AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸೆಮಣೆ ಮೇಲೆ ಬಿಗ್​ಬಾಸ್ ಜೋಡಿ ನಮ್ರತಾ-ಕಾರ್ತಿಕ್

Karthik-Namratha: ಬಿಗ್​ಬಾಸ್​ ಸೀಸನ್ 10ರ ಸ್ಪರ್ಧಿಗಳಾದ ಕಾರ್ತಿಕ್ ಮಹೇಶ್ ಹಾಗೂ ನಮ್ರತಾ ಅವರುಗಳು ಹಸೆ ಮಣೆ ಏರಿದ್ದಾರೆ! ಇಲ್ಲಿವೆ ನೋಡಿ ಚಿತ್ರಗಳು.

ಹಸೆಮಣೆ ಮೇಲೆ ಬಿಗ್​ಬಾಸ್ ಜೋಡಿ ನಮ್ರತಾ-ಕಾರ್ತಿಕ್
ಮಂಜುನಾಥ ಸಿ.
|

Updated on:Feb 28, 2024 | 8:10 PM

Share

ಬಿಗ್​ಬಾಸ್​ನಲ್ಲಿ (BiggBoss) ಪ್ರೀತಿ-ಪ್ರೇಮ, ಸ್ನೇಹ, ಸರಸ-ವಿರಸಗಳು ಸಾಮಾನ್ಯ. ಕೆಲವು ಜೋಡಿಗಳಂತೂ ಬಿಗ್​ಬಾಸ್​ ಮನೆಗೆ ಹೋಗಿ ಪ್ರೇಮಿಗಳಾಗಿ ಹೊರಬಂದಿದ್ದಿದೆ. ಈ ಬಾರಿ ಬಿಗ್​ಬಾಸ್ ಕನ್ನಡ ಸೀಸನ್ 10ರಲ್ಲಿ ಕೆಲವು ಸ್ಪರ್ಧಿಗಳ ನಡುವೆ ಆತ್ಮೀಯತೆ ತುಸು ಹೆಚ್ಚೇ ಇತ್ತು. ಅದರಲ್ಲಿಯೂ ಕಾರ್ತಿಕ್ ಹಾಗೂ ನಮ್ರತಾ ಬಿಗ್​ಬಾಸ್​ನ ಕೊನೆಯ ಕೆಲ ವಾರಗಳಲ್ಲಿ ತುಸು ಹೆಚ್ಚೇ ಹತ್ತಿರವಾಗಿದ್ದರು. ಆದರೆ ಸಾಮಾಜಿಕ ಜಾಲತಾಣದಲ್ಲಿ ಇದೇ ವಿಷಯಕ್ಕೆ ನಮ್ರತಾರನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂಬ ಕಾರಣಕ್ಕೆ ನಮ್ರತಾ ಹಾಗೂ ಕಾರ್ತಿಕ್ ಪರಸ್ಪರ ದೂರಾದರು.

ಆದರೆ ಹೊರಗೆ ಬಂದ ಮೇಲೆ ಈಗ ಅಚಾನಕ್ಕಾಗಿ ನಮ್ರತಾ ಹಾಗೂ ಕಾರ್ತಿಕ್ ಮಹೇಶ್ ಹಸೆಮಣೆ ಏರಿದ್ದಾರೆ! ಇಬ್ಬರೂ ಮದುವೆ ಆಗಿಬಿಟ್ಟರೆ ಎಂದು ಶಾಕ್ ಆಗುವಂತಿಲ್ಲ. ಇಬ್ಬರೂ ಹಸೆಮಣೆ ಏರಿರುವುದು ಜಾಹೀರಾತೊಂದರ ಚಿತ್ರೀಕರಣಕ್ಕಾಗಿ. ನಮ್ರತಾ ಹಾಗೂ ಕಾರ್ತಿಕ್ ಮಹೇಶ್ ಅವರುಗಳು ಚಿನ್ನಾಭರಣದ ಜಾಹೀರಾತು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಜಾಹೀರಾತು ಚಿತ್ರೀಕರಣದ ವಿಡಿಯೋ ಹಾಗೂ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

ಇದನ್ನೂ ಓದಿ:ಕೊಟ್ಟ ಮಾತಿನಂತೆ ಬಿಗ್​ಬಾಸ್​ನಲ್ಲಿ ಗೆದ್ದ ಬೈಕ್ ಅನ್ನು ದಾನ ಮಾಡಿದ ಡ್ರೋನ್ ಪ್ರತಾಪ್

ಖ್ಯಾತ ಉದ್ಯಮಿ, ರಾಜಕಾರಣಿ ಟಿಎ ಶರವಣ ಅವರ ಚಿನ್ನದ ಮಳಿಗೆ ಶ್ರೀ ಸಾಯಿ ಗೋಲ್ಡ್ ಪ್ಯಾಲೆಸ್​ ಬ್ರ್ಯಾಂಡ್​ಗಾಗಿ ಕಾರ್ತಿಕ್ ಹಾಗೂ ನಮ್ರತಾ ಒಟ್ಟಿಗೆ ಈ ಜಾಹೀರಾತು ಚಿತ್ರೀಕರಣ ಮಾಡಿದ್ದಾರೆ. ಇಬ್ಬರೂ ವಧು-ವರರಂತೆ ವೇಷ ತೊಟ್ಟು ಮೈತುಂಬ ಚಿನ್ನದ ಆಭರಣಗಳನ್ನು ತೊಟ್ಟು ಜಾಹೀರಾತು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಟಿಎ ಶರವಣ ಸಹ ಜಾಹೀರಾತು ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ವಧು-ವರರಿಗೆ ಆಶೀರ್ವಾದ ಮಾಡುವ ದೃಶ್ಯದಲ್ಲಿ ಹಿರಿಯರಾಗಿ ಅವರು ಕಾಣಿಸಿಕೊಂಡಿದ್ದಾರೆ.

ರೆಸಾರ್ಟ್ ಒಂದರಲ್ಲಿ ಈ ಜಾಹೀರಾತಿನ ಚಿತ್ರೀಕರಣ ನಡೆದಿದ್ದು, ಕಾರ್ತಿಕ್ ಹಾಗೂ ನಮ್ರತಾ ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರೀಕರಣದ ಕೆಲವು ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ವಧು-ವರರಾಗಿ ಕಾಣಿಸಿಕೊಂಡಿರುವ ಕಾರ್ತಿಕ್-ನಮ್ರತಾರ ಜೋಡಿ ಕಂಡು ಒಳ್ಳೆಯ ಜೋಡಿಯೆಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Wed, 28 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!