AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವನು ಜೋಕರ್’; ಫ್ಲರ್ಟ್ ಮಾಡಿ ವರ್ಚಸ್ಸು ಕಳೆದುಕೊಂಡ್ರಾ ಕಾರ್ತಿಕ್?

ಕಾರ್ತಿಕ್ ಅವರು ಆರಂಭದಲ್ಲಿ ಸಂಗೀತಾ ಜೊತೆ ಕ್ಲೋಸ್ ಆಗಿದ್ದರು. ಆದರೆ ಇಬ್ಬರ ಮಧ್ಯೆ ಹೊಂದಾಣಿಕೆ ಬರಲಿಲ್ಲ. ಆ ಬಳಿಕ ಅವರಿಗೆ ಸಿಕ್ಕಿದ್ದು ನಮ್ರತಾ ಗೌಡ. ನಮ್ರತಾ ಜೊತೆ ಕ್ಲೋಸ್ ಆಗೋಕೆ ಅವರು ಪ್ರಯತ್ನಿಸಿದ್ದಾರೆ.

‘ಅವನು ಜೋಕರ್’; ಫ್ಲರ್ಟ್ ಮಾಡಿ ವರ್ಚಸ್ಸು ಕಳೆದುಕೊಂಡ್ರಾ ಕಾರ್ತಿಕ್?
ನಮ್ರತಾ-ಕಾರ್ತಿಕ್
Follow us
ರಾಜೇಶ್ ದುಗ್ಗುಮನೆ
|

Updated on:Jan 11, 2024 | 8:48 AM

ಕಾರ್ತಿಕ್ ಮಹೇಶ್ ಹಾಗೂ ನಮ್ರತಾ ಗೌಡ (Namratha Gowda) ಅವರು ಬಿಗ್ ಬಾಸ್ ಮನೆಯಲ್ಲಿ ಒಟ್ಟಾಗಿ ಸಮಯ ಕಳೆಯುತ್ತಿದ್ದಾರೆ. ಇಬ್ಬರ ಮಧ್ಯೆ ಆಪ್ತತೆ ಹೆಚ್ಚಿದೆ. ನನಗೆ ಕಾರ್ತಿಕ್ ಅವರು ಕಂಫರ್ಟ್ ಜೋನ್ ನೀಡಿದ್ದಾರೆ ಎಂದು ನಮ್ರತಾ ಹೇಳಿಕೊಂಡಿದ್ದಾರೆ. ಇದರ ಜೊತೆಗೆ ಕಾರ್ತಿಕ್ ಅವರನ್ನು ಜೋಕರ್ ಎಂದು ನಮ್ರತಾ ಕರೆದಿದ್ದಾರೆ. ಇತ್ತೀಚೆಗೆ ನಡೆದ ಬೆಳವಣಿಗೆ ಇದಕ್ಕೆ ಕಾರಣ. ಕಾರ್ತಿಕ್ ಅವರ ವರ್ಚಸ್ಸು ಮೊದಲಿದ್ದ ರೀತಿ ಇಲ್ಲ. ಅಲ್ಲಿ, ಇಲ್ಲಿ ಫ್ಲರ್ಟ್ ಮಾಡಿಕೊಂಡು ತಮ್ಮ ನಿಜವಾದ ಆಟವನ್ನು ಅವರು ತೋರಿಸುತ್ತಿಲ್ಲ. ಈಗ ಅವರಿಗೆ ಜೋಕರ್ ಪಟ್ಟವೂ ಸಿಕ್ಕಿದೆ.

ಕಾರ್ತಿಕ್ ಅವರು ಆರಂಭದಲ್ಲಿ ಸಂಗೀತಾ ಜೊತೆ ಕ್ಲೋಸ್ ಆಗಿದ್ದರು. ಆದರೆ ಇಬ್ಬರ ಮಧ್ಯೆ ಹೊಂದಾಣಿಕೆ ಬರಲಿಲ್ಲ. ಆ ಬಳಿಕ ಅವರಿಗೆ ಸಿಕ್ಕಿದ್ದು ನಮ್ರತಾ ಗೌಡ. ನಮ್ರತಾ ಜೊತೆ ಕ್ಲೋಸ್ ಆಗೋಕೆ ಅವರು ಪ್ರಯತ್ನಿಸಿದ್ದಾರೆ. ಕಾರ್ತಿಕ್ ಅವರು ನಡೆದುಕೊಳ್ಳುತ್ತಿರುವ ಬಗ್ಗೆ ವಿನಯ್ ಬಳಿ ನಮ್ರತಾ ಮಾತನಾಡಿದ್ದಾರೆ.

‘ಕಳೆದ ಒಂದು ವಾರದಿಂದ ಅಷ್ಟು ಸ್ವೀಟ್ ಆಗಿ ಏಕೆ ಮಾತನಾಡುತ್ತಿದ್ದೀರಿ ಎಂದು ಕಾರ್ತಿಕ್ ಬಳಿ ಕೇಳಿದೆ. ಅವರು ನಿನ್ನ ಜೊತೆ ಸಮಯ ಕಳೆಯೋಕೆ ನನಗೆ ಖುಷಿ ಇದೆ ಎಂದು ಹೇಳಿದರು’ ಎಂದು ವಿವರಿಸಿದ್ದಾರೆ ನಮ್ರತಾ. ನಂತರ ಕಾರ್ತಿಕ್ ನಡೆಯನ್ನು ನೋಡಿ ಜೋಕರ್ ಎಂದು ಕರೆದಿದ್ದಾರೆ. ಕಾರ್ತಿಕ್ ಮೊದಲು ಸಂಗೀತಾ ಜೊತೆ ಇದ್ದರು. ನಂತರ ತನಿಷಾ ಜೊತೆ ಒಳ್ಳೆಯ ಗೆಳೆತನ ಬೆಳೆಸಿಕೊಂಡರು. ಈ ವಾರ ಆ ಗೆಳೆತನ ಹಾಳಾಗುತ್ತಿದೆ. ಆ ಬಳಿಕ ನಮ್ರತಾ ಜೊತೆ ಅವರು ಆಪ್ತತೆ ಬೆಳೆಸಿಕೊಂಡಿದ್ದಾರೆ.

ಇದನ್ನೂ ಓದಿ: ತನಿಷಾ ಹಾರ್ಟ್​ಗೆ ಗಟ್ಟಿಯಾಗಿ ಚುಚ್ಚಿದ ಕಾರ್ತಿಕ್; ಈ ತಪ್ಪನ್ನು ಅವರು ಎಂದಿಗೂ ಕ್ಷಮಿಸಲ್ಲ..

‘ಅವನು ಬರೀ ದೇಹ ಬೆಳೆಸಿಕೊಂಡು, ಹೂಸು ಬಿಟ್ಕೊಂಡು ಓಡಾಡ್ತಾ ಇರ್ತಾನೆ’ ಎಂದರು ವಿನಯ್. ಆಗ ನಮ್ರತಾ ಅವರು ‘ಜೋಕರ್ ಅವನು’ ಎಂದಿದ್ದಾರೆ. ಈ ಮೊದಲು ಕಾರ್ತಿಕ್​ನ ಪ್ಲೇಯರ್ ಎಂದು ಕರೆದಿದ್ದರು. ಅವರ ಮೇಲಿದ್ದ ಅಭಿಪ್ರಾಯ ಈಗ ಬದಲಾಗಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಬಿಗ್ ಬಾಸ್ ವೀಕ್ಷಣೆಗೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:42 am, Thu, 11 January 24

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ