AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ನಲ್ಲಿ ಇವೆ ಮೂರು ಶನಿಗಳು’; ಇವರು ಪ್ರಭಾವ ಬೀರಿದರೆ ಮುಗಿಯಿತು

ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಉಳಿದುಕೊಂಡಿರುವುದು ದ್ವೇಷ ಮಾತ್ರ. ಸಂಗೀತಾ ಬೆನ್ನು ಬಿದ್ದರೆ ಶನಿ ಬೆನ್ನು ಬಿದ್ದಂತೆ ಎಂಬ ಅಭಿಪ್ರಾಯವನ್ನು ಕಾರ್ತಿಕ್ ಹೊರಹಾಕಿದ್ದಾರೆ.

‘ಬಿಗ್ ಬಾಸ್​ನಲ್ಲಿ ಇವೆ ಮೂರು ಶನಿಗಳು’; ಇವರು ಪ್ರಭಾವ ಬೀರಿದರೆ ಮುಗಿಯಿತು
‘ಬಿಗ್ ಬಾಸ್​ನಲ್ಲಿ ಇವೆ ಮೂರು ಶನಿಗಳು’
ರಾಜೇಶ್ ದುಗ್ಗುಮನೆ
|

Updated on:Jan 02, 2024 | 8:42 AM

Share

ಬಿಗ್ ಬಾಸ್ ಮನೆಯಲ್ಲಿ ಯಾರ ಜೊತೆ ಬೇಕಿದ್ದರೂ ಫ್ರೆಂಡ್​ಶಿಪ್ ಬೆಳೆಯಬಹುದು, ಯಾರ ಮೇಲೆ ಬೇಕಿದ್ದರೂ ದ್ವೇಷ ಬೆಳೆಯಬಹುದು. ಗೆಳೆಯರಾಗಿದ್ದವರ ಮಧ್ಯೆ ವೈರತ್ವ ಬೆಳೆದ ಉದಾಹರಣೆ ಸಾಕಷ್ಟಿದೆ. ಇದಕ್ಕೆ ತಾಜಾ ಉದಾಹರಣೆ ಎಂದರೆ ಸಂಗೀತಾ (Sangeetha Sringeri) ಹಾಗೂ ಕಾರ್ತಿಕ್. ಇಬ್ಬರೂ ಆರಂಭದಲ್ಲಿ ಕ್ಲೋಸ್ ಆಗಿದ್ದರು. ಆದರೆ, ಈಗ ಇಬ್ಬರೂ ಬೇರೆ ಆಗಿದ್ದಾರೆ. ಇವರ ಮಧ್ಯೆ ದ್ವೇಷ ಬೆಳೆದಿದೆ. ಸಂಗೀತಾ ಅವರನ್ನು ಶನಿಯ ಸ್ಥಾನದಲ್ಲಿ ಇಟ್ಟಿದ್ದಾರೆ ಕಾರ್ತಿಕ್.

ಆರಂಭದಲ್ಲಿ ಕಾರ್ತಿಕ್ ಹಾಗೂ ಸಂಗೀತಾ ಅಸಮರ್ಥರ ಸಾಲಿನಲ್ಲಿ ಇದ್ದರು. ಈ ಕಾರಣಕ್ಕೆ ಇವರ ಮಧ್ಯೆ ಬಾಂಧವ್ಯ ಬೆಳೆಯಿತು. ಇಬ್ಬರೂ ಹೆಚ್ಚು ಹೊತ್ತು ಸಮಯ ಕಳೆದರು. ಆದರೆ, ಒಂದು ಹಂತದಲ್ಲಿ ಇಬ್ಬರೂ ಬೇರೆ ಆದರು. ಈಗ ಇವರ ಮಧ್ಯೆ ಉಳಿದುಕೊಂಡಿರುವುದು ದ್ವೇಷ ಮಾತ್ರ. ಸಂಗೀತಾ ಬೆನ್ನು ಬಿದ್ದರೆ ಶನಿ ಬೆನ್ನು ಬಿದ್ದಂತೆ ಎಂಬ ಅಭಿಪ್ರಾಯವನ್ನು ಕಾರ್ತಿಕ್ ಹೊರಹಾಕಿದ್ದಾರೆ.

‘ಬಿಗ್ ಬಾಸ್ ಮನೆಯಲ್ಲಿ ಮೂರು ಶನಿಗಳಿವೆ. ಅವು ಯಾವವು’ ಎಂದು ಕಾರ್ತಿಕ್ ಅವರು ವರ್ತೂರು ಸಂತೋಷ್ ಬಳಿ ಕೇಳಿದ್ದಾರೆ. ಇದಕ್ಕೆ ಸಂತೋಷ್ ಅವರು ಮೊದಲು ವಿನಯ್ ಹೆಸರು ತೆಗೆದುಕೊಂಡರು. ನಂತರ ನಮ್ರತಾ ಹೆಸರು ತೆಗೆದುಕೊಂಡರು. ಆ ಬಳಿಕ ಯೋಚಿಸಿ ಸಂಗೀತಾ ಹೆಸರನ್ನು ಹೇಳಿದರು. ‘ಈ ಶನಿಗಳು ಪ್ರಭಾವ ಬೀರೋಕೆ ಆರಂಭಿಸಿದರೆ ಮುಗಿಯಿತು’ ಎಂದು ಸಂತೋಷ್ ಹೇಳಿದ್ದಾರೆ.

ಇದನ್ನೂ ಓದಿ: ‘ಯಾರ ಜತೆ ಇದ್ರೆ ಉಪಯೋಗ ಆಗತ್ತೆ ಅಂತ ಸಂಗೀತಾ ನೋಡ್ತಾರೆ’: ಕಾರ್ತಿಕ್​ ಆರೋಪ

ಕಾರ್ತಿಕ್ ಕೂಡ ಈ ಮಾತನ್ನು ಒಪ್ಪಿದ್ದಾರೆ. ವಿನಯ್ ಹೆಸರಿನ ಶನಿಯ ಪ್ರಭಾವ ಮೊದಲಿನಿಂದಲೂ ಇತ್ತು ಅನ್ನೋದು ಅವರ ಅಭಿಪ್ರಾಯ. ಇತ್ತೀಚೆಗೆ ಸಂಗೀತಾ ಪ್ರಭಾವ ಕೂಡ ಹೆಚ್ಚುತ್ತಿದೆ ಎಂದಿದ್ದಾರೆ ಕಾರ್ತಿಕ್. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದು. ಜನವರಿ ಅಂತ್ಯಕ್ಕೆ ಬಿಗ್ ಬಾಸ್ ಫಿನಾಲೆ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:33 am, Tue, 2 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?