AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತು-ಪಂತು ಗಾಳಕ್ಕೆ ಸಿಕ್ಕಿದ್ರಾ ಕಾರ್ತಿಕ್? ಅವರಿಗಿಲ್ಲ ಬೇರೆ ಆಯ್ಕೆ

ಸಂತು-ಪಂತು ಜೊತೆ ಸೇರಿದಮೇಲೆ ಅವರ ಚರ್ಚೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಬೇರೆಯವರಿಗೆ ತೋಡುವ ಗುಂಡಿಯಲ್ಲಿ ಕಾರ್ತಿಕ್ ಮಹೇಶ್ ಅವರೂ ಪಾಲು ತೆಗೆದುಕೊಳ್ಳಬೇಕಾಗುತ್ತದೆ.

ಸಂತು-ಪಂತು ಗಾಳಕ್ಕೆ ಸಿಕ್ಕಿದ್ರಾ ಕಾರ್ತಿಕ್? ಅವರಿಗಿಲ್ಲ ಬೇರೆ ಆಯ್ಕೆ
ಸಂತು-ಪಂತು ಗಾಳಕ್ಕೆ ಸಿಕ್ಕಿದ್ರಾ ಕಾರ್ತಿಕ್?
ರಾಜೇಶ್ ದುಗ್ಗುಮನೆ
|

Updated on: Jan 20, 2024 | 7:49 AM

Share

ತುಕಾಲಿ ಸಂತೋಷ್ (Tukali Santosh) ಹಾಗೂ ವರ್ತೂರು ಸಂತೋಷ್ ಅವರು ಬೀನ್ ಬ್ಯಾಗ್​ಮೇಲೆ ಕುಳಿತು ಸದಾ ಬೇರೆಯವರಿಗೆ ಗುಂಡಿ ತೋಡೋ ಬಗ್ಗೆಯೇ ಆಲೋಚನೆ  ಮಾಡುತ್ತಾರೆ. ಅದರಲ್ಲೂ ತುಕಾಲಿ ಸಂತೋಷ್ ಅವರು ಯಾರ ಬಗ್ಗೆಯಾದರೂ ಒಳ್ಳೆಯ ಮಾತು ಹೇಳಿದರೆ ಅದನ್ನು ಪೂರ್ತಿಯಾಗಿ ನಂಬುವಂತಿಲ್ಲ. ಏಕೆಂದರೆ ಇದಾದ ಮರುಕ್ಷಣವೇ ಅವರು ಹಿಂದಿನಿಂದ ಕೆಟ್ಟ ಮಾತನ್ನು ಆಡುತ್ತಾರೆ. ಈ ಮಧ್ಯೆ ಸಂತು-ಪಂತು ಗಾಳಕ್ಕೆ ಕಾರ್ತಿಕ್ ಸಿಕ್ಕಿಬಿದ್ದರೇ ಎನ್ನುವ ಪ್ರಶ್ನೆ ಮೂಡಿದೆ.

ಕಾರ್ತಿಕ್ ಮಹೇಶ್ ಅವರಿಗೆ ಯಾರೂ ಇಲ್ಲದಂತೆ ಆಗಿದೆ. ಆಪ್ತವಾಗಿದ್ದ ತನಿಷಾ ಎಲಿಮಿನೇಟ್ ಆಗಿದ್ದಾರೆ. ಸಂಗೀತಾ ಶೃಂಗೇರಿ ಜೊತೆ ಬಾಂಧವ್ಯ ಕೊನೆ ಆಗಿದೆ. ನಮ್ರತಾ ಗೌಡ ಅವರು ಕೂಡ ಮುನಿಸಿಕೊಂಡಿದ್ದಾರೆ. ಪ್ರತಾಪ್ ಸಂಗ ಅವರ ಹೊಂದಿಕೆ ಆಗೋದಿಲ್ಲ. ವಿನಯ್ ಅವರ ಜೊತೆಗಿನ ಗೆಳೆತನ ಎಷ್ಟಕ್ಕೆ ಬೇಕೋ ಅಷ್ಟಕ್ಕೇ ಇದೆ. ಈ ಕಾರಣದಿಂದ ಅವರಿಗೆ ಉಳಿದುಕೊಂಡಿರೋದು ‘ನೊಂದವರ ಸಂಘ’. ಈ ಸಂಘದ ಸಂಸ್ಥಾಪಕರಾದ ತುಕಾಲಿ ಸಂತೋಷ್ ಹಾಗೂ ವರ್ತೂರು ಸಂತೋಷ್ ಮೊರೆ ಹೋಗಿದ್ದಾರೆ ಕಾರ್ತಿಕ್.

ಇತ್ತೀಚೆಗೆ ಕಾರ್ತಿಕ್ ಅವರು ಗೇಮ್ ಗೆದ್ದಾಗ ಅವರ ಬೆಂಬಲಕ್ಕೆ ನಿಂತಿದ್ದು ಸಂತು-ಪಂತು. ಕಷ್ಟದ ಸಮಯದಲ್ಲಿ ಜೊತೆಯಾದರು ಎಂದು ಅವರ ಜೊತೆ ಹೋಗಿದ್ದಾರೆ ಕಾರ್ತಿಕ್. ಅವರ ಜೊತೆ ಸೇರಿದಮೇಲೆ ಅವರ ಚರ್ಚೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಬೇರೆಯವರಿಗೆ ತೋಡುವ ಗುಂಡಿಯಲ್ಲಿ ಕಾರ್ತಿಕ್ ಮಹೇಶ್ ಅವರೂ ಪಾಲು ತೆಗೆದುಕೊಳ್ಳಬೇಕಾಗುತ್ತದೆ. ಹೀಗಾಗಿ, ಕಾರ್ತಿಕ್ ಅವರಿಗೆ ಇದರಿಂದ ತೊಂದರೆಯೇ ಹೆಚ್ಚು ಅನ್ನೋದು ಅನೇಕರ ಅಭಿಪ್ರಾಯ.

ಇದನ್ನೂ ಓದಿ: ‘ಯಾವನದ್ದೋ ಜತೆ ಓಡಿ ಹೋಗಿದ್ದಾಳೆ’: ಹೆಂಡತಿಯ ಅವಾಂತರ ವಿವರಿಸಿದ ತುಕಾಲಿ ಸಂತೋಷ್​

ಇತ್ತೀಚೆಗೆ ತುಕಾಲಿ ಸಂತೋಷ್ ಅವರು ಸಂಗೀತಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಅವರು ಫಿನಾಲೆ ತಲುಪಬೇಕು ಎಂದು ವೋಟ್ ಮಾಡಿದ್ದರು. ಇದಾದ ಕೆಲವೇ ದಿನಗಳ ಬಳಿಕ ಸಂಗೀತಾ ವಿರುದ್ಧವೇ ಕತ್ತಿ ಮಸೆದಿದ್ದರು. ಇದನ್ನು ವೀಕ್ಷಕರು ನೋಡಿದ್ದಾರೆ. ಕಾರ್ತಿಕ್ ಮಹೇಶ್​ಗೂ ಇದೇ ರೀತಿ ಆಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಬಿಗ್ ಬಾಸ್ ಎಪಿಸೋಡ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು