AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಣ್ಣ ನನ್ನ ಎರಡನೇ ತಂದೆ’; ಕಾರ್ತಿಕ್ ಬಗ್ಗೆ ಪ್ರೀತಿ ವ್ಯಕ್ತಪಡಿಸಿದ ತಂಗಿ ತೇಜಸ್ವಿನಿ

ಬಿಗ್ ಬಾಸ್ ಫಿನಾಲೆ ವಾರದಲ್ಲಿ ಒಂದು ಅವಕಾಶ ನೀಡಿದ್ದರು. ಎಲ್ಲಾ ಸ್ಪರ್ಧಿಗಳ ಒಂದು ಕೋರಿಕೆಯನ್ನು ಈಡೇರಿಸುವುದಾಗಿ ಬಿಗ್ ಬಾಸ್ ಹೇಳಿದ್ದರು. ಆಗ ಕಾರ್ತಿಕ್ ಅವರು ತಂಗಿಯ ಜೊತೆ ಮಾತನಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಇದು ಅವರು ತಂಗಿಯ ಮೇಲೆ ಇಟ್ಟ ಪ್ರೀತಿಗೆ ಒಳ್ಳೆಯ ಉದಾಹರಣೆ.

‘ಅಣ್ಣ ನನ್ನ ಎರಡನೇ ತಂದೆ’; ಕಾರ್ತಿಕ್ ಬಗ್ಗೆ ಪ್ರೀತಿ ವ್ಯಕ್ತಪಡಿಸಿದ ತಂಗಿ ತೇಜಸ್ವಿನಿ
ರಾಜೇಶ್ ದುಗ್ಗುಮನೆ
|

Updated on: Feb 26, 2024 | 7:51 AM

Share

ಕಾರ್ತಿಕ್ ಮಹೇಶ್  (Karthik Mahesh) ಅವರಿಗೆ ಬಿಗ್ ಬಾಸ್​ನಿಂದ ಸಿಕ್ಕ ಜನಪ್ರಿಯತೆ ಸಣ್ಣದಲ್ಲ. ಅವರ ಹಿಂಬಾಲಕರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಕಾರ್ತಿಕ್ ಅವರು ಈಗ ಅನೇಕರ ಫೇವರಿಟ್ ಎನಿಸಿಕೊಂಡಿದ್ದಾರೆ. ಅವರಿಗೆ ತಂಗಿ ತೇಜಸ್ವಿನಿ ಬಗ್ಗೆ ಎಲ್ಲಿಲ್ಲದ ಪ್ರೀತಿ. ಇಬ್ಬರೂ ಒಟ್ಟಿಗೆ ನಿಂತು ಪೋಸ್ ಕೊಟ್ಟಿರೋ ಫೋಟೋನ ತೇಜಸ್ವಿನಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಕಾರ್ತಿಕ್ ಫ್ಯಾನ್ಸ್ ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

ಕಾರ್ತಿಕ್ ಮಹೇಶ್​ಗೆ ತಂಗಿ ಮೇಲೆ ಅಪಾರ ಪ್ರೀತಿ. ಕಾರ್ತಿಕ್ ಬಿಗ್ ಬಾಸ್​ಗೆ ಬರುವ ಸಂದರ್ಭದಲ್ಲಿ ಅವರು ಪ್ರೆಗ್ನೆಂಟ್ ಆಗಿದ್ದರು. ದೊಡ್ಮನೆಯಲ್ಲಿದ್ದಾಗ ತಂಗಿಯ ಆರೋಗ್ಯದ ಬಗ್ಗೆ ಅವರು ಚಿಂತೆಗೆ ಒಳಗಾಗಿದ್ದರು. ಫಿನಾಲೆ ತಲುಪಿದ ಸ್ಪರ್ಧಿಗಳಿಗೆ ಬಿಗ್ ಬಾಸ್ ಒಂದು ಅವಕಾಶ ನೀಡಿದ್ದರು. ಎಲ್ಲಾ ಸ್ಪರ್ಧಿಗಳ ಒಂದು ಕೋರಿಕೆಯನ್ನು ಈಡೇರಿಸುವುದಾಗಿ ಬಿಗ್ ಬಾಸ್ ಹೇಳಿದ್ದರು. ಆಗ ಕಾರ್ತಿಕ್ ಅವರು ತಂಗಿಯ ಜೊತೆ ಮಾತನಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಇದು ಅವರು ತಂಗಿಯ ಮೇಲೆ ಇಟ್ಟ ಪ್ರೀತಿಗೆ ಒಳ್ಳೆಯ ಉದಾಹರಣೆ.

ಕಾರ್ತಿಕ್ ಮಹೇಶ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ತಂಗಿಯನ್ನು ಭೇಟಿ ಮಾಡಿದ್ದಾರೆ.  ಅವರ ತಂಗಿ ತೇಜಸ್ವಿನಿ ಅವರೇ ಫೋಟೋ ಹಂಚಿಕೊಂಡಿದ್ದಾರೆ. ಅಣ್ಣ ಹಾಗೂ ಅಮ್ಮನ ಜೊತೆ ನಿಂತಿರೋ ಫೋಟೋನ ತೇಜಸ್ವಿನಿ ಹಂಚಿಕೊಂಡಿದ್ದಾರೆ. ‘ಬಹಳ ಸಮಯದ ನಂತರ ನನ್ನವರ ಜೊತೆ. ನನ್ನ ಅಣ್ಣನ ಯಶಸ್ಸು ನೋಡಲು ಖುಷಿ ಆಗುತ್ತಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಲೈವ್​ನಲ್ಲಿ ನಮ್ರತಾ ಗೌಡ ಅಂದ ಹೊಗಳಿದ ಕಾರ್ತಿಕ್ ಮಹೇಶ್; ವಿಡಿಯೋ ವೈರಲ್

ಮತ್ತೊಂದು ಫೋಟೋದಲ್ಲಿ ಅಣ್ಣನ ಜೊತೆ ಮಾತ್ರ ಇರೋ ಫೋಟೋ ಹಂಚಿಕೊಂಡಿದ್ದಾರೆ. ‘ಅಣ್ಣ ನನ್ನ ಎರಡನೇ ತಂದೆ, ನನ್ನ ಗೆಳೆಯ, ಗುಟ್ಟನ್ನು ಕಾಪಾಡಿಕೊಳ್ಳುವವ, ಎಲ್ಲವೂ’ ಎಂದು ಬರೆದುಕೊಂಡಿದ್ದಾರೆ ತೇಜಸ್ವಿನಿ. ಈ ಫೋಟೋಗೆ ಒಂದು ಲಕ್ಷ ಲೈಕ್ಸ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ