AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಶಾಕ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಆರಂಭದಲ್ಲೇ ಒಂದು ವಿಘ್ನ ಎದುರಾಗಿದೆ. ಸರಿಯಾದ ರೀತಿಯಲ್ಲಿ ತಾಜ್ಯ ವಿಲೇವಾರಿ ಮಾಡದ ಕಾರಣದಿಂದ ಕಾನೂನಿನ ಸಂಕಷ್ಟ ಎದುರಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜಾಲಿವುಡ್ ಸ್ಟುಡಿಯೋಗೆ ನೋಟಿಸ್ ಜಾರಿ ಮಾಡಲಾಗಿದೆ.

ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್: ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಶಾಕ್
Bigg Boss Kannada 12
Shivaraj
| Edited By: |

Updated on: Oct 06, 2025 | 7:47 PM

Share

ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಎಂಬ ಖ್ಯಾತಿ ಹೊಂದಿರುವ ‘ಬಿಗ್ ಬಾಸ್’ ಒಂದಷ್ಟು ವಿಘ್ನಗಳನ್ನು ಎದುರಿಸುತ್ತಿದೆ. ಕಳೆದ ಸೀಸನ್​​ನಲ್ಲಿ ಮಹಿಳಾ ಆಯೋಗದಿಂದ ಬಿಗ್ ಬಾಸ್​ ಆಯೋಜಕರಿಗೆ ನೋಟಿಸ್ ನೀಡಲಾಗಿತ್ತು. ಈಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (Pollution Control Board) ನೋಟಿಸ್ ಜಾರಿ ಮಾಡಲಾಗಿದೆ. ‘ಬಿಗ್​ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋ ಆಯೋಜಕರು ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್​ ನೀಡಲಾಗಿದೆ. ಬಿಗ್ ಬಾಸ್ ಮನೆಯನ್ನು ಬಂದ್ ಮಾಡುವಂತೆ ನೋಟಿಸ್ ಕೊಡಲಾಗಿದೆ.

ಬಿಡದಿ ಸಮೀಪ ಇರುವ ಜಾಲಿವುಡ್ ಸ್ಟುಡಿಯೋದಲ್ಲಿ ಈ ಬಾರಿಯ ಬಿಗ್ ಬಾಸ್ ಮನೆಯನ್ನು ನಿರ್ಮಿಸಲಾಗಿದೆ. ಒಟ್ಟು 19 ಜನರು ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಾಗಿ ಎಂಟ್ರಿ ನೀಡಿದ್ದರು. ಬಳಿಕ ಇಬ್ಬರು ಎಲಿಮಿನೇಟ್ ಆಗಿದ್ದಾರೆ. ತೆರೆ ಹಿಂದೆ ನೂರಾರು ಮಂದಿ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಿಂದ ಸಾಕಷ್ಟು ತಾಜ್ಯ ಉಂಟಾಗಲಿದೆ.

ಜಾಲಿವುಡ್ ಸ್ಟುಡಿಯೋದಲ್ಲಿ ಉಂಟಾಗುತ್ತಿರುವ ತಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಸ್ಕರಣೆ ಮತ್ತು ವಿಲೇವಾರಿ ಮಾಡಿಲ್ಲ ಎಂಬ ಆರೋಪ ಎದುರಾಗಿದೆ. ಅಲ್ಲದೇ, ಜಾಲಿವುಡ್ ಸ್ಡುಡಿಯೋ ನಡೆಸಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆದಿಲ್ಲ ಎನ್ನಲಾಗಿದೆ. ಈ ಕಾರಣದಿಂದ ಶೋ ಆಯೋಜಕರಿಗೆ ನೋಟಿಸ್ ನೀಡಲಾಗಿದ್ದು, ಬಂದ್ ಮಾಡುವಂತೆ ಸೂಚಿಸಲಾಗಿದೆ.

ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಒಂದು ಅಮ್ಯೂಸ್​​ಮೆಂಟ್ ಪಾರ್ಕ್. ಅದರಿಂದ ದೊಡ್ಡ ಪ್ರಮಾಣದ ತಾಜ್ಯ ನೀರು ಹೊರಬರುತ್ತಿದೆ. ಅದನ್ನು ಸರಿಯಾಗಿ ಸಂಸ್ಕರಿಸದೇ ಹೊರಗೆ ಬಿಡಲಾಗುತ್ತಿದೆ. ಅದರಿಂದಾಗಿ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪೇಪರ್ ತಟ್ಟೆ, ಲೋಟ, ಪ್ಲಾಸ್ಟಿಕ್ ತ್ಯಾಜ್ಯ ಮುಂತಾದ್ದನ್ನು ಕೂಡ ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ ಎಂಬ ಆರೋಪ ಇದೆ.

ಇದನ್ನೂ ಓದಿ: ಬಿಗ್​ ಬಾಸ್​ನಲ್ಲಿ ಸ್ಪರ್ಧಿಸಿದ ಈ ಸ್ಪರ್ಧಿಗಳದ್ದು ಅಕಾಲಿಕ ಮರಣ

ಈ ಎಲ್ಲ ಕಾರಣಗಳಿಂದಾಗಿ ಜಾಲಿವುಡ್ ಸ್ಟುಡಿಯೋಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ಇದರಿಂದಾಗಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ವಿಘ್ನ ಎದುರಾದಂತೆ ಆಗಿದೆ. ಒಂದು ವೇಳೆ ಸೂಕ್ತ ಕ್ರಮ ತೆಗೆದುಕೊಂಡರೆ ಶೋ ನಿಲ್ಲುವ ಸಾಧ್ಯತೆ ಇರುತ್ತದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ನೋಟಿಸ್​​ಗೆ ಬಿಗ್ ಬಾಸ್ ಆಯೋಜಕರು ಏನು ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್