AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆಯಲ್ಲಿರೋ ಮಗು ವಿಚಾರ ಹೇಳೇಬಿಟ್ಟ ಕರ್ಣ; ಶಾಕ್ ಆದ ನಿತ್ಯಾ

Karna Serial: ನಿತ್ಯಾ ಹಾಗೂ ತೇಜಸ್​ನ ಒಂದು ಮಾಡಬೇಕು ಎಂದು ಕರ್ಣ ನಿರ್ಧರಿಸಿಯಾಗಿದೆ. ಈ ಕಾರಣದಿಂದಲೇ ಫೇಕ್ ಮದುವೆ ಮಾಡಿಕೊಂಡಿದ್ದಾನೆ ಕರ್ಣ. ಆದರೆ, ಇದು ಹೊರಗಿನ ಸಮಾಜಕ್ಕೆ ತಿಳಿದಿಲ್ಲ. ಇದರ ಜೊತೆಗೆ ನಿತ್ಯಾ ಪ್ರೆಗ್ನೆಂಟ್ ಎಂಬ ವಿಚಾರ ಕರ್ಣನಿಗೆ ಬಿಟ್ಟು ಇನ್ಯಾರಿಗೂ ತಿಳಿದಿರಲಿಲ್ಲ.

ಹೊಟ್ಟೆಯಲ್ಲಿರೋ ಮಗು ವಿಚಾರ ಹೇಳೇಬಿಟ್ಟ ಕರ್ಣ; ಶಾಕ್ ಆದ ನಿತ್ಯಾ
ಕರ್ಣ ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 05, 2025 | 7:53 AM

Share

‘ಕರ್ಣ’ ಧಾರಾವಾಹಿಯಲ್ಲಿ ಸದ್ಯ ನಿತ್ಯಾ ಹಾಗೂ ಕರ್ಣ (Karna Serial) ಮಧ್ಯೆ ವಿವಾಹ ನಡೆದಿರುವುದು ವೀಕ್ಷಕರ ಅಸಮಾಧಾನಕ್ಕೆ ಕಾರಣ ಆಗಿದೆ. ನಿಧಿ ಅಭಿಮಾನಿಗಳು ಇದನ್ನು ಒಪ್ಪಿಕೊಳ್ಳುತ್ತಿಲ್ಲ. ಹೀಗಿರುವಾಗಲೇ ನಿತ್ಯಾ ಹೊಟ್ಟೆಯಲ್ಲಿ ಮಗು ಇದೆ ಎಂಬ ವಿಚಾರವನ್ನು ಹೇಳಲಾಗಿದೆ. ಇದನ್ನು ಕೇಳಿ ನಿತ್ಯಾ ಶಾಕ್​ಗೆ ಒಳಗಾಗಿದ್ದಾಳೆ. ಕಥೆ ಯಾವ ರೀತಿಯಲ್ಲಿ ಸಾಗುತ್ತದೆ ಎಂಬ ಕುತೂಹಲ ಮೂಡಿದೆ.

ನಿತ್ಯಾ ಹಾಗೂ ತೇಜಸ್ ನಡುವೆ ಪ್ರೀತಿ ಮೂಡಿತ್ತು. ಇಬ್ಬರ ಮಧ್ಯೆ ಮದುವೆ ಕೂಡ ಏರ್ಪಡಬೇಕಿತ್ತು. ಇದಕ್ಕೆ ಎಲ್ಲ ತಯಾರಿ ಆಗಿತ್ತು. ಆದರೆ, ಕರ್ಣ ಹಾಗೂ ನಿಧಿಯನ್ನು ಬೇರೆ ಮಾಡಬೇಕು ಎಂಬ ಕಾರಣಕ್ಕೆ ತೇಜಸ್​ನ ಕಿಡ್ನ್ಯಾಪ್ ಮಾಡಿಸಿ, ನಿತ್ಯಾ ಹಾಗೂ ಕರ್ಣ ಮದುವೆ ಆಗುವಂತೆ ಮಾಡಿದ್ದು ರಮೇಶ್. ಈ ಎಲ್ಲಾ ಬೆಳವಣಿಗೆ ಬಳಿಕ ಸಾಕಷ್ಟು ಕುತೂಹಲ ಮೂಡಿದೆ. ಈಗ ತೇಜಸ್ ಎಲ್ಲಿದ್ದಾನೆ ಎಂಬ ವಿಚಾರ ತಿಳಿದು ಕರ್ಣ ಹಾಗೂ ನಿತ್ಯಾ ಚಿಕ್ಕಮಗಳೂರಿಗೆ ತೆರಳಿದ್ದಾರೆ.

ನಿತ್ಯಾ ಹಾಗೂ ತೇಜಸ್​ನ ಒಂದು ಮಾಡಬೇಕು ಎಂದು ಕರ್ಣ ನಿರ್ಧರಿಸಿಯಾಗಿದೆ. ಈ ಕಾರಣದಿಂದಲೇ ಫೇಕ್ ಮದುವೆ ಮಾಡಿಕೊಂಡಿದ್ದಾನೆ ಕರ್ಣ. ಆದರೆ, ಇದು ಹೊರಗಿನ ಸಮಾಜಕ್ಕೆ ತಿಳಿದಿಲ್ಲ. ಇದರ ಜೊತೆಗೆ ನಿತ್ಯಾ ಪ್ರೆಗ್ನೆಂಟ್ ಎಂಬ ವಿಚಾರ ಕರ್ಣನಿಗೆ ಬಿಟ್ಟು ಇನ್ಯಾರಿಗೂ ತಿಳಿದಿರಲಿಲ್ಲ.

ಇದನ್ನೂ ಓದಿ: ‘ಮಿಲನ’ ಕಥೆ ರೀತಿ ಸಾಗುತ್ತಿದೆ ‘ಕರ್ಣ’; ನಿತ್ಯಾ-ಸೂರಜ್ ಒಂದು ಮಾಡಲು ಮುಂದಾದ ಕರ್ಣ

ಕರ್ಣ ಹಾಗೂ ನಿತ್ಯಾ ಸದ್ಯ ಚಿಕ್ಕಮಗಳೂರಿಗೆ ತೆರಳಿದ್ದಾರೆ. ಅಲ್ಲಿ ತೇಜಸ್ ಕಾರಿನಲ್ಲಿ ಹೋಗೋದು ಕಂಡ ನಿತ್ಯಾ ಓಡೋಡಿ ಹೋಗಿದ್ದಾಳೆ. ಆಗ ಹಿಂದಿನಿಂದ ಬರುತ್ತಿದ್ದ ಟಿಟಿ ಅಪಘಾತ ಮಾಡುವುದರಲ್ಲಿ ಇತ್ತು. ಇದರಿಂದ ನಿತ್ಯಾ ತಪ್ಪಿಸಿಕೊಂಡಳು. ಆಗ ನಿತ್ಯಾಗೆ ಕರ್ಣ ಬೈದನು. ‘ನೀವು ನನ್ನ ಬಗ್ಗೆ ಕೇರ್ ಮಾಡೋದು ಬಿಡಿ’ ಎಂದು ನಿತ್ಯಾ ಬೇಡಿಕೊಂಡಳು. ‘ನನಗೆ ಯೋಚನೆ ಆಗುತ್ತಿರುವುದು ನಿಮ್ಮ ಬಗ್ಗೆ ಅಲ್ಲ. ನಿಮ್ಮ ಹೊಟ್ಟೆಯಲ್ಲಿರೋ ಮಗುವಿನ ಬಗ್ಗೆ’ ಎಂದು ಕರ್ಣ ಹೇಳಿದ್ದಾನೆ. ಇದನ್ನು ಕೇಳಿ ನಿತ್ಯಾ ಶಾಕ್ ಆಗಿದ್ದಾಳೆ. ಈಗ ಜನಿಸುತ್ತಿರೋ ಮಗು ಕರ್ಣನದ್ದೇ ಇರಬೇಕು ಎಂದು ನಿಧಿ ಕೂಡ ಭಾವಿಸೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?