AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಣ’ ಧಾರಾವಾಹಿಗೆ ಶಾಕ್ ಕೊಟ್ಟ ಟಿಆರ್​ಪಿ ರೇಟಿಂಗ್; ಕುಸಿಯಿತು ಸ್ಥಾನ

ಕರ್ಣ ಧಾರಾವಾಹಿಯ ಟಿಆರ್​ಪಿ ರೇಟಿಂಗ್‌ನಲ್ಲಿ ಗಮನಾರ್ಹ ಇಳಿಕೆಯಾಗಿದೆ. ಹೀಗಾಗಿ, ಧಾರಾವಾಹಿ ಮೊದಲ ಸ್ಥಾನ ಕಳೆದುಕೊಂಡಿದೆ. ಕಥೆ ಸಾಗುತ್ತಿರುವುದು ನಿಧಾನ ಆಗಿರುವುದೇ ಇದಕ್ಕೆ ಕಾರಣ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಲಕ್ಷ್ಮೀ ನಿವಾಸ, ಅಣ್ಣಯ್ಯ ಮತ್ತು ನಾ ನಿನ್ನ ಬಿಡಲಾರೆ ಧಾರಾವಾಹಿಗಳು ಟಿಆರ್​ಪಿ ಪಟ್ಟಿಯಲ್ಲಿ ಮುಂಚೂಣಿಯಲ್ಲಿವೆ.

‘ಕರ್ಣ’ ಧಾರಾವಾಹಿಗೆ ಶಾಕ್ ಕೊಟ್ಟ ಟಿಆರ್​ಪಿ ರೇಟಿಂಗ್; ಕುಸಿಯಿತು ಸ್ಥಾನ
ಕರ್ಣ
ರಾಜೇಶ್ ದುಗ್ಗುಮನೆ
|

Updated on: Sep 05, 2025 | 7:27 AM

Share

‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ, ನಮ್ರತಾ ಗೌಡ ಹಾಗೂ ಕಿರಣ್ ರಾಜ್ ನಟಿಸುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರ ಆರಂಭಿಸಿದ ದಿನದಿಂದಲೂ ಮೊದಲ ಸ್ಥಾನ ಕಾಪಾಡಿಕೊಳ್ಳುತ್ತಾ ಬಂದಿತ್ತು. ಆದರೆ, ಟಿಆರ್​ಪಿಯಲ್ಲಿ ಗಣನೀಯ ಇಳಿಕೆ ಕಂಡಿದೆ. ಹೀಗಾಗಿ, ಮೊದಲ ಸ್ಥಾನ ಕೂಡ ಕುಸಿದು ಹೋಗಿದೆ. ಈ ಧಾರಾವಾಹಿ (Karna Serial) ಕಥೆ ಮುಂದಕ್ಕೆ ಸಾಗುತ್ತಿಲ್ಲ. ಹೀಗಾಗಿ, ಟಿಆರ್​ಪಿ ಕುಸಿದಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ನಮ್ರತಾ ಗೌಡ, ಕಿರಣ್ ರಾಜ್ ಹಾಗೂ ಭವ್ಯಾ ಗೌಡ ಈ ಮೂವರಿಗೂ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೂವರು ಧಾರಾವಾಹಿ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಈ ಕಾರಣದಿಂದಲೇ ‘ಕರ್ಣ’ ಧಾರಾವಾಹಿ ಆರಂಭದ ಕೆಲ ವಾರಗಳಲ್ಲಿ 10+ ಟಿವಿಆರ್ ಪಡೆದುಕೊಂಡಿತ್ತು. ವಾರಗಳು ಕಳೆದಂತೆ ಟಿಆರ್​ಪಿಯಲ್ಲಿ ಕುಸಿತ ಕಾಣುತ್ತಿದೆ.

‘ಕರ್ಣ’ ಧಾರಾವಾಹಿ ಆರಂಭ ಆದಾಗಿನಿಂದ ಇಲ್ಲಿಯವರೆಗೂ ಕಥೆ ಒಂದೇ ರೀತಿಯಲ್ಲಿ ಸಾಗುತ್ತಿದೆ. ಕರ್ಣ ಹಾಗೂ ನಿಧಿ ಮಧ್ಯೆ ಪ್ರೀತಿ ಇದೆ. ಆದರೆ, ಒಬ್ಬರಿಗೊಬ್ಬರು ಅದನ್ನು ಸರಿಯಾಗಿ ಹೇಳಿಕೊಂಡಿಲ್ಲ. ಇನ್ನು, ಕರ್ಣನ ಮನೆಯವರ ಸ್ಥಿತಿಯಲ್ಲಿ ಕೊಂಚ ಬದಲಾವಣೆ ಆಗಿದೆ. ನಿತ್ಯಾ ನಿಶ್ಚಿತಾರ್ಥ ನೆರವೇರಿದೆ. ಧಾರಾವಾಹಿ ಆರಂಭ ಆದಾಗಿನಿಂದ ಇಲ್ಲಿಯವರೆಗೆ ಇವಿಷ್ಟೇ ಘಟನೆಗಳು ನಡೆದಿರೋದು.

ಇದನ್ನೂ ಓದಿ
Image
‘ಸು ಫ್ರಮ್ ಸೋ’ ಒಟಿಟಿ ರಿಲೀಸ್ ದಿನಾಂಕ ಫೇಕ್; ಹಾಟ್​ಸ್ಟಾರ್​ನವರು ಹೇಳೋದೇನು
Image
ಶಂಕರ್​ ನಾಗ್​​ಗೆ ಅಣ್ಣ ಮಾತ್ರ ಅಲ್ಲ, ಸಾಕು ತಂದೆಯೂ ಆಗಿದ್ದ ಅನಂತ್ ನಾಗ್
Image
‘ಕಾಂತಾರ: ಚಾಪ್ಟರ್​ 1’ ಎದುರು ರಿಲೀಸ್ ಆಗಲಿದೆ ದೊಡ್ಡ ಹೀರೋ ಸಿನಿಮಾ
Image
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು

ಈ ಎಲ್ಲಾ ಕಾರಣದಿಂದ ಧಾರಾವಾಹಿ ಟಿಆರ್​ಪಿ ದಿನ ಕಳೆದಂತೆ ಕುಸಿತ ಕಾಣುತ್ತಿದೆ. ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’, ‘ನಾ ನಿನ್ನ ಬಿಡಲಾರೆ’ ಹಾಗೂ ‘ಕರ್ಣ’ ಧಾರಾವಾಹಿಗಳು ಸ್ಥಾನ ಪಡೆದಿವೆ. ಮೂರನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ.

ಇದನ್ನೂ ಓದಿ: ಕಿರಣ್ ರಾಜ್ ಸಿನಿಮಾ ಜೊತೆ ‘ಕರ್ಣ’ ಧಾರಾವಾಹಿ ಮಾಡ್ತಿರೋದೇಕೆ? ಆ ವಿಶೇಷ ವ್ಯಕ್ತಿಯೇ ಕಾರಣ

‘ಕರ್ಣ’ ಧಾರಾವಾಹಿಯ ಕಥೆಯಲ್ಲಿ ಪ್ರೇಕ್ಷಕರು ಪ್ರಗತಿಯನ್ನು ನಿರೀಕ್ಷಿಸುತ್ತಿದ್ದಾರೆ. ಅದು ಸಾಧ್ಯವಾಗದಲ್ಲಿ ಧಾರಾವಾಹಿ ಮತ್ತಷ್ಟು ಹಿಂದಕ್ಕೆ ಬೀಳುವ ಸಾಧ್ಯತೆ ಇದೆ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಎದುರಾಗಿವೆ. ಹೀಗಾಗಿ, ಈ ಧಾರಾವಾಹಿ ಮುಂದಿನ ವಾರ ಮೊದಲ ಸ್ಥಾನ ಪ್ರವೇಶಿಸುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್