AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಪ್ಪಡಿ ಕಲ್ಲು ಎಳೆದರೂ ನಗುತ್ತಲೇ ಇದ್ದಾನೆ ಕರ್ಣ; ರಮೇಶ್ ಶಾಕ್

ಕರ್ಣ ಧಾರಾವಾಹಿಯು ನಿತ್ಯಾ-ಕರ್ಣ ವಿವಾಹದೊಂದಿಗೆ ಮಹತ್ವದ ತಿರುವು ಪಡೆದಿದೆ. ರಮೇಶ್ ಕುತಂತ್ರದಿಂದಾಗಿ ನಿಧಿ ಬದಲಿಗೆ ನಿತ್ಯಾಳನ್ನು ಕರ್ಣ ಮದುವೆಯಾಗಿದ್ದಾನೆ. ಕರ್ಣ ದುಃಖಿತನಾಗುವನೆಂದು ರಮೇಶ್ ನಿರೀಕ್ಷಿಸಿದ್ದರೂ, ಕರ್ಣನ ದಿಟ್ಟ ನಡೆ ರಮೇಶ್‌ಗೆ ಆಘಾತ ಮೂಡಿಸಿದೆ. ಪ್ರೀತಿಸಿದವಳು ಎದುರಿಗಿದ್ದರೂ ಕರ್ಣ ಸಪ್ಪೆ ಮೋರೆ ಹಾಕದೆ ನಗುತ್ತಿರುವುದು ಕಥೆಗೆ ಹೊಸ ಆಯಾಮ ನೀಡಿದೆ.

ಚಪ್ಪಡಿ ಕಲ್ಲು ಎಳೆದರೂ ನಗುತ್ತಲೇ ಇದ್ದಾನೆ ಕರ್ಣ; ರಮೇಶ್ ಶಾಕ್
ಕರ್ಣ ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 23, 2025 | 8:04 AM

Share

‘ಕರ್ಣ’ ಧಾರಾವಾಹಿಯು ಸಾಕಷ್ಟು ತಿರುವುಗಳನ್ನು ಪಡೆದು ಮುಂದಕ್ಕೆ ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ಕರ್ಣ ಹಾಗೂ ನಿತ್ಯಾ ವಿವಾಹ ನೆರವೇರಿದೆ. ಈ ಘಟನೆ ಬಳಿಕ ಕರ್ಣ ಸೊರಗಿ ಹೋಗುತ್ತಾನೆ, ಆತನ ಕಥೆ ಮುಗಿದೇ ಹೋಯಿತು ಎಂಬುದು ಆತನ ಸಾಕು ತಂದೆ ರಮೇಶ್ ಆಲೋಚನೆ ಆಗಿತ್ತು. ಆದರೆ, ಅಲ್ಲಾಗಿದ್ದೇ ಬೇರೆ. ತಲೆಮೇಲೆ ಚಪ್ಪಡಿ ಕಲ್ಲು ಎಳೆದರೂ ಆತ ನಗುತ್ತಿದ್ದಾನೆ. ಇದರಿಂದ ಆತ ಶಾಕ್​ಗೆ ಒಳಗಾಗಿದ್ದಾನೆ.

ನಿಧಿ ಹಾಗೂ ಕರ್ಣ ಮದುವೆ ಆಗುತ್ತಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಇಬ್ಬರ ಮಧ್ಯೆ ಪ್ರೀತಿ ಮೂಡಿತ್ತು. ಈ ಪ್ರೀತಿ ದಿನ ಕಳೆದಂತೆ ಆಳವಾಗುತ್ತಾ ಹೋಯಿತು. ಆದರೆ, ನಂತರ ಆಗಿದ್ದೇ ಬೇರೆ. ಆರಂಭದಲ್ಲಿ ವಿಲನ್ ಆಗಿದ್ದ ರಮೇಶ್, ಕರ್ಣನಿಗೆ ಪಾಠ ಕಲಿಸಬೇಕು ಎಂದು ಒಳ್ಳೆಯವನ ರೀತಿ ನಟಿಸಿದ. ಕರ್ಣ ಹಾಗೂ ನಿಧಿ ಮದುವೆಯನ್ನು ನಾನೇ ಮಾಡುತ್ತೇನೆ ಎಂದು ನಿಧಿ ಹಾಗೂ ಕರ್ಣ ಇಬ್ಬರಿಗೂ ಭಾಷೆ ಕೊಟ್ಟ.

ಅತ್ತ ತೇಜಸ್ ಹಾಗೂ ನಿಧಿ ಅಕ್ಕ ನಿತ್ಯಾ ವಿವಾಹ ನೆರವೇರಬೇಕಿತ್ತು. ಕೊನೆಯ ಕ್ಷಣದಲ್ಲಿ ತೇಜಸ್​ನ ಕಿಡ್ನ್ಯಾಪ್ ಮಾಡಿಸುವ ಕೆಲಸವನ್ನು ರಮೇಶ್ ಮಾಡಿಸಿದ್ದಾನೆ. ಇದರಿಂದ ನಿತ್ಯಾ ಹಾಗೂ ತೇಜಸ್ ಮದುವೆ ಮುರಿದು ಬಿದ್ದಿದೆ. ಇದೇ ಟೈಮ್​ನ ಬಳಸಿಕೊಂಡ ರಮೇಶ್, ನಿತ್ಯಾ ಹಾಗೂ ಕರ್ಣನ ಮದುವೆ ಮಾಡಿಸಿದ್ದಾನೆ. ಇದರಿಂದ ಕರ್ಣ ಒದ್ದಾಡಿದ್ದಾನೆ. ನಿತ್ಯಾ ಹಾಗೂ ನಿಧಿ ಇಬ್ಬರೂ ಕಣ್ಣೀರಲ್ಲಿ ಕೈ ತೊಳೆದಿದ್ದಾರೆ.

ಇದನ್ನೂ ಓದಿ
Image
ಕಾಮಿಡಿ ಮಾಡುತ್ತಾ ಆಟದ ಗಂಭೀರತೆ ಮರೆತ ಗಿಲ್ಲಿ; ತಾಳ್ಮೆ ಕಳೆದುಕೊಂಡ ಕಾವ್ಯಾ
Image
‘ಕಾಂತಾರ: ಚಾಪ್ಟರ್ 1’ ಅಬ್ಬರ; ಸಾವಿರದ ಕ್ಲಬ್ ಸೇರಲು ಇನ್ನೆಷ್ಟು ಕೋಟಿ ಬೇಕು
Image
ದೀಪಾವಳಿಗೆ ಬಂಪರ್ ಲಾಟರಿ; ಡಬಲ್ ಡಿಜಿಟ್ ಕಲೆಕ್ಷನ್ ಮಾಡಿದ ‘ಕಾಂತಾರ’
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

ನಿಧಿ ಕೂಡ ತಮ್ಮದೇ ಮನೆಗೆ ಬಂದು ಉಳಿದುಕೊಳ್ಳಬೇಕು ಎಂಬ ಕಾರಣಕ್ಕೆ ಅವರ ಮನೆಗೆ ಬೆಂಕಿ ಹಚ್ಚಿಸಿದ್ದಾನೆ. ಪ್ರಿತಿಸಿದಾಕೆ ಎದುರೇ ಕಾಣುತ್ತಿದ್ದರೆ ಕರ್ಣ ಬೇಸರದಲ್ಲಿ ಇರುತ್ತಾನೆ ಎಂಬುದು ರಮೇಶ್ ಆಲೋಚನೆ ಆಗಿತ್ತು. ಆದರೆ, ಅಲ್ಲಾಗಿದ್ದೇ ಬೇರೆ. ಮದುವೆ ಮರುದಿನ ಕರ್ಣ ನಗು ನಗುತ್ತಾ ಕಾಫಿ ತಂದು ಕೊಟ್ಟಿದ್ದಾನೆ. ಇದನ್ನು ನೋಡಿ ರಮೇಶ್ ಶಾಕ್​ಗೆ ಒಳಗಾಗಿದ್ದಾನೆ. ಆತನಿಗೆ ಏನು ಮಾಡಬೇಕು ಎಂಬುದೇ ತೋಚಿಲ್ಲ.

ದನ್ನೂ ಓದಿ: ನಿತ್ಯಾ ಹಾಗೂ ಕರ್ಣ ವಿವಾಹಕ್ಕೆ ದೊಡ್ಡ ಟ್ವಿಸ್ಟ್; ನಿಧಿ ಫ್ಯಾನ್ಸ್ ಫುಲ್ ಖುಷ್

ಕರ್ಣನ ಮೇಲೆ ಚಪ್ಪಡಿ ಕಲ್ಲು ಎಳೆದಿದ್ದಾನೆ ರಮೇಶ್. ಇದರಿಂದ ಕರ್ಣ ಅಳುತ್ತಾ, ಸಪ್ಪೆ ಮೋರೆ ಹಾಕಿಕೊಂಡು ಕೂತಿರುತ್ತಾನೆ ಎಂಬುದು ರಮೇಶ್ ಆಲೋಚನೆ ಆಗಿತ್ತು. ಆದರೆ, ಕರ್ಣ ಇದಕ್ಕೆ ಟ್ವಿಸ್ಟ್ ಕೊಟ್ಟಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ