AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಣ’ ಧಾರಾವಾಹಿ: ಸಂಜು ಅಸಲಿ ಮುಖ ಬಯಲು; ರಿಯಾ ಜೊತೆ ಮದುವೆ

ಸಂಜುಗೆ ಮದುವೆ ಮಾಡಿಸಲು ಇಡೀ ಕುಟುಂಬಸ್ಥರು ಒಂದೆಡೆ ನೆರೆದಿರುತ್ತಾರೆ. ಈ ವೇಳೆ ಮಧ್ಯಪ್ರವೇಶಿಸುವ ಕರ್ಣ, ‘ಈ ಸಂಬಂಧವನ್ನು ಇನ್ನು ಮುಂದುವರಿಸಲು ಸಾಧ್ಯವಿಲ್ಲ’ ಎಂದು ಮದುವೆ ನಿಲ್ಲಿಸುತ್ತಾನೆ. ಇದಕ್ಕೆ ಕಾರಣ ಕೇಳಿದಾಗ, ಸಂಜು ಮತ್ತು ರಿಯಾ ಪ್ರೀತಿಸುತ್ತಿದ್ದಾರೆ ಹಾಗೂ ರಿಯಾ ಈಗ ಗರ್ಭಿಣಿಯಾಗಿದ್ದಾಳೆ ಎಂಬ ಶಾಕಿಂಗ್ ಸತ್ಯವನ್ನು ಎಲ್ಲರ ಎದುರು ಬಿಚ್ಚಿಡಲಾಗುತ್ತದೆ.

‘ಕರ್ಣ’ ಧಾರಾವಾಹಿ: ಸಂಜು ಅಸಲಿ ಮುಖ ಬಯಲು; ರಿಯಾ ಜೊತೆ ಮದುವೆ
ಕರ್ಣ ಧಾರಾವಾಹಿ Image Credit source: Zee Kannada
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 26, 2026 | 12:12 PM

Share

ಮುಖ್ಯಾಂಶಗಳು

  • ಕರ್ಣ ಧಾರಾವಾಹಿಯಲ್ಲಿ ನಡೆಯಿತು ಮಹತ್ವದ ಬೆಳವಣಿಗೆ
  • ಸಂಜು ಮಾಡಿದ ದೊಡ್ಡ ಮೋಸ ಸರಿಯಾದ ಸಮಯಕ್ಕೆ ಬಯಲು
  • ಸಂಜು-ರಿಯಾ ಜೊತೆ ಶೀಘ್ರವೇ ನಡೆಯಲಿದೆ ಮದುವೆ

ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಕರ್ಣ’ ಈಗ ಅತ್ಯಂತ ರೋಚಕ ತಿರುವು ಪಡೆದುಕೊಂಡಿದೆ. ಇಷ್ಟು ದಿನ ಸದ್ದಿಲ್ಲದೆ ಮೋಸದ ಜಾಲ ಹೆಣೆಯುತ್ತಿದ್ದ ಸಂಜು ಅಸಲಿ ಬಣ್ಣ ಈಗ ಎಲ್ಲರ ಮುಂದೆ ಬಯಲಾಗಿದೆ. ಈ ಕುರಿತಾದ ಹೊಸ ಪ್ರೋಮೋ ಬಿಡುಗಡೆಯಾಗಿದ್ದು, ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಆತನಿಗೂ ರಿಯಾಗೂ ಮದುವೆ ಮಾಡಿಸಲು ಕರ್ಣ ಮುಂದಾಗಿದ್ದಾನೆ.

ಪ್ರೋಮೋದಲ್ಲಿ ಏನಿದೆ?

ಸಂಜುಗೆ ಮದುವೆ ಮಾಡಿಸಲು ಇಡೀ ಕುಟುಂಬಸ್ಥರು ಒಂದೆಡೆ ನೆರೆದಿರುತ್ತಾರೆ. ಈ ವೇಳೆ ಮಧ್ಯಪ್ರವೇಶಿಸುವ ಕರ್ಣ, ‘ಈ ಸಂಬಂಧವನ್ನು ಇನ್ನು ಮುಂದುವರಿಸಲು ಸಾಧ್ಯವಿಲ್ಲ’ ಎಂದು ಮದುವೆ ನಿಲ್ಲಿಸುತ್ತಾನೆ. ಇದಕ್ಕೆ ಕಾರಣ ಕೇಳಿದಾಗ, ಸಂಜು ಮತ್ತು ರಿಯಾ ಪ್ರೀತಿಸುತ್ತಿದ್ದಾರೆ ಹಾಗೂ ರಿಯಾ ಈಗ ಗರ್ಭಿಣಿಯಾಗಿದ್ದಾಳೆ ಎಂಬ ಶಾಕಿಂಗ್ ಸತ್ಯವನ್ನು ಎಲ್ಲರ ಎದುರು ಬಿಚ್ಚಿಡಲಾಗುತ್ತದೆ.

View this post on Instagram

A post shared by Zee Kannada (@zeekannada)

ಸಾಕ್ಷಿ ಸಮೇತ ಸಿಕ್ಕಿಬಿದ್ದ ಸಂಜು!

ತನ್ನ ಮೇಲಿನ ಆರೋಪಕ್ಕೆ ಸಾಕ್ಷಿ ಎಲ್ಲಿದೆ ಎಂದು ಸಂಜು ಗದರಿದಾಗ, ದಿವಾಕರ್ ಎಂಬಾತನ ಕಡೆಯಿಂದ ಅಸಲಿ ಸತ್ಯ ಹೊರಬರುತ್ತದೆ. ‘ರಿಯಾ ಕುಡಿಯುವ ಜ್ಯೂಸ್‌ಗೆ ಟ್ಯಾಬ್ಲೆಟ್ ಮಿಕ್ಸ್ ಮಾಡಿ ಅವಳು ಪ್ರಜ್ಞೆ ತಪ್ಪುವಂತೆ ಮಾಡಲಾಗಿತ್ತು. ಆ ಬಳಿಕ ಸಂಜು ಅವಳನ್ನು ರೂಮ್‌ಗೆ ಕರೆದುಕೊಂಡು ಹೋಗಿದ್ದ’ ಎಂಬ ಆಘಾತಕಾರಿ ರಹಸ್ಯ ಬಯಲಾಗುತ್ತದೆ.

ಇದನ್ನೂ ಓದಿ: ನಿತ್ಯಾಗೆ ಗೊತ್ತಾಯ್ತ ಪ್ರೀತಿಯ ಸತ್ಯ; ಕರ್ಣ-ನಿಧಿ ವಿವಾಹ ಮಾಡಿಸಲು ಮುಂದಾದ ಸಹೋದರಿ 

ಕೊನೆಗೆ, ‘ಈಗ ರಿಯಾಗೆ ತಾಳಿ ಕಟ್ಟಿ ಆಕೆಯನ್ನು ಹೆಂಡತಿ ಎಂದು ಒಪ್ಪಿಕೊಳ್ಳಬೇಕು’ ಎಂಬ ಖಡಕ್ ಆದೇಶ ಕರ್ಣನಿಂದ ಬರುತ್ತದೆ. ಈ ಮಾತು ಕೇಳಿ ಸಂಜು ಹಾಗೂ ಇಡೀ ಕುಟುಂಬಸ್ಥರು ದಿಗ್ಭ್ರಮೆಗೊಂಡಿದ್ದಾರೆ. ತಾನು ಹೆಣೆದ ಮೋಸದ ಜಾಲದಲ್ಲೇ ಸಂಜು ಈಗ ಸಿಕ್ಕಿಬಿದ್ದಿದ್ದು, ಮುಂದಿನ ಸಂಚಿಕೆಗಳಲ್ಲಿ ಕಥೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ