AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯಾ ಹಾಗೂ ಕರ್ಣ ವಿವಾಹಕ್ಕೆ ದೊಡ್ಡ ಟ್ವಿಸ್ಟ್; ನಿಧಿ ಫ್ಯಾನ್ಸ್ ಫುಲ್ ಖುಷ್

Karna Serial: ನಿತ್ಯಾ-ಕರ್ಣ ಮದುವೆಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ರಮೇಶ್‌ನ ದುಷ್ಕೃತ್ಯದಿಂದ ವಿವಾಹದ ಪರಿಸ್ಥಿತಿ ಎದುರಾಗಿತ್ತು. ಆದರೆ, ಕರ್ಣನ ಚಾತುರ್ಯದಿಂದ ಮದುವೆ ನಿಜವಾಗಿ ನಡೆಯುತ್ತಿಲ್ಲ. ನಿತ್ಯಾ ತಾನೇ ತಾಳಿ ಕಟ್ಟಿಕೊಂಡಿದ್ದು, ಈ ಸತ್ಯ ನಿಧಿಗೆ ತಿಳಿದಿಲ್ಲ. ನಿಧಿ ಅಭಿಮಾನಿಗಳಿಗೆ ಇದು ಖುಷಿ ಸುದ್ದಿ.

ನಿತ್ಯಾ ಹಾಗೂ ಕರ್ಣ ವಿವಾಹಕ್ಕೆ ದೊಡ್ಡ ಟ್ವಿಸ್ಟ್; ನಿಧಿ ಫ್ಯಾನ್ಸ್ ಫುಲ್ ಖುಷ್
Nidhi
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 21, 2025 | 7:53 AM

Share

ನಿತ್ಯಾ ಹಾಗೂ ಕರ್ಣ (Karna Serial) ವಿವಾಹ ಆಗುವ ಪರಿಸ್ಥಿತಿ ಬಂದಿದೆ ಎಂಬುದು ಗೊತ್ತೇ ಇದೆ. ಅಸಲಿಗೆ ಇಲ್ಲಿ ನಿಧಿ ಹಾಗೂ ನಿತ್ಯಾ ವಿವಾಹ ಆಗಬೇಕಿತ್ತು. ಆದರೆ, ಅಲ್ಲಾಗಿದ್ದೇ ಬೇರೆ. ಕರ್ಣನ ತಂದೆ ರಮೇಶ್ ಮಾಡಿದ ಕೆಟ್ಟ ಕೆಲಸದಿಂದ ನಿತ್ಯಾ ಹಾಗೂ ಕರ್ಣ ವಿವಾಹ ಆಗಬೇಕಾದ ಪರಿಸ್ಥಿತಿ ಬಂದಿದೆ. ಹೀಗಿರುವಾಗಲೇ ನಿತ್ಯಾ ಹಾಗೂ ಕರ್ಣನ ಮದುವೆ ವಿಚಾರಕ್ಕೆ ದೊಡ್ಡ ಟ್ವಿಸ್ಟ್ ಎದುರಾಗಿದೆ. ಇಬ್ಬರೂ ನಿಜವಾಗಿಯೂ ವಿವಾಹ ಆಗುತ್ತಿಲ್ಲ ಎಂಬ ವಿಚಾರ ತಿಳಿದು ನಿಧಿ ಫ್ಯಾನ್ಸ್ ಖುಷಿ ಆಗಿದ್ದಾರೆ.

ನಿತ್ಯಾ ಹಾಗೂ ನಿಧಿ ಅಕ್ಕ ತಂಗಿ. ನಿತ್ಯಾ ಹಾಗೂ ತೇಜಸ್ ಮದುವೆ ಫಿಕ್ಸ್ ಆಗಿತ್ತು. ಆದರೆ, ಅವನನ್ನು ಕಿಡ್ನ್ಯಾಪ್ ಮಾಡಿ, ನಿತ್ಯಾ ಹಾಗೂ ಕರ್ಣ ಮದುವೆ ಆಗುವಂತೆ ಮಾಡಿದ್ದು ರಮೇಶ್. ಕರ್ಣ ಹಾಗೂ ನಿತ್ಯಾ ವಿವಾಹದ ಬಗ್ಗೆ ನಿಧಿ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಇದ್ದಿದ್ದಂತೂ ಸುಳ್ಳಲ್ಲ. ಈಗ ಅವರಿಗೆ ಒಂದು ಖುಷಿ ಸುದ್ದಿ ಸಿಕ್ಕಿದೆ ಎಂದೇ ಹೇಳಬಹುದು.

ಇದನ್ನೂ ಓದಿ
Image
ಗಂಡು ಮಗುವಿಗೆ ಜನ್ಮ ನೀಡಿದ ನಟಿ ಪರಿಣಿತಿ ಚೋಪ್ರಾ
Image
ಶಾಲಲ್ಲಿ ಚಪ್ಪಲಿ ಸುತ್ತಿ ಹೊಡೆದ ಗಿಲ್ಲಿ ನಟ; ಅಶ್ವಿನಿ-ಜಾನ್ವಿ ಗಪ್ ಚುಪ್
Image
ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ
View this post on Instagram

A post shared by Zee Kannada (@zeekannada)

‘ನೀವು ನನ್ನ ಯಾವಾಗಲೂ ದೂರವೇ ನಿಲ್ಲಿಸಿದ್ದೀರಾ. ನಾನು ನಿಮ್ಮನ್ನು ಮದುವೆ ಆಗೋದು ನಿಮಗೆ ಕನಸಲ್ಲೂ ಇಷ್ಟ ಇಲ್ಲ. ಈಗ ಮುಖ್ಯ ಎನಿಸೋದು ನನ್ನಜ್ಜಿ ಹಾಗೂ ನಿಮ್ಮಜ್ಜಿ ಜೀವ’ ಎಂದು ಕರ್ಣ ಹೇಳಿದನು. ಆ ಬಳಿಕ ನಿತ್ಯಾ ಸಾಕಷ್ಟು ನೊಂದುಕೊಂಡಳು. ‘ನನ್ನಂತವಳಿಗೆ ಸಾವೇ ಪರಿಹಾರ’ ಎಂದು ನಿತ್ಯಾ ಹೇಳಿದಳು. ಆಗ ಕರ್ಣ ಒಂದು ಐಡಿಯಾ ನೀಡಿದನು.

ಇದನ್ನೂ ಓದಿ: ಸಪ್ತಪದಿ ತುಳಿಯುವಾಗಲೇ ಕರ್ಣನಿಗೆ ಗೊತ್ತಾಯ್ತು ನಿಧಿ ಪ್ರೆಗ್ನೆನ್ಸಿ ವಿಚಾರ

‘ನಿತ್ಯಾ ಬಳಿ ನೀವೇ ತಾಳಿ ಕಟ್ಟಿಕೊಳ್ಳಿ’ ಎಂದು ಕರ್ಣ ಹೇಳಿದ್ದಾನೆ. ನಿತ್ಯಾ ಅದೇ ರೀತಿ ಮಾಡಿದ್ದಾಳೆ. ನಾಲ್ಕು ಗೋಡೆಯ ಮಧ್ಯೆಯೇ ಇದು ನಡೆದು ಹೋಗಿದೆ. ಹೀಗಾಗಿ, ಹೆಚ್ಚು ಚಿಂತಿಸೋ ಅಗತ್ಯವೇ ಇಲ್ಲ ಎನ್ನಬಹುದು. ಆದರೆ, ಈ ವಿಚಾರ ನಿಧಿಗೆ ಇನ್ನೂ ತಿಳಿದಿಲ್ಲ. ಅದು ಅವಳಿಗೆ ತಿಳಿಯಲು ಸಾಕಷ್ಟು ಸಮಯ ಬೇಕಾಗಬಹುದು. ಸದ್ಯಕ್ಕಂತೂ ನಿಧಿ ಸಾಕಷ್ಟು ಅಪ್ಸೆಟ್ ಆಗಿದ್ದಾಳೆ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಮುಂದೊಂದು ದಿನ ನಿಧಿ ಹಾಗೂ ಕರ್ಣನ ವಿವಾಹ ನೆರವೇರಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ