ ಆಯಿತು. ಈಗ ಇಬ್ಬರ ಮಧ್ಯೆ ಸಂಪೂರ್ಣವಾಗಿ ಪ್ರೀತಿ ಮೂಡಿದೆ. ಟೀಚರ್ ಹಾಗೂ ಶಿಷ್ಯೆ ಮಧ್ಯೆ ಪ್ರೀತಿ ಅರಳಿದೆ.

ನಿಧಿಗೆ ಪ್ರಪೋಸ್ ಮಾಡಿಯೇ ಬಿಟ್ಟ ಕರ್ಣ; ಮಗುವಿನಂತೆ ಮಲಗಿಬಿಟ್ಟ ಕಥಾ ನಾಯಕ
Karna (2)
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 14, 2025 | 5:18 PM

Share

‘ಕರ್ಣ’ ಧಾರಾವಾಹಿಯಲ್ಲಿ ಒಂದು ಮಹತ್ವದ ತಿರುವು ಬಂದಿದೆ. ಈ ಧಾರಾವಾಹಿಯಲ್ಲಿ ಕರ್ಣ ಹಾಗೂ ನಿಧಿ ಮಧ್ಯೆ ಪ್ರೀತಿ ಮೂಡಿತ್ತು. ಆದರೆ, ಇದನ್ನು ಯಾರೂ ಹೇಳಿಕೊಂಡಿರಲಿಲ್ಲ. ಕೊನೆಗೂ ಧಾರಾವಾಹಿ  ದೊಡ್ಡ ತಿರುವು ಪಡೆದುಕೊಂಡಿದೆ. ಕರ್ಣನು ನಿಧಿಗೆ ಪ್ರಪೋಸ್ ಮಾಡಿಯೇ ಬಿಟ್ಟಿದ್ದಾನೆ. ಅದೂ ನದಿಯ ಮಧ್ಯೆ ಎಂಬುದು ವಿಶೇಷ. ಈ ಸಂದರ್ಭದ ಪ್ರೋಮೋವನ್ನು ಜೀ ಕನ್ನಡ ವಾಹಿನಿಯು ಹಂಚಿಕೊಂಡಿದೆ. ಈ ಪ್ರೋಮೋ ಅನೇಕರಿಗೆ ಇಷ್ಟ ಆಗಿದೆ.

ನಿಧಿಗೆ ಮೊದಲಿಗೆ ಕರ್ಣನ ಮೇಲೆ ಪ್ರೀತಿ ಮೂಡಿತು ಮತ್ತು ಅದನ್ನು ಕರ್ಣನ ಎದುರು ಹಂಚಿಕೊಂಡಳು. ಆದರೆ, ಕರ್ಣ ಇದಕ್ಕೆ ಮೊದಲು ಒಪ್ಪಿಕೊಂಡೇ ಇರಲಿಲ್ಲ. ಆ ಬಳಿಕ ಕರ್ಣನಿಗೂ ನಿಧಾನವಾಗಿ ನಿಧಿಯ ಮೇಲೆ ಪ್ರೀತಿ ಮೂಡುವಂತೆ ಆಯಿತು. ಈಗ ಇಬ್ಬರ ಮಧ್ಯೆ ಸಂಪೂರ್ಣವಾಗಿ ಪ್ರೀತಿ ಮೂಡಿದೆ. ಟೀಚರ್ ಹಾಗೂ ಶಿಷ್ಯೆ ಮಧ್ಯೆ ಪ್ರೀತಿ ಅರಳಿದೆ.

ನಿಧಿ, ಕರ್ಣ ಸೇರಿದಂತೆ ಇಡೀ ಫ್ಯಾಮಿಲಿ ಮಾರಿಗುಡಿಗೆ ತೆರಳಿದೆ. ಅಲ್ಲಿ, ಕರ್ಣ ಹಾಗೂ ನಿಧಿ ಮತ್ತಷ್ಟು ಆಪ್ತರಾದರು. ಕರ್ಣನೇ ಬಂದು ನಿಧಿಗೆ ಪ್ರಪೋಸ್ ಮಾಡಿದ್ದಾನೆ. ಕರ್ಣನು ತೆಪ್ಪದ ಮೇಲೆ ಕುಳಿತು, ‘ಇವನು ಕಳ್ಳ. ಮೊದಲು ಹಾರ್ಟ್ ನನಗೋಸ್ಕರ ಮಾತ್ರ ಲಬ್​ಡಬ್ ಅಂತಿದ್ದ, ಈಗ ನಿಗೂ ಸೇರಿ ಲಬ್​​ಡಬ್ ಅಂತಿದಾನೆ. ಐ ಲವ್​ ಯೂ ನಿಧಿ’ ಎಂದು ಕರ್ಣ ಹೇಳಿದ್ದಾನೆ. ಆ ಬಳಿಕ ಮಗುವಿನಂತೆ ನಿಧಿ ಮಡಿಲಲ್ಲಿ ಕರ್ಣ ಮಲಗಿದ್ದಾನೆ.

View this post on Instagram

A post shared by Zee Kannada (@zeekannada)

ನಿಧಿ ಹಾಗೂ ಕರ್ಣ ಮಧ್ಯೆ ಪ್ರೀತಿ ಮೂಡಿದೆ ನಿಜ. ಆದರೆ, ಆತ ಅಸಲಿಗೆ ಯಾರನ್ನು ಮದುವೆ ಆಗುತ್ತಾನೆ ಎಂಬುದೇ ಸದ್ಯದ ಕುತೂಹಲ. ಏಕೆಂದರೆ ನಿಧಿ ಅಕ್ಕ ನಿತ್ಯಾ ಪಾತ್ರ ಕೂಡ ಧಾರಾವಾಹಿಯಲ್ಲಿ ಹೈಲೈಟ್ ಆಗಿದೆ. ಆಕೆ ಕೂಡ ಕರ್ಣನ ಮದುವೆ ಆಗುತ್ತಾಳೆ ಎಂದು ಹೇಳಲಾಗುತ್ತಿದೆ. ಆದರೆ, ಈ ವಿಚಾರ ಇನ್ನೂ ಅಧಿಕೃತ ಆಗಿಲ್ಲ.

ಸದ್ಯ ಮಾರಿಗುಡಿ ಕಥೆಯನ್ನು ಧಾರಾವಾಹಿಯಲ್ಲಿ ಹೈಲೈಟ್ ಮಾಡಲಾಗುತ್ತಿದೆ. ಈ ಊರಿಗೂ ಕರ್ಣನಿಗೆ, ನಿಧಿ ಹಾಗೂ ನಿತ್ಯಾಗೆ ಕನೆಕ್ಷನ್ ಇದೆ. ಅದು ಏನು ಎಂಬುದು ಮುಂದಿನ ದಿನಗಳಲ್ಲಿ ರಿವೀಲ್ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!