AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಣ್ಣ ನನ್ನ ಎರಡನೇ ತಂದೆ’; ಕಾರ್ತಿಕ್ ಬಗ್ಗೆ ಪ್ರೀತಿ ವ್ಯಕ್ತಪಡಿಸಿದ ತಂಗಿ ತೇಜಸ್ವಿನಿ

ಬಿಗ್ ಬಾಸ್ ಫಿನಾಲೆ ವಾರದಲ್ಲಿ ಒಂದು ಅವಕಾಶ ನೀಡಿದ್ದರು. ಎಲ್ಲಾ ಸ್ಪರ್ಧಿಗಳ ಒಂದು ಕೋರಿಕೆಯನ್ನು ಈಡೇರಿಸುವುದಾಗಿ ಬಿಗ್ ಬಾಸ್ ಹೇಳಿದ್ದರು. ಆಗ ಕಾರ್ತಿಕ್ ಅವರು ತಂಗಿಯ ಜೊತೆ ಮಾತನಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಇದು ಅವರು ತಂಗಿಯ ಮೇಲೆ ಇಟ್ಟ ಪ್ರೀತಿಗೆ ಒಳ್ಳೆಯ ಉದಾಹರಣೆ.

‘ಅಣ್ಣ ನನ್ನ ಎರಡನೇ ತಂದೆ’; ಕಾರ್ತಿಕ್ ಬಗ್ಗೆ ಪ್ರೀತಿ ವ್ಯಕ್ತಪಡಿಸಿದ ತಂಗಿ ತೇಜಸ್ವಿನಿ
ರಾಜೇಶ್ ದುಗ್ಗುಮನೆ
|

Updated on: Feb 26, 2024 | 7:51 AM

Share

ಕಾರ್ತಿಕ್ ಮಹೇಶ್  (Karthik Mahesh) ಅವರಿಗೆ ಬಿಗ್ ಬಾಸ್​ನಿಂದ ಸಿಕ್ಕ ಜನಪ್ರಿಯತೆ ಸಣ್ಣದಲ್ಲ. ಅವರ ಹಿಂಬಾಲಕರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಕಾರ್ತಿಕ್ ಅವರು ಈಗ ಅನೇಕರ ಫೇವರಿಟ್ ಎನಿಸಿಕೊಂಡಿದ್ದಾರೆ. ಅವರಿಗೆ ತಂಗಿ ತೇಜಸ್ವಿನಿ ಬಗ್ಗೆ ಎಲ್ಲಿಲ್ಲದ ಪ್ರೀತಿ. ಇಬ್ಬರೂ ಒಟ್ಟಿಗೆ ನಿಂತು ಪೋಸ್ ಕೊಟ್ಟಿರೋ ಫೋಟೋನ ತೇಜಸ್ವಿನಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಕಾರ್ತಿಕ್ ಫ್ಯಾನ್ಸ್ ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

ಕಾರ್ತಿಕ್ ಮಹೇಶ್​ಗೆ ತಂಗಿ ಮೇಲೆ ಅಪಾರ ಪ್ರೀತಿ. ಕಾರ್ತಿಕ್ ಬಿಗ್ ಬಾಸ್​ಗೆ ಬರುವ ಸಂದರ್ಭದಲ್ಲಿ ಅವರು ಪ್ರೆಗ್ನೆಂಟ್ ಆಗಿದ್ದರು. ದೊಡ್ಮನೆಯಲ್ಲಿದ್ದಾಗ ತಂಗಿಯ ಆರೋಗ್ಯದ ಬಗ್ಗೆ ಅವರು ಚಿಂತೆಗೆ ಒಳಗಾಗಿದ್ದರು. ಫಿನಾಲೆ ತಲುಪಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ಒಂದು ಅವಕಾಶ ನೀಡಿದ್ದರು. ಎಲ್ಲಾ ಸ್ಪರ್ಧಿಗಳ ಒಂದು ಕೋರಿಕೆಯನ್ನು ಈಡೇರಿಸುವುದಾಗಿ ಬಿಗ್ ಬಾಸ್ ಹೇಳಿದ್ದರು. ಆಗ ಕಾರ್ತಿಕ್ ಅವರು ತಂಗಿಯ ಜೊತೆ ಮಾತನಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಇದು ಅವರು ತಂಗಿಯ ಮೇಲೆ ಇಟ್ಟ ಪ್ರೀತಿಗೆ ಒಳ್ಳೆಯ ಉದಾಹರಣೆ.

ಕಾರ್ತಿಕ್ ಮಹೇಶ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ತಂಗಿಯನ್ನು ಭೇಟಿ ಮಾಡಿದ್ದಾರೆ.  ಅವರ ತಂಗಿ ತೇಜಸ್ವಿನಿ ಅವರೇ ಫೋಟೋ ಹಂಚಿಕೊಂಡಿದ್ದಾರೆ. ಅಣ್ಣ ಹಾಗೂ ಅಮ್ಮನ ಜೊತೆ ನಿಂತಿರೋ ಫೋಟೋನ ತೇಜಸ್ವಿನಿ ಹಂಚಿಕೊಂಡಿದ್ದಾರೆ. ‘ಬಹಳ ಸಮಯದ ನಂತರ ನನ್ನವರ ಜೊತೆ. ನನ್ನ ಅಣ್ಣನ ಯಶಸ್ಸು ನೋಡಲು ಖುಷಿ ಆಗುತ್ತಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಲೈವ್​ನಲ್ಲಿ ನಮ್ರತಾ ಗೌಡ ಅಂದ ಹೊಗಳಿದ ಕಾರ್ತಿಕ್ ಮಹೇಶ್; ವಿಡಿಯೋ ವೈರಲ್

ಮತ್ತೊಂದು ಫೋಟೋದಲ್ಲಿ ಅಣ್ಣನ ಜೊತೆ ಮಾತ್ರ ಇರೋ ಫೋಟೋ ಹಂಚಿಕೊಂಡಿದ್ದಾರೆ. ‘ಅಣ್ಣ ನನ್ನ ಎರಡನೇ ತಂದೆ, ನನ್ನ ಗೆಳೆಯ, ಗುಟ್ಟನ್ನು ಕಾಪಾಡಿಕೊಳ್ಳುವವ, ಎಲ್ಲವೂ’ ಎಂದು ಬರೆದುಕೊಂಡಿದ್ದಾರೆ ತೇಜಸ್ವಿನಿ. ಈ ಫೋಟೋಗೆ ಒಂದು ಲಕ್ಷ ಲೈಕ್ಸ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ