AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ಜೀ ಕನ್ನಡಕ್ಕೆ ಬಂದ ಕಿರಣ್ ರಾಜ್; ಬರುತ್ತಿದೆ ಹೊಸ ಧಾರಾವಾಹಿ ‘ಕರ್ಣ’

ಕಿರಣ್ ರಾಜ್ ಅವರು ಜೀ ಕನ್ನಡದ ಹೊಸ ಧಾರಾವಾಹಿ 'ಕರ್ಣ' ದಲ್ಲಿ ನಟಿಸುತ್ತಿದ್ದಾರೆ. ಕರ್ಣ ಒಬ್ಬ ಯಶಸ್ವಿ ಸ್ತ್ರೀರೋಗ ತಜ್ಞ, ಆದರೆ ಮನೆಯಲ್ಲಿ ಅವನನ್ನು ಕೆಲಸದವನಂತೆ ನೋಡಲಾಗುತ್ತದೆ. ಇದಕ್ಕೆ ಕಾರಣ ಅವನ ತಂದೆ ಅವನನ್ನು ತನ್ನ ಮಗ ಎಂದು ಒಪ್ಪಿಕೊಳ್ಳಲು ನಿರಾಕರಿಸುವುದು. ಧಾರಾವಾಹಿಯಲ್ಲಿ ಕಿರಣ್ ರಾಜ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

Kiran Raj: ಜೀ ಕನ್ನಡಕ್ಕೆ ಬಂದ ಕಿರಣ್ ರಾಜ್; ಬರುತ್ತಿದೆ ಹೊಸ ಧಾರಾವಾಹಿ ‘ಕರ್ಣ’
ಕಿರಣ್ ರಾಜ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Mar 11, 2025 | 9:11 AM

ಕಿರಣ್ ರಾಜ್ ಅವರು ‘ಕನ್ನಡತಿ’  (Kannadati) ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡವರು.. ಅವರಿಗೆ ಸಾಕಷ್ಟು ಖ್ಯಾತಿಯನ್ನು ಈ ಧಾರಾವಾಹಿ ತಂದುಕೊಟ್ಟಿತ್ತು. ಆ ಬಳಿಕ ಅವರಿಗೆ ಸಿನಿಮಾ ರಂಗದಿಂದ ಆಫರ್​ಗಳು ಬಂದಿದ್ದು ಗೊತ್ತೇ ಇದೆ. ಅವರು ಈಗ ಮತ್ತೆ ಕಿರುತೆರೆಗೆ ಮರಳಿದ್ದಾರೆ. ಈ ಬಾರಿ ಅವರು ಕಲರ್ಸ್ ಕನ್ನಡದ ಬದಲು ಜೀ ಕನ್ನಡವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹೌದು, ಜೀ ಕನ್ನಡದಲ್ಲಿ ಆರಂಭ ಆಗುತ್ತಿರುವ ಹೊಸ ಧಾರಾವಾಹಿಯಲ್ಲಿ ಕಿರಣ್ ರಾಜ್ ಅವರು ನಟಿಸುತ್ತಿದ್ದಾರೆ. ಇದರ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ.

ಜೀ ಕನ್ನಡದಲ್ಲಿ ಹೊಸ ಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಲೇ ಇರುತ್ತವೆ. ಈಗ ಈ ಸಾಲಿಗೆ ‘ಕರ್ಣ’ ಹೆಸರು ಸೇರ್ಪಡೆ ಆಗಿದೆ. ಈ ಮೊದಲು ‘ಕರ್ಣ’ ಹೆಸರಿನ ಸಿನಿಮಾ ಪ್ರಸಾರ ಕಂಡಿತ್ತು. ಅದೇ ಶೀರ್ಷಿಕೆಯಲ್ಲಿ ಧಾರಾವಾಹಿ ಬರುತ್ತಿದೆ. ಹಾಗಾದರೆ ಧಾರಾವಾಹಿಯ ಕಥೆ ಏನು? ಕಿರಣ್ ರಾಜ್ ಪಾತ್ರವೇನು ಎಂಬುದಕ್ಕೂ ಉತ್ತರ ಇದೆ.

ಇದನ್ನೂ ಓದಿ
Image
ರಮೇಶ್ ಅರವಿಂದ್ ನೇತೃತ್ವದಲ್ಲಿ ಬರುತ್ತಿದೆ ಹೊಸ ಶೋ; ರಿವೀಲ್ ಆಯ್ತು ಮಾಹಿತಿ
Image
NTR​ ಜೊತೆ ಡ್ಯಾನ್ಸ್ ಮಾಡುವಾಗ ಎಡವಿದ ಹೃತಿಕ್ ರೋಷನ್; ಸಂಭವಿಸಿತು ಅವಘಡ
Image
ಸಹನಟನ ಜೊತೆ ಸಿಕ್ಕಿಬಿದ್ದ ಕಿರುತೆರೆ ನಟಿ; 6 ತಿಂಗಳಿಗೆ ಕೊನೆ ಆಯ್ತು ಸಂಸಾರ
Image
ಚಾಂಪಿಯನ್ಸ್ ಆದ ಖುಷಿಯಲ್ಲಿ ಅನುಷ್ಕಾಗೆ ರೋಹಿತ್ ಶರ್ಮಾ ಪ್ರೀತಿಯ ಅಪ್ಪುಗೆ

ಕರ್ಣ ಎಂಬುದು ಕಥಾ ನಾಯಕ ಕಿರಣ್ ರಾಜ್ ಅವರ ಹೆಸರು. ಕರ್ಣ ದೊಡ್ಡ ಸ್ತ್ರೀರೋಗ ತಜ್ಞ. ಅವನಿಗೆ ಅವಾರ್ಡ್ ಕೂಡ ಬಂದಿದೆ. ಅವನು ಹೊರಗೆ ದೊಡ್ಡ ವೈದ್ಯನಾಗಿರಬಹುದು, ಆದರೆ, ಮನೆಯಲ್ಲಿ ಆತ ಕೆಲಸ ಮಾಡುವ ವ್ಯಕ್ತಿಯಷ್ಟೇ! ಹೌದು, ಆತನನ್ನು ಮನೆಯಲ್ಲಿ ಎಲ್ಲರೂ ಕೆಲಸದವರಂತೆ ನೋಡುತ್ತಾರೆ. ಏನೇ ಬೇಕಿದ್ದರೂ ಆತನ ಬಳಿ ಹೇಳುತ್ತಾರೆ. ಚಪ್ಪಲಿ ಹೊಲಸಿಕೊಂಡು ಬರುವ ಕೆಲಸವೂ ಆತನದ್ದೇ. ಇದಕ್ಕೆ ಕಾರಣವೂ ಇದೆ.

View this post on Instagram

A post shared by Zee Kannada (@zeekannada)

ಕರ್ಣನ ತಂದೆ ಈತ ಮಗ ಎಂದು ಒಪ್ಪಿಕೊಳ್ಳಲು ರೆಡಿ ಇಲ್ಲ. ಆತನನ್ನು ತಿಪ್ಪೆಯಿಂದ ಎತ್ತಿಕೊಂಡು ಬಂದಿದ್ದು ಎಂದು ಹೇಳುತ್ತಾನೆ. ಮನೆಯಲ್ಲಿ ಯಾವುದೇ ಕೆಲಸ ಆಗಬೇಕಿದ್ದರೂ ಆತನಿಗೆ ಹೇಳಲಾಗುತ್ತದೆ. ಈ ರೀತಿಯಲ್ಲಿ ಧಾರಾವಾಹಿ ಮೂಡಿ ಬರುತ್ತಿದೆ. ಸದ್ಯ ಧಾರಾವಾಹಿ ಯಾವಾಗ ಬರುತ್ತದೆ ಎಂದು ಇನ್ನೂ ರಿವೀಲ್ ಮಾಡಿಲ್ಲ.

ಇದನ್ನೂ ಓದಿ: ಸನಾತನ ಧರ್ಮದ ಕಥೆ ಇರುವ ಸೂಪರ್​ ಹೀರೋ ಸಿನಿಮಾದಲ್ಲಿ ಕಿರಣ್ ರಾಜ್ ನಟನೆ

‘ಕನ್ನಡತಿ’ ಧಾರಾವಾಹಿಯಲ್ಲಿ ಅವರು ಸ್ಟೈಲಿಶ್ ಹೀರೋ ಆಗಿದ್ದರು. ಇಲ್ಲಿಯೂ ಅದು ಮುಂದುವರಿದಿದೆ. ಇಲ್ಲಿಯೂ ಕರ್ಣ ಶ್ರೀಮಂತ ಕುಟುಂಬದವನೇ ಆಗಿದ್ದಾನೆ. ಅವರು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಇದಕ್ಕೆ ನಾಯಕಿ ಯಾರು ಎಂಬುದು ಇನ್ನಷ್ಟೇ ರಿವೀಲ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು