‘ಪಾಪ ಅಂತ ಸುಮ್ಮನಿದ್ದೆ, ನಮ್ಮ ಬುಡಕ್ಕೆ ಬಂದರೆ ಹೊಡೆಯಲೇಬೇಕು’: ಸಂಗೀತಾ ಬಗ್ಗೆ ಕಾರ್ತಿಕ್​ ಕಿಡಿ

ಕಾರ್ತಿಕ್​ ಮಹೇಶ್​ ಮತ್ತು ವಿನಯ್​ ಗೌಡ ಅವರು ಈಗ ಸ್ನೇಹ ಬೆಳೆಸಿಕೊಂಡಿದ್ದಾರೆ. ಅವರಿಬ್ಬರು ಕೈ ಜೋಡಿಸಿರುವುದಕ್ಕೆ ಸಂಗೀತಾ ಶೃಂಗೇರಿ ಅವರು ಒಂಟಿ ಆದಂತೆ ಆಗಿದೆ. ಸದ್ಯ ಅವರ ಡ್ರೋನ್​ ಪ್ರತಾಪ್​ ಜೊತೆ ಸೇರಿಕೊಂಡಿದ್ದಾರೆ. ವಿನಯ್​ ಗೌಡ ಅವರು ರಾಜಕೀಯ ಮಾಡುವುದನ್ನು ಮುಂದುವರಿಸಿದ್ದಾರೆ.

‘ಪಾಪ ಅಂತ ಸುಮ್ಮನಿದ್ದೆ, ನಮ್ಮ ಬುಡಕ್ಕೆ ಬಂದರೆ ಹೊಡೆಯಲೇಬೇಕು’: ಸಂಗೀತಾ ಬಗ್ಗೆ ಕಾರ್ತಿಕ್​ ಕಿಡಿ
ಕಾರ್ತಿಕ್​ ಮಹೇಶ್​, ಸಂಗೀತಾ ಶೃಂಗೇರಿ
Edited By:

Updated on: Dec 19, 2023 | 6:58 AM

ಕಾರ್ತಿಕ್​ ಮಹೇಶ್​ ಮತ್ತು ಸಂಗೀತಾ ಶೃಂಗೇರಿ (Sangeetha Sringeri) ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಸಖತ್​ ಕ್ಲೋಸ್​ ಆಗಿದ್ದರು. ಆದರೆ ದಿನ ಕಳೆದಂತೆ ಎಲ್ಲವೂ ಬದಲಾಗಿದೆ. ಈಗ ಅವರ ನಡುವೆ ಯಾವುದೂ ಮೊದಲಿನಂತೆ ಇಲ್ಲ. ಕಾರ್ತಿಕ್​ ಮಹೇಶ್​ (Karthik Mahesh) ಅವರನ್ನು ಬಿಟ್ಟು ಸಂಗೀತಾ ದೂರ ಸರಿದಿದ್ದಾರೆ. ಈಗ ಅವರು ಡ್ರೋನ್​ ಪ್ರತಾಪ್​ ಜೊತೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಅಲ್ಲದೇ ಇತ್ತೀಚೆಗಿನ ಎಪಿಸೋಡ್​ನಲ್ಲಿ ಕಾರ್ತಿಕ್​ ಅವರು ಸಂಗೀತಾ ಅವರ ಪ್ರತಿಕೃತಿಗೆ ಸುತ್ತಿಗೆಯಿಂದ ಹೊಡೆದಿದ್ದರು. ಆ ಬಳಿಕ ಬಿಗ್​ ಬಾಸ್​ (Bigg Boss Kannada) ಮನೆಯಲ್ಲಿ ವಾತಾವರಣ ಬದಲಾಗಿದೆ. ಅದರ ಬಗ್ಗೆ ವಿನಯ್​ ಗೌಡ ಮತ್ತು ಕಾರ್ತಿಕ್​ ಮಹೇಶ್​ ಚರ್ಚೆ ಮಾಡಿದ್ದಾರೆ.

ಕಾರ್ತಿಕ್​ ಮಹೇಶ್​ ಅವರು ಸಂಗೀತಾ ಅವರ ಪ್ರತಿಕೃತಿಯ ಮಡಿಕೆಗೆ ಫೋಟೋವನ್ನು ಅಂಟಿಸಿ ಒಡೆದಿದ್ದರ ಪರಿಣಾಮ ಯಾವ ರೀತಿ ಆಗಿದೆ ಎಂಬುದನ್ನು ವಿನಯ್​ ಗೌಡ ವಿವರಿಸಿದರು. ‘ಮಡಕೆ ಒಡೆದು ದಾರಿಯಲ್ಲಿ ಇರುವ ಹಾವನ್ನು ಬಿಟ್ಟುಕೊಂಡಂತೆ ಆಗಿದೆ. ಅದು ಬರೀ ಹಾವಲ್ಲ, ಅನಾಗೊಂಡ’ ಎಂದರು ವಿನಯ್​. ಅದಕ್ಕೆ ಕಾರ್ತಿಕ್​ ಮಹೇಶ್​ ತಮ್ಮ ಅನಿಸಿಕೆ ತಿಳಿಸಿದರು.

ಇದನ್ನೂ ಓದಿ: ಸಂಗೀತಾ ಶೃಂಗೇರಿಗೆ ಈ ವಾರ ತುಂಬ ಕಷ್ಟ ಆಗಲಿದೆ ಬಿಗ್​ ಬಾಸ್​ ಆಟ

‘ಪಾಪ ಅಂತ ಸುಮ್ಮನೆ ಇದ್ದೆ. ಆದರೆ ನಮ್ಮ ಬುಡಕ್ಕೆ ಬಂದಾಗ ಹೊಡೆಯಲೇ ಬೇಕು’ ಎಂದು ಕಾರ್ತಿಕ್​ ಮಹೇಶ್​ ಹೇಳಿದ್ದಾರೆ. ಆರಂಭದ ವಾರಗಳಲ್ಲಿ ಸಂಗೀತಾ ಶೃಂಗೇರಿ ಜೊತೆ ಕಾರ್ತಿಕ್​ ಸ್ನೇಹ ಬೆಳೆಸಿದ್ದರು. ಇಬ್ಬರೂ ಸದಾ ಕಾಲ ಜೊತೆಯಾಗಿ ಸಮಯ ಕಳೆಯುತ್ತಿದ್ದರು. ದಿನ ಕಳೆದಂತೆ ಆ ಸ್ನೇಹ ಗಟ್ಟಿ ಆಯಿತು. ಇಬ್ಬರೂ ಸೇರಿಕೊಂಡು ವಿನಯ್​ ವಿರುದ್ಧ ತಿರುಗಿ ಬಿದ್ದಿದ್ದರು. ಈಗ ಎಲ್ಲವೂ ಉಲ್ಟಾ ಆಗಿದೆ.

ಇದನ್ನೂ ಓದಿ: ‘ಬಿಗ್​ ಬಾಸ್​ ಫಿನಾಲೆಯ ಟಾಪ್​ 2 ಸ್ಥಾನಕ್ಕೆ ಸಂಗೀತಾ ಬರಲ್ಲ’: ಪವಿ ಪೂವಪ್ಪ ನೇರ ಅಭಿಪ್ರಾಯ

ಕಾರ್ತಿಕ್​ ಮಹೇಶ್​ ಮತ್ತು ವಿನಯ್​ ಗೌಡ ಅವರು ಈಗ ಒಡನಾಟ ಬೆಳೆಸಿಕೊಂಡಿದ್ದಾರೆ. ಅವರಿಬ್ಬರು ಕೈ ಜೋಡಿಸಿರುವುದಕ್ಕೆ ಸಂಗೀತಾ ಶೃಂಗೇರಿ ಅವರು ಒಂಟಿ ಆದಂತೆ ಆಗಿದೆ. ಸದ್ಯ ಅವರ ಡ್ರೋನ್​ ಪ್ರತಾಪ್​ ಜೊತೆ ಸೇರಿಕೊಂಡಿದ್ದಾರೆ. ವಿನಯ್​ ಗೌಡ ಅವರು ರಾಜಕೀಯ ಮಾಡುವುದನ್ನು ಮುಂದುವರಿಸಿದ್ದಾರೆ. ‘ಇನ್ಮೇಲೆ ರಾಜಕೀಯ ಮಾಡೋಣ’ ಎಂದು ಅವರು ನಮ್ರತಾ ಗೌಡ ಮತ್ತು ತನಿಷಾ ಕುಪ್ಪಂಡ ಜೊತೆ ಸೇರಿ ನಿರ್ಧಾರ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:42 pm, Mon, 18 December 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us