AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ಣನ ತಂದೆ ರಮೇಶ್ ಮುಖವಾಡ ಕಳಚಿಬಿತ್ತು; ದೊಡ್ಡ ಸಂಚು ಬಯಲು

ಕರ್ಣ ಧಾರಾವಾಹಿಯಲ್ಲಿ ಕರ್ಣನ ತಂದೆ ರಮೇಶ್‌ನ ಅಸಲಿ ಬಣ್ಣ ಬಯಲಾಗಿದೆ. ಮೊದಲು ಒಳ್ಳೆಯವನಾಗಿ ನಾಟಕವಾಡಿದ ರಮೇಶ್, ಈಗ ಕರ್ಣನಿಗೆ ಮೋಸ ಮಾಡಲು ಮುಂದಾಗಿದ್ದಾನೆ. ನಿಧಿ ಜೊತೆ ಮದುವೆ ಮಾಡಿಸುವುದಾಗಿ ಹೇಳಿ, ಕರ್ಣನನ್ನು ನಿತ್ಯಾ ಜೊತೆ ಮದುವೆಗೆ ಸಿದ್ಧಗೊಳಿಸಿದ್ದಾನೆ. ಈ ಅನಿರೀಕ್ಷಿತ ತಿರುವು ಕರ್ಣ ಮತ್ತು ಅಭಿಮಾನಿಗಳಿಗೆ ಆಘಾತ ನೀಡಿದೆ.

ಕರ್ಣನ ತಂದೆ ರಮೇಶ್ ಮುಖವಾಡ ಕಳಚಿಬಿತ್ತು; ದೊಡ್ಡ ಸಂಚು ಬಯಲು
ಕರ್ಣ ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Oct 06, 2025 | 8:02 AM

Share

‘ಕರ್ಣ’ ಧಾರಾವಾಹಿಯಲ್ಲಿ ಕರ್ಣನ ತಂದೆ ರಮೇಶ್ ತುಂಬಾನೇ ಒಳ್ಳೆಯವನಾಗಿ ಬದಲಾಗಿದ್ದ. ಒಂದೇ ರಾತ್ರಿಯಲ್ಲಿ ಅವನು ಈ ರೀತಿಯಲ್ಲಿ ಬದಲಾಗುತ್ತಾನೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ. ಹೀಗಿರುವಾಗಲೇ ಅವನ ನಿಜವಾದ ಮುಖವಾಡ ಬಯಲಾಗಿದೆ. ಇಷ್ಟು ದಿನ ಬಣ್ಣ ಹಾಕಿಕೊಂಡು ಓಡಾಡುತ್ತಿದ್ದ ಆತನ ಅಸಲಿ ಬಣ್ಣ ಬಯಲಾಗಿದೆ. ಈ ಟ್ವಿಸ್ಟ್​ನ ಯಾರೆಂದರೆ ಯಾರೂ ಕೂಡ ಊಹಿಸಿರಲಿಲ್ಲ. ರಮೇಶ್ ಮತ್ತೆ ಹೀಗಾಗಬಾರದಿತ್ತು ಎಂದು ಅನೇಕರು ಹೇಳಿದ್ದಾರೆ.

‘ಕರ್ಣ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಎದುರಾಗಿವೆ. ಈ ಧಾರಾವಾಹಿಯಲ್ಲಿ ಕರ್ಣನ ತಂದೆ ರಮೇಶ್ ಒಂದೇ ದಿನಕ್ಕೆ ಬದಲಾಗಿದ್ದ. ಮೊದಲು ಕೆಟ್ಟವನಾಗಿದ್ದ ಆತ, ನಂತರ ಒಳ್ಳೆಯವನಾಗಿ ಕಾಣಿಸಿಕೊಂಡಿದ್ದ. ಈ ವಿಚಾರ ಕರ್ಣನಿಗೆ ಸಾಕಷ್ಟು ಖುಷಿ ನೀಡಿತ್ತು. ನಿತ್ಯಾ ಮದುವೆ ತನ್ನದೇ ಮನೆಯಲ್ಲಿ ಆಗುತ್ತದೆ ಎಂದಾಗ ಆತ ನೋ ಎಂದು ಹೇಳಲೇ ಇಲ್ಲ. ಈಗ ಕರ್ಣನಿಗೆ ಆತ ಖೆಡ್ಡ ತೋಡಿದ್ದಾನೆ.

ಇದನ್ನೂ ಓದಿ
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಮಗಳು ಗೌತಮ್​ಗೆ ಸಿಕ್ಕೇ ಬಿಟ್ಳು
Image
ಪುನೀತ್​ಗೆ ರಚಿತಾ ಅವಮಾನ ? ನಾಲಿಗೆ ಮೇಲೆ ಹಿಡಿತ ಇರಲಿ ಎಂದ ಫ್ಯಾನ್ಸ್
Image
‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾನುವಾರದ ಕಲೆಕ್ಷನ್ ಇಷ್ಟೊಂದಾ?
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ
View this post on Instagram

A post shared by Zee Kannada (@zeekannada)

ಕರ್ಣ ಧಾರಾವಾಹಿಯಲ್ಲಿ ನಿಧಿ ಹಾಗೂ ಕರ್ಣ ಪ್ರೀತಿ ಮಾಡುತ್ತಿದ್ದಾರೆ. ಈ ವಿಚಾರ ರಮೇಶ್​​ಗೂ ತಿಳಿದಿದೆ. ಇಬ್ಬರ ಮದುವೆಯನ್ನು ನಾನೇ ಮಾಡಿಸುತ್ತೇನೆ ಎಂದು ಆತ ಪ್ರಾಮಿಸ್ ಕೂಡ ಮಾಡಿದ್ದ. ಆದರೆ, ಈಗ ಆತ ಕರ್ಣನಿಗೆ ಮೋಸ ಮಾಡಲು ಮುಂದಾಗಿದ್ದಾನೆ. ಮಗ ಸಂಜಯ್ ಬಳಿ ಈ ವಿಚಾರವನ್ನು ರಮೇಶ್ ರಿವೀಲ್ ಮಾಡಿದ್ದಾನೆ. ಇದನ್ನು ಕರ್ಣನ ತಾಯಿ ಕದ್ದು ಕೇಳಿದ್ದಾಳೆ. ಕರ್ಣನ ಬಳಿ ಈ ವಿಚಾರವನ್ನು ಅವಳು ಹೇಳಿಕೊಂಡಿದ್ದಾಳೆ.

ಇದನ್ನೂ ಓದಿ: ಹೊಟ್ಟೆಯಲ್ಲಿರೋ ಮಗುವಿಗಾಗಿ ನಿತ್ಯಾಗೆ ತಾಳಿ ಕಟ್ಟೇಬಿಟ್ಟ ಕರ್ಣ; ಕಣ್ಣೀರಲ್ಲಿ ಮುಳುಗಿದ ನಿಧಿ

ಈ ಮೊದಲು ರಿಲೀಸ್ ಆಗಿರುವ ಪ್ರೋಮೋದಲ್ಲಿ ಕರ್ಣ ಹಾಗೂ ನಿತ್ಯಾ ಮದುವೆ ನಡೆಯುವಂತೆ ತೋರಿಸಲಾಗಿದೆ. ಈ ವಿಚಾರ ಅನೇಕ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಈ ತಿರುವನ್ನು ಯಾರೆಂದರೆ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಮುಂದೆ ಧಾರಾವಾಹಿ ಯಾವ ರೀತಿಯಲ್ಲಿ ಸಾಗುತ್ತದೆ ಎಂಬ ಕುತೂಹಲ ಮೂಡಿದೆ. ನಿತ್ಯಾ ಹಾಗೂ ನಿಧಿ ಇಬ್ಬರೂ ಕರ್ಣ ಮದುವೆ ಆಗಬಹುದೇ ಎನ್ನುವ ಪ್ರಶ್ನೆ ಕೂಡ ಮೂಡುವಂತೆ ಆಗಿದೆ. ಈ ವಾರ ಪೂರ್ತಿ ‘ಕರ್ಣ’ ಧಾರಾವಾಹಿಯಲ್ಲಿ ಮದುವೆ ಸಂಭ್ರಮ ನಡೆಯಲಿದೆ. ಕರ್ಣನು ನಿತ್ಯಾನ ಏಕೆ ಮದುವೆ ಆಗುತ್ತಾನೆ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:02 am, Mon, 6 October 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!