AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲವ್ ಎಟ್ ಫಸ್ಟ್​ ಸೈಟ್’: ಕರ್ಣನ ನೋಡಿ ನಿಧಿಗೆ ಲವ್; ಹೇಗಿದೆ ನೋಡಿ ಹೊಸ ಪ್ರೋಮೋ

ಭವ್ಯ ಗೌಡ ಅಭಿನಯಿಸುತ್ತಿರುವ ಜೀ ಕನ್ನಡದ ಹೊಸ ಧಾರಾವಾಹಿ 'ಕರ್ಣ'ದ ಪ್ರೋಮೋ ಬಿಡುಗಡೆಯಾಗಿದೆ. ಕಿರಣ್ ರಾಜ್ ವೈದ್ಯರ ಪಾತ್ರದಲ್ಲಿದ್ದರೆ, ಭವ್ಯಾ ಗೌಡ ಮೆಡಿಕಲ್ ವಿದ್ಯಾರ್ಥಿನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೋಮೋದಲ್ಲಿ ಕರ್ಣನನ್ನು ನೋಡಿ ನಿಧಿಗೆ ಪ್ರೇಮಾಂಕುರವಾಗುವುದನ್ನು ತೋರಿಸಲಾಗಿದೆ. ನಮ್ರತಾ ಗೌಡ ಕೂಡ ಈ ಧಾರಾವಾಹಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.

‘ಲವ್ ಎಟ್ ಫಸ್ಟ್​ ಸೈಟ್’: ಕರ್ಣನ ನೋಡಿ ನಿಧಿಗೆ ಲವ್; ಹೇಗಿದೆ ನೋಡಿ ಹೊಸ ಪ್ರೋಮೋ
ಹರ್ಷ-ಭವ್ಯಾ
ರಾಜೇಶ್ ದುಗ್ಗುಮನೆ
|

Updated on: May 03, 2025 | 8:26 PM

Share

‘ಕರ್ಣ’ ಧಾರಾವಾಹಿಯ (Karna Serial) ಪ್ರೋಮೋ ಈ ಮೊದಲೇ ರಿಲೀಸ್ ಆಗಿ ಗಮನ ಸೆಳೆದಿತ್ತು. ಆ ಬಳಿಕ ಧಾರಾವಾಹಿಯಲ್ಲಿ ಯಾರೆಲ್ಲ ನಟಿಸುತ್ತಾರೆ ಎಂಬ ಬಗ್ಗೆ ಮಾಹಿತಿ ರಿವೀಲ್ ಆಗಿತ್ತು. ಆದರೆ ಯಾವುದೇ ಪ್ರೋಮೋನ ಜೀ ಕನ್ನಡ ವಾಹಿನಿ ರಿಲೀಸ್ ಮಾಡಿರಲಿಲ್ಲ. ಈಗ ಭವ್ಯಾ ಗೌಡ ಅವರು ಇರೋ ಪ್ರೋಮೋನ ಬಿಡುಗಡೆ ಮಾಡಲಾಗಿದೆ. ಈ ಪ್ರೋಮೋದಲ್ಲಿ ಭವ್ಯಾ ಅವರ ಪಾತ್ರ ಏನು ಎಂಬ ವಿಚಾರವನ್ನು ರಿವೀಲ್ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಕರ್ಣ ಪಾತ್ರದಲ್ಲಿ ‘ಕನ್ನಡತಿ’ ಖ್ಯಾತಿಯ ಕಿರಣ್ ರಾಜ್ ಅವರು ನಟಿಸುತ್ತಿದ್ದಾರೆ. ಅವರದ್ದು ವೈದ್ಯನ ಪಾತ್ರ. ಭವ್ಯಾ ಗೌಡ ಅವರು ಈ ಧಾರಾವಾಹಿಯಲ್ಲಿ ನಿಧಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಪಾತ್ರದಲ್ಲಿ ಭವ್ಯಾ ಗೌಡ ಅವರು ಮೆಡಿಕಲ್ ವಿದ್ಯಾರ್ಥಿನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕರ್ಣನ ನೋಡಿ ನಿಧಿಗೆ ಲವ್ ಎಟ್ ಫಸ್ಟ್ ಸೈಟ್ ಆಗುತ್ತದೆ. ಆ ರೀತಿಯಲ್ಲಿ ಪ್ರೋಮೋ ಮೂಡಿ ಬಂದಿದೆ.

ಇದನ್ನೂ ಓದಿ
Image
ನಟಿ ಮಾಡಿದ ಕುಹಕದ ಮಾತಿನಿಂದ ಸಿಕ್ಸ್ ಪ್ಯಾಕ್​ ಮಾಡಿದ್ದ ಅಲ್ಲು ಅರ್ಜುನ್
Image
ಬುಡಕಟ್ಟು ಜನಾಂಗದ ಬಗ್ಗೆ ವಿವಾದಾತ್ಮಕ ಹೇಳಿಕೆ; ಕ್ಷಮೆ ಕೇಳಿದ ವಿಜಯ್
Image
‘ಕೆಜಿಎಫ್ 2’ ರಿಲೀಸ್ ಆಗಿ 3 ವರ್ಷವಾದರೂ ನಿಂತಿಲ್ಲ ಟಾಕ್
Image
ಖ್ಯಾತ ನಿರ್ದೇಶಕ ರಾಜಮೌಳಿಯ ನೆಚ್ಚಿನ ನಟಿ ಯಾರು ಗೊತ್ತಾ?

‘ಜೀ ಕನ್ನಡ’ ಧಾರಾವಾಹಿಗಳಲ್ಲಿ ಸಾಂಗ್​ಗಳು ಹೈಲೈಟ್. ‘ಕರ್ಣ’ ಧಾರಾವಾಹಿಯ ಸಾಂಗ್ ಕೂಡ ಚೆನ್ನಾಗಿದೆ. ಈ ಹಾಡು ಸಾಕಷ್ಟು ಗಮನ ಸೆಳೆದಿದೆ. ಈ ಹಾಡನ್ನು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ಈಗ ರಿಲೀಸ್ ಆಗಿರೋ ಪ್ರೋಮೋಗೆ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ.

View this post on Instagram

A post shared by Zee Kannada (@zeekannada)

ಕರ್ಣ ವೈದ್ಯಕೀಯ ಕಾಲೇಜ್​ನಲ್ಲಿ ಡಾಕ್ಟರ್ ಹಾಗೂ ಪ್ರಾಧ್ಯಾಪಕ. ಆತನ ನೋಡಿದರೆ ನಿಧಿಗೆ ಲವ್. ಆತನ ಮೊದಲ ನೋಟಕ್ಕೆ ಫುಲ್ ಫ್ಲ್ಯಾಟ್ ಆಗುತ್ತಾಳೆ ನಿಧಿ. ಆತನನ್ನೇ ಆರಾಧಿಸೋಕೆ ಆರಂಭಿಸುತ್ತಾಳೆ. ಹೋದಲ್ಲಿ ಬಂದಲ್ಲಿ ಆಕೆಗೆ ಅವನದ್ದೇ ನೆನಪು.

ಇದನ್ನೂ ಓದಿ: ‘ಕರ್ಣ’ ಧಾರವಾಹಿಯಲ್ಲಿ ಕಿರಣ್ ರಾಜ್​ಗೆ ನಾಯಕಿ ಆದ ‘ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿ

‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ ಮಾತ್ರವಲ್ಲ, ನಮ್ರತಾ ಗೌಡ ಕೂಡ ಇದ್ದಾರೆ. ಇಬ್ಬರೂ ಒಂದೇ ತಾಯಿಯ ಮಕ್ಕಳು ಎಂದು ಹೇಳಲಾಗುತ್ತಿದೆ. ಆದರೆ, ಇನ್ನೂ ಈ ವಿಚಾರ ಅಧಿಕೃತವಾಗಿ ಖಚಿತಾಗಿಲ್ಲ. ಇದಕ್ಕೆ ಸಂಬಂಧಿಸಿದ ಪ್ರೋಮೋ ಇನ್ನೂ ರಿವೀಲ್ ಆಗಿಲ್ಲ. ಅದು ರಿಲೀಸ್ ಆದ ಬಳಿಕ ಧಾರಾವಾಹಿ ಬಗೆಗಿನ ಸ್ಪಷ್ಟ ಚಿತ್ರಣ ಸಿಗಲಿದೆ. ‘ಕರ್ಣ’ ಧಾರಾವಾಹಿಯ ಪ್ರಸಾರದ ದಿನಾಂಕ ಇನ್ನೂ ರಿವೀಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು