AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಊಹಿಸಿದಂತೆ ಕಥೆ ನಡೆಯಲ್ಲ’; ‘ಕರ್ಣ’ ಬಗ್ಗೆ ಕಿರಣ್ ರಾಜ್ ಹಿಂಟ್

ಕಿರಣ್ ರಾಜ್ ಅವರು ಜೀ ಕನ್ನಡದ ಜನಪ್ರಿಯ ಧಾರಾವಾಹಿ "ಕರ್ಣ"ದಲ್ಲಿ ಕರ್ಣನ ಪಾತ್ರ ನಿರ್ವಹಿಸುತ್ತಿದ್ದಾರೆ. ಅವರು ಇತ್ತೀಚಿನ ಸಂದರ್ಶನದಲ್ಲಿ ಧಾರಾವಾಹಿಯ ಕಥಾವಸ್ತು ಅನೇಕರ ನಿರೀಕ್ಷೆಗಳಿಗೆ ವಿರುದ್ಧವಾಗಿ ಸಾಗಲಿದೆ ಎಂದು ಹೇಳಿದ್ದಾರೆ. ನಿತ್ಯ ಮತ್ತು ನಿಧಿ ಅವರೊಂದಿಗಿನ ಕರ್ಣನ ಸಂಬಂಧದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದ್ದು, ಕಿರಣ್ ರಾಜ್ ಅವರು ಧಾರಾವಾಹಿಯಲ್ಲಿ ಅದಕ್ಕೆ ಉತ್ತರ ಸಿಗಲಿದೆ ಎಂದು ಸೂಚಿಸಿದ್ದಾರೆ.

‘ನೀವು ಊಹಿಸಿದಂತೆ ಕಥೆ ನಡೆಯಲ್ಲ’; ‘ಕರ್ಣ’ ಬಗ್ಗೆ ಕಿರಣ್ ರಾಜ್ ಹಿಂಟ್
ಕಿರಣ್ ರಾಜ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Sep 13, 2025 | 7:46 AM

Share

ಕಿರಣ್ ರಾಜ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದವರು. ಅವರು ಈಗ ‘ಕರ್ಣ’ ಧಾರಾವಾಹಿ (Karna Serial) ಮೂಲಕ ಜೀ ಕನ್ನಡ ಪ್ರೇಕ್ಷಕರ ಎದುರು ಬಂದಿದ್ದಾರೆ. ಅವರು ‘ಕರ್ಣ’ ಧಾರಾವಾಹಿ ಬಗ್ಗೆ, ಅದರ ಕಥೆ ಬಗ್ಗೆ ದೊಡ್ಡ ಹಿಂಟ್ ಒಂದನ್ನು ನೀಡಿದ್ದಾರೆ. ‘ನೀವು ಅಂದುಕೊಂಡಂತೆ ಧಾರಾವಾಹಿ ಕಥೆ ನಡೆಯಲ್ಲ. ಅದಕ್ಕೆ ವಿರುದ್ಧವಾಗಿಯೇ ಕಥೆ ಸಾಗುತ್ತದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಮುಂದೆ ಏನಾಗುತ್ತದೆ ಎಂಬ ಕುತೂಹಲ ಮೂಡಿದೆ.

ಯಾವುದೇ ಹೊಸ ಧಾರಾವಾಹಿ ಆರಂಭ ಆದರೂ ಆರಂಭದ ಹಂತದಲ್ಲಿ ಸಾಕಷ್ಟು ಸುದ್ದಿ ಆಗುತ್ತದೆ. ಧಾರಾವಾಹಿಯ ಕಥೆ ಹಾಗೆ ಸಾಗಬಹುದು, ಹೀಗೆ ಸಾಗಬಹುದು ಎಂದೆಲ್ಲ ಊಹಿಸಲಾಗುತ್ತದೆ. ‘ಕರ್ಣ’ ಧಾರಾವಾಹಿಯಲ್ಲೂ ಅದು ಮುಂದುವರಿದಿದೆ. ಈ ಧಾರಾವಾಹಿ ಬಗ್ಗೆ ವಿವಿಧ ರೀತಿಯ ಊಹೆಗಳು ಬರುತ್ತಿವೆ. ಆದರೆ, ಹಾಗಾಗೋದಿಲ್ಲ ಎಂಬುದು ಕಿರಣ್ ರಾಜ್ ಅವರ ಮಾತು. ಅವರು ಸಂದರ್ಶನ ಒಂದರಲ್ಲಿ ಈ ಬಗ್ಗೆ ಹೇಳಿದ್ದಾರೆ.

‘ನಿಧಿನ ಮದುವೆ ಆಗ್ತೀರಾ, ನಿತ್ಯಾನ ಮದುವೆ ಆಗ್ತಾರಾ ಎಂದು ಕೇಳುತ್ತಾ ಇದ್ದಾರೆ’ ಎಂಬುದಾಗಿ ಸಂದರ್ಶಕರು ಕೇಳಿದರು. ಆಗ ಕಿರಣ್ ರಾಜ್ ಅವರು, ‘ಎಪಿಸೋಡ್​ನಲ್ಲಿ ಅವರೇ ಹಾಕುತ್ತಾರೆ, ಆಗ ನೋಡಿ’ ಎಂದು ಕಿರಣ್ ರಾಜ್ ಹೇಳಿದ್ದಾರೆ. ‘ನೀವು ಏನು ನಿರೀಕ್ಷಿಸುತ್ತೀರೋ ಅದಂತೂ ಆಗಲ್ಲ. ನಮ್ಮ ವಿಮರ್ಶೆ ಮೇಲೆ ಕಥೆ ಬರೆಯಲಾಗುತ್ತದೆ ಎಂದು ಎಲ್ಲರೂ ಊಹಿಸುತ್ತಾರೆ. ಆದರೆ, ಅದಕ್ಕೆ ವಿರುದ್ಧವಾಗಿ ಮಾಡಿದಾಗಲೇ ಟಿಆರ್​ಪಿ ಹೆಚ್ಚುತ್ತದೆ’ ಎಂದು ಕಿರಣ್ ರಾಜ್ ಹೇಳಿದ್ದಾರೆ.

ಇದನ್ನೂ ಓದಿ
Image
ಜೀ ಕನ್ನಡ ವೇದಿಕೆ ಮೇಲೆ ಅನುಶ್ರೀ ಮಡಿಲು ತುಂಬಿದ ತಾರಾ; ಮಗಳಂತೆ ಭಾವುಕ
Image
‘ತಾಳ್ಮೆಯಿಂದ ಕಾದಿದ್ದಕ್ಕೆ ಅರ್ಥಪೂರ್ಣವಾದ ತಾಳಿ ಬಿದ್ದಿದೆ’; ಅನುಶ್ರೀ
Image
ಅಕ್ಷಯ್ ಹೇಗೆ ಅಷ್ಟು ಬೇಗ ಸಿನಿಮಾ ಮಾಡ್ತಾರೆ? ಅಜಯ್ ದೇವಗನ್ ಫನ್ನಿ ವಿವರಣೆ
Image
ಹಠ ಮಾಡಿ ವಿಷ್ಣುವರ್ಧನ್ ಸಿನಿಮಾದಲ್ಲಿ ನಟಿಸಿದ್ದ ನಟ ಅಕ್ಷಯ್ ಕುಮಾರ್

ಸದ್ಯ ಕರ್ಣನು ನಿತ್ಯ ಹಾಗೂ ನಿಧಿ ಇಬ್ಬರನ್ನೂ ಮದುವೆ ಆಗುತ್ತಾನೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಸದ್ಯ ಕಿರಣ್ ರಾಜ್ ನಿಧಿಯನ್ನು ಪ್ರೀತಿಸುತ್ತಿದ್ದಾನೆ. ಹೀಗಾಗಿ, ಜನರ ಊಹೆ ತಪ್ಪಾಗಬೇಕು ಎಂದು ಕರ್ಣ ಹಾಗೂ ನಿತ್ಯಾ ಮದುವೆ ಮಾಡಿಸುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ನಿಧಿ-ನಿತ್ಯಾ ಇಬ್ಬರನ್ನೂ ಮದವೆ ಆಗ್ತಾನೆ ಕರ್ಣ? ಸಿಕ್ತು ದೊಡ್ಡ ಸೂಚನೆ

‘ಕರ್ಣ’ ಧಾರಾವಾಹಿ ಸದ್ಯ ಟಿಆರ್​ಪಿಯಲ್ಲಿ ಟಾಪ್ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಆರಂಭದಿಂದಲೇ ಬಹುತೇಕ ವಾರಗಳಲ್ಲಿ ಟಿಆರ್​ಪಿಯಲ್ಲಿ ಮೊದಲ ಸ್ಥಾನವನ್ನೇ ಪಡೆದುಕೊಳ್ಳುತ್ತಾ ಬರುತ್ತಿತ್ತು. ಈ ಧಾರಾವಾಹಿ ಬಗ್ಗೆ ಹಲವು ತಿರುವುಗಳನ್ನು ಪಡೆದು ಸಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ