AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಣ’ ಧಾರಾವಾಹಿಗೆ ಶಾಕ್ ಕೊಟ್ಟ ಟಿಆರ್​ಪಿ ರೇಟಿಂಗ್; ಕುಸಿಯಿತು ಸ್ಥಾನ

ಕರ್ಣ ಧಾರಾವಾಹಿಯ ಟಿಆರ್​ಪಿ ರೇಟಿಂಗ್‌ನಲ್ಲಿ ಗಮನಾರ್ಹ ಇಳಿಕೆಯಾಗಿದೆ. ಹೀಗಾಗಿ, ಧಾರಾವಾಹಿ ಮೊದಲ ಸ್ಥಾನ ಕಳೆದುಕೊಂಡಿದೆ. ಕಥೆ ಸಾಗುತ್ತಿರುವುದು ನಿಧಾನ ಆಗಿರುವುದೇ ಇದಕ್ಕೆ ಕಾರಣ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಲಕ್ಷ್ಮೀ ನಿವಾಸ, ಅಣ್ಣಯ್ಯ ಮತ್ತು ನಾ ನಿನ್ನ ಬಿಡಲಾರೆ ಧಾರಾವಾಹಿಗಳು ಟಿಆರ್​ಪಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿವೆ.

‘ಕರ್ಣ’ ಧಾರಾವಾಹಿಗೆ ಶಾಕ್ ಕೊಟ್ಟ ಟಿಆರ್​ಪಿ ರೇಟಿಂಗ್; ಕುಸಿಯಿತು ಸ್ಥಾನ
ಕರ್ಣ
ರಾಜೇಶ್ ದುಗ್ಗುಮನೆ
|

Updated on: Sep 05, 2025 | 7:27 AM

Share

‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ, ನಮ್ರತಾ ಗೌಡ ಹಾಗೂ ಕಿರಣ್ ರಾಜ್ ನಟಿಸುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರ ಆರಂಭಿಸಿದ ದಿನದಿಂದಲೂ ಮೊದಲ ಸ್ಥಾನ ಕಾಪಾಡಿಕೊಳ್ಳುತ್ತಾ ಬಂದಿತ್ತು. ಆದರೆ, ಟಿಆರ್​ಪಿಯಲ್ಲಿ ಗಣನೀಯ ಇಳಿಕೆ ಕಂಡಿದೆ. ಹೀಗಾಗಿ, ಮೊದಲ ಸ್ಥಾನ ಕೂಡ ಕುಸಿದು ಹೋಗಿದೆ. ಈ ಧಾರಾವಾಹಿ (Karna Serial) ಕಥೆ ಮುಂದಕ್ಕೆ ಸಾಗುತ್ತಿಲ್ಲ. ಹೀಗಾಗಿ, ಟಿಆರ್​ಪಿ ಕುಸಿದಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ನಮ್ರತಾ ಗೌಡ, ಕಿರಣ್ ರಾಜ್ ಹಾಗೂ ಭವ್ಯಾ ಗೌಡ ಈ ಮೂವರಿಗೂ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೂವರು ಧಾರಾವಾಹಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಈ ಕಾರಣದಿಂದಲೇ ‘ಕರ್ಣ’ ಧಾರಾವಾಹಿ ಆರಂಭದ ಕೆಲ ವಾರಗಳಲ್ಲಿ 10+ ಟಿವಿಆರ್ ಪಡೆದುಕೊಂಡಿತ್ತು. ವಾರಗಳು ಕಳೆದಂತೆ ಟಿಆರ್​ಪಿಯಲ್ಲಿ ಕುಸಿತ ಕಾಣುತ್ತಿದೆ.

‘ಕರ್ಣ’ ಧಾರಾವಾಹಿ ಆರಂಭ ಆದಾಗಿನಿಂದ ಇಲ್ಲಿಯವರೆಗೂ ಕಥೆ ಒಂದೇ ರೀತಿಯಲ್ಲಿ ಸಾಗುತ್ತಿದೆ. ಕರ್ಣ ಹಾಗೂ ನಿಧಿ ಮಧ್ಯೆ ಪ್ರೀತಿ ಇದೆ. ಆದರೆ, ಒಬ್ಬರಿಗೊಬ್ಬರು ಅದನ್ನು ಸರಿಯಾಗಿ ಹೇಳಿಕೊಂಡಿಲ್ಲ. ಇನ್ನು, ಕರ್ಣನ ಮನೆಯವರ ಸ್ಥಿತಿಯಲ್ಲಿ ಕೊಂಚ ಬದಲಾವಣೆ ಆಗಿದೆ. ನಿತ್ಯಾ ನಿಶ್ಚಿತಾರ್ಥ ನೆರವೇರಿದೆ. ಧಾರಾವಾಹಿ ಆರಂಭ ಆದಾಗಿನಿಂದ ಇಲ್ಲಿಯವರೆಗೆ ಇವಿಷ್ಟೇ ಘಟನೆಗಳು ನಡೆದಿರೋದು.

ಇದನ್ನೂ ಓದಿ
Image
‘ಸು ಫ್ರಮ್ ಸೋ’ ಒಟಿಟಿ ರಿಲೀಸ್ ದಿನಾಂಕ ಫೇಕ್; ಹಾಟ್​ಸ್ಟಾರ್​ನವರು ಹೇಳೋದೇನು
Image
ಶಂಕರ್​ ನಾಗ್​​ಗೆ ಅಣ್ಣ ಮಾತ್ರ ಅಲ್ಲ, ಸಾಕು ತಂದೆಯೂ ಆಗಿದ್ದ ಅನಂತ್ ನಾಗ್
Image
‘ಕಾಂತಾರ: ಚಾಪ್ಟರ್​ 1’ ಎದುರು ರಿಲೀಸ್ ಆಗಲಿದೆ ದೊಡ್ಡ ಹೀರೋ ಸಿನಿಮಾ
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು

ಈ ಎಲ್ಲಾ ಕಾರಣದಿಂದ ಧಾರಾವಾಹಿ ಟಿಆರ್​ಪಿ ದಿನ ಕಳೆದಂತೆ ಕುಸಿತ ಕಾಣುತ್ತಿದೆ. ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’, ‘ನಾ ನಿನ್ನ ಬಿಡಲಾರೆ’ ಹಾಗೂ ‘ಕರ್ಣ’ ಧಾರಾವಾಹಿಗಳು ಸ್ಥಾನ ಪಡೆದಿವೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ.

ಇದನ್ನೂ ಓದಿ: ಕಿರಣ್ ರಾಜ್ ಸಿನಿಮಾ ಜೊತೆ ‘ಕರ್ಣ’ ಧಾರಾವಾಹಿ ಮಾಡ್ತಿರೋದೇಕೆ? ಆ ವಿಶೇಷ ವ್ಯಕ್ತಿಯೇ ಕಾರಣ

‘ಕರ್ಣ’ ಧಾರಾವಾಹಿಯ ಕಥೆಯಲ್ಲಿ ಪ್ರೇಕ್ಷಕರು ಪ್ರಗತಿಯನ್ನು ನಿರೀಕ್ಷಿಸುತ್ತಿದ್ದಾರೆ. ಅದು ಸಾಧ್ಯವಾಗದಲ್ಲಿ ಧಾರಾವಾಹಿ ಮತ್ತಷ್ಟು ಹಿಂದಕ್ಕೆ ಬೀಳುವ ಸಾಧ್ಯತೆ ಇದೆ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಎದುರಾಗಿವೆ. ಹೀಗಾಗಿ, ಈ ಧಾರಾವಾಹಿ ಮುಂದಿನ ವಾರ ಮೊದಲ ಸ್ಥಾನ ಪ್ರವೇಶಿಸುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ