AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ನಿನ್ನ ಬಿಡಲಾರೆ’ ಧಾರಾವಾಹಿಗೆ ಶಾಕ್ ಕೊಟ್ಟ ಪ್ರೇಕ್ಷಕ; ಟಿಆರ್​ಪಿಯಲ್ಲಿ ಯಾರು ಟಾಪ್?

ಕರ್ಣ ಧಾರಾವಾಹಿ ಟಿಆರ್‌ಪಿ ರೇಟಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದ್ದರೆ, ನಾ ನಿನ್ನ ಬಿಡಲಾರೆ ಧಾರಾವಾಹಿಯ ರೇಟಿಂಗ್ ಕುಸಿದಿದೆ. ಅಣ್ಣಯ್ಯ ಮತ್ತು ಲಕ್ಷ್ಮೀ ನಿವಾಸ ಧಾರಾವಾಹಿಗಳು ಉತ್ತಮ ಪ್ರದರ್ಶನ ನೀಡುತ್ತಿವೆ. ಹಳ್ಳಿ ಪವರ್ ಶೋ ಲಾಂಚಿಂಗ್‌ನಲ್ಲಿ ಉತ್ತಮ ಟಿವಿಆರ್ ಪಡೆದಿದ್ದರೂ, ವೀಕ್ಷಕರ ಸಂಖ್ಯೆ ಹೆಚ್ಚಿಸಿಕೊಳ್ಳುವಲ್ಲಿ ಸವಾಲು ಎದುರಿಸುತ್ತಿದೆ.

‘ನಾ ನಿನ್ನ ಬಿಡಲಾರೆ’ ಧಾರಾವಾಹಿಗೆ ಶಾಕ್ ಕೊಟ್ಟ ಪ್ರೇಕ್ಷಕ; ಟಿಆರ್​ಪಿಯಲ್ಲಿ ಯಾರು ಟಾಪ್?
ನಾ ನಿನ್ನ ಬಿಡಲಾರೆ
ರಾಜೇಶ್ ದುಗ್ಗುಮನೆ
|

Updated on: Sep 18, 2025 | 2:56 PM

Share

ಎಷ್ಟೇ ಉತ್ತಮವಾಗಿ ಕಥೆ ಮಾಡಿದರೂ ವೀಕ್ಷಕರಿಗೆ ರುಚಿಸದಿದ್ದರೆ ಆ ಧಾರಾವಾಹಿಯ ಟಿಆರ್​ಪಿ ಕುಸಿತ ಕಾಣುತ್ತದೆ. ಈಗ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ವಿಚಾರದಲ್ಲಿ ಹಾಗೆಯೇ ಆಗಿದೆ. ಹಲವು ಟ್ವಿಸ್ಟ್​ಗಳನ್ನು ನೀಡಿದ ಹೊರತಾಗಿಯೂ ಟಿಆರ್​ಪಿಯಲ್ಲಿ ಇಳಿಕೆ ಕಂಡಿದೆ. ಕಿರಣ್ ರಾಜ್ ನಟನೆಯ ‘ಕರ್ಣ’ ಧಾರಾವಾಹಿ (Karna Serial) ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದು ಮುಂದಕ್ಕೆ ಸಾಗುತ್ತಿದೆ.

‘ಕರ್ಣ’ ಧಾರಾವಾಹಿಯಲ್ಲಿ ಕಿರಣ್ ರಾಜ್, ನಮ್ರತಾ ಗೌಡ ಹಾಗೂ ಭವ್ಯಾ ಗೌಡ ನಟಿಸುತ್ತಿದ್ದಾರೆ. ಈ ಮೂವರಿಗೂ ದೊಡ್ಡ ಅಭಿಮಾನಿ ಬಳಗ ಇದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದೆ. ಒಳ್ಳೆಯ ಟಿಆರ್​ಪಿ ಪಡೆದು ಧಾರಾವಾಹಿ ಮುಂದಕ್ಕೆ ಸಾಗುತ್ತಿದೆ. ಈ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ.

ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ‘ಕರ್ಣ’ ಹಾಗೂ ‘ಅಣ್ಣಯ್ಯ’ ಎರಡೂ ಧಾರಾವಾಹಿಗಳು 9+ ಟಿಆರ್​ಪಿ ಪಡೆದುಕೊಂಡು ಸಾಗುತ್ತಿವೆ. ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುತ್ತಿದೆ. ಈ ಮೂರು ಧಾರಾವಾಹಿಗಳು ಪ್ರೈಮ್ ಟೈಮ್​ನಲ್ಲಿ ಪ್ರಸಾರ ಕಾಣುತ್ತಿವೆ.

ಇದನ್ನೂ ಓದಿ
Image
ವಿಷ್ಣು ನಟನೆಯ ‘ಬಂಧನ’ ಸಿನಿಮಾ ತಡೆಯಲು ನಡೆದ ಪ್ರಯತ್ನಗಳು ಒಂದೆರಡಲ್ಲ
Image
ಇನ್ನೂ ಕಡಿಮೆ ಆಗಿಲ್ಲ ಮಾಲಾಶ್ರೀ ಖದರ್; ಈ ವಿಡಿಯೋನೇ ಸಾಕ್ಷಿ
Image
ವಿಷ್ಣು, ಉಪ್ಪಿ, ಶ್ರುತಿ ಜನ್ಮದಿನ; ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ
Image
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಈ ಧಾರಾವಾಹಿ ರೇಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಯಲ್ಲೂ ಸಾಕಷ್ಟು ಟ್ವಿಸ್ಟ್​ಗಳನ್ನು ನೀಡಲಾಗಿದೆ. ಕೆಲವರಿಗೆ ಇದು ಇಷ್ಟ ಆದರೆ, ಇನ್ನೂ ಕೆಲವರಿಗೆ ಬೇಸರ ತಂದಿದೆ.

ಐದನೇ ಸ್ಥಾನದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಇದೆ. ಈ ಮೊದಲು ಧಾರಾವಾಹಿ ಎರಡನೇ ಸ್ಥಾನ ಪಡೆದುಕೊಂಡ ಉದಾಹರಣೆ ಇದೆ. ಆದರೆ, ಇತ್ತೀಚೆಗೆ ಧಾರಾವಾಹಿ ಪ್ರೇಕ್ಷಕರಿಗೆ ಇಷ್ಟ ಆಗುತ್ತಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ. ಏಕೆಂದರೆ ಈ ಧಾರಾವಾಹಿಯ ಟಿಆರ್​ಪಿ ಏಳಕ್ಕಿಂತ ಕೆಳಗೆ ಕುಸಿದಿದೆ. ಇದು ಧಾರಾವಾಹಿ ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ನಿಧಿಗೆ ಪ್ರಪೋಸ್ ಮಾಡಿಯೇ ಬಿಟ್ಟ ಕರ್ಣ; ಮಗುವಿನಂತೆ ಮಲಗಿಬಿಟ್ಟ ಕಥಾ ನಾಯಕ

‘ಹಳ್ಳಿ ಪವರ್’ ಶೋ ಟಿಆರ್​ಪಿ ಹೊರ ಬಿದ್ದಿದೆ. ಲಾಂಚಿಂಗ್ ಈವೆಂಟ್​​ಗೆ 1.5 ಟಿವಿಆರ್ ಹಾಗೂ ಮೊದಲ ವೀಕ್​ನಲ್ಲಿ 1.7 ಟಿವಿಆರ್​ನ ಪಡೆದುಕೊಂಡಿದೆ. ಈ ಶೋ ಜೀ ಪವರ್​ನಲ್ಲಿ ಪ್ರಸಾರ ಕಾಣುತ್ತಿರುವುದರಿಂದ ಹೆಚ್ಚು ವೀಕ್ಷಕರಿಗೆ ತಲುಪಲು ಸಾಧ್ಯವಾಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!