AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಣ್ಣ ನನ್ನ ಎರಡನೇ ತಂದೆ’; ಕಾರ್ತಿಕ್ ಬಗ್ಗೆ ಪ್ರೀತಿ ವ್ಯಕ್ತಪಡಿಸಿದ ತಂಗಿ ತೇಜಸ್ವಿನಿ

ಬಿಗ್ ಬಾಸ್ ಫಿನಾಲೆ ವಾರದಲ್ಲಿ ಒಂದು ಅವಕಾಶ ನೀಡಿದ್ದರು. ಎಲ್ಲಾ ಸ್ಪರ್ಧಿಗಳ ಒಂದು ಕೋರಿಕೆಯನ್ನು ಈಡೇರಿಸುವುದಾಗಿ ಬಿಗ್ ಬಾಸ್ ಹೇಳಿದ್ದರು. ಆಗ ಕಾರ್ತಿಕ್ ಅವರು ತಂಗಿಯ ಜೊತೆ ಮಾತನಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಇದು ಅವರು ತಂಗಿಯ ಮೇಲೆ ಇಟ್ಟ ಪ್ರೀತಿಗೆ ಒಳ್ಳೆಯ ಉದಾಹರಣೆ.

‘ಅಣ್ಣ ನನ್ನ ಎರಡನೇ ತಂದೆ’; ಕಾರ್ತಿಕ್ ಬಗ್ಗೆ ಪ್ರೀತಿ ವ್ಯಕ್ತಪಡಿಸಿದ ತಂಗಿ ತೇಜಸ್ವಿನಿ
ರಾಜೇಶ್ ದುಗ್ಗುಮನೆ
|

Updated on: Feb 26, 2024 | 7:51 AM

Share

ಕಾರ್ತಿಕ್ ಮಹೇಶ್  (Karthik Mahesh) ಅವರಿಗೆ ಬಿಗ್ ಬಾಸ್​ನಿಂದ ಸಿಕ್ಕ ಜನಪ್ರಿಯತೆ ಸಣ್ಣದಲ್ಲ. ಅವರ ಹಿಂಬಾಲಕರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಕಾರ್ತಿಕ್ ಅವರು ಈಗ ಅನೇಕರ ಫೇವರಿಟ್ ಎನಿಸಿಕೊಂಡಿದ್ದಾರೆ. ಅವರಿಗೆ ತಂಗಿ ತೇಜಸ್ವಿನಿ ಬಗ್ಗೆ ಎಲ್ಲಿಲ್ಲದ ಪ್ರೀತಿ. ಇಬ್ಬರೂ ಒಟ್ಟಿಗೆ ನಿಂತು ಪೋಸ್ ಕೊಟ್ಟಿರೋ ಫೋಟೋನ ತೇಜಸ್ವಿನಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಕಾರ್ತಿಕ್ ಫ್ಯಾನ್ಸ್ ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

ಕಾರ್ತಿಕ್ ಮಹೇಶ್​ಗೆ ತಂಗಿ ಮೇಲೆ ಅಪಾರ ಪ್ರೀತಿ. ಕಾರ್ತಿಕ್ ಬಿಗ್ ಬಾಸ್​ಗೆ ಬರುವ ಸಂದರ್ಭದಲ್ಲಿ ಅವರು ಪ್ರೆಗ್ನೆಂಟ್ ಆಗಿದ್ದರು. ದೊಡ್ಮನೆಯಲ್ಲಿದ್ದಾಗ ತಂಗಿಯ ಆರೋಗ್ಯದ ಬಗ್ಗೆ ಅವರು ಚಿಂತೆಗೆ ಒಳಗಾಗಿದ್ದರು. ಫಿನಾಲೆ ತಲುಪಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ಒಂದು ಅವಕಾಶ ನೀಡಿದ್ದರು. ಎಲ್ಲಾ ಸ್ಪರ್ಧಿಗಳ ಒಂದು ಕೋರಿಕೆಯನ್ನು ಈಡೇರಿಸುವುದಾಗಿ ಬಿಗ್ ಬಾಸ್ ಹೇಳಿದ್ದರು. ಆಗ ಕಾರ್ತಿಕ್ ಅವರು ತಂಗಿಯ ಜೊತೆ ಮಾತನಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಇದು ಅವರು ತಂಗಿಯ ಮೇಲೆ ಇಟ್ಟ ಪ್ರೀತಿಗೆ ಒಳ್ಳೆಯ ಉದಾಹರಣೆ.

ಕಾರ್ತಿಕ್ ಮಹೇಶ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ತಂಗಿಯನ್ನು ಭೇಟಿ ಮಾಡಿದ್ದಾರೆ.  ಅವರ ತಂಗಿ ತೇಜಸ್ವಿನಿ ಅವರೇ ಫೋಟೋ ಹಂಚಿಕೊಂಡಿದ್ದಾರೆ. ಅಣ್ಣ ಹಾಗೂ ಅಮ್ಮನ ಜೊತೆ ನಿಂತಿರೋ ಫೋಟೋನ ತೇಜಸ್ವಿನಿ ಹಂಚಿಕೊಂಡಿದ್ದಾರೆ. ‘ಬಹಳ ಸಮಯದ ನಂತರ ನನ್ನವರ ಜೊತೆ. ನನ್ನ ಅಣ್ಣನ ಯಶಸ್ಸು ನೋಡಲು ಖುಷಿ ಆಗುತ್ತಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಲೈವ್​ನಲ್ಲಿ ನಮ್ರತಾ ಗೌಡ ಅಂದ ಹೊಗಳಿದ ಕಾರ್ತಿಕ್ ಮಹೇಶ್; ವಿಡಿಯೋ ವೈರಲ್

ಮತ್ತೊಂದು ಫೋಟೋದಲ್ಲಿ ಅಣ್ಣನ ಜೊತೆ ಮಾತ್ರ ಇರೋ ಫೋಟೋ ಹಂಚಿಕೊಂಡಿದ್ದಾರೆ. ‘ಅಣ್ಣ ನನ್ನ ಎರಡನೇ ತಂದೆ, ನನ್ನ ಗೆಳೆಯ, ಗುಟ್ಟನ್ನು ಕಾಪಾಡಿಕೊಳ್ಳುವವ, ಎಲ್ಲವೂ’ ಎಂದು ಬರೆದುಕೊಂಡಿದ್ದಾರೆ ತೇಜಸ್ವಿನಿ. ಈ ಫೋಟೋಗೆ ಒಂದು ಲಕ್ಷ ಲೈಕ್ಸ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ