AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಿಷಾ ಹಾರ್ಟ್​ಗೆ ಗಟ್ಟಿಯಾಗಿ ಚುಚ್ಚಿದ ಕಾರ್ತಿಕ್; ಈ ತಪ್ಪನ್ನು ಅವರು ಎಂದಿಗೂ ಕ್ಷಮಿಸಲ್ಲ..

ಈ ವಾರ ತನಿಷಾಗೆ ಬಿದ್ದಿದ್ದು ಒಂದೇ ವೋಟ್. ಅದೂ ಕಾರ್ತಿಕ್​ನಿಂದ. ಒಂದೊಮ್ಮೆ ಅವರು ವೋಟ್ ಮಾಡದೇ ಇದ್ದಿದ್ದರೆ ತನಿಷಾ ಸೇವ್ ಆಗುತ್ತಿದ್ದರು.

ತನಿಷಾ ಹಾರ್ಟ್​ಗೆ ಗಟ್ಟಿಯಾಗಿ ಚುಚ್ಚಿದ ಕಾರ್ತಿಕ್; ಈ ತಪ್ಪನ್ನು ಅವರು ಎಂದಿಗೂ ಕ್ಷಮಿಸಲ್ಲ..
ಕಾರ್ತಿಕ್-ತನಿಷಾ
ರಾಜೇಶ್ ದುಗ್ಗುಮನೆ
|

Updated on: Jan 10, 2024 | 8:27 AM

Share

ತನಿಷಾ ಕುಪ್ಪಂಡ ಅವರು ಬಿಗ್ ಬಾಸ್ (Bigg Boss) ಮನೆಯಲ್ಲಿ ಇತ್ತೀಚೆಗೆ ಡಲ್ ಆಗಿದ್ದಾರೆ. ಅವರ ಕಾಲಿಗೆ ಏಟಾಗಿತ್ತು. ಆ ಬಳಿಕ ಅವರು ಪರ್ಫಾರ್ಮೆನ್ಸ್ ಸ್ವಲ್ಪ ಕಡಿಮೆ ಆಗಿದೆ. ಈ ವಾರ ಕಾರ್ತಿಕ್ ಅವರಿಂದಲೇ ತನಿಷಾಗೆ ದ್ರೋಹ ಆಗಿದೆ. ಇದನ್ನು ಎಂದಿಗೂ ಕ್ಷಮಿಸಲ್ಲ ಎಂದು ತನಿಷಾ ಕಣ್ಣೀರು ಹಾಕಿದ್ದಾರೆ. ಇದಕ್ಕೆ ಏನು ಉತ್ತರ ನೀಡಬೇಕು ಎಂಬುದು ತಿಳಿಯದೇ ಮೌನಕ್ಕೆ ಶರಣಾಗಿದ್ದಾರೆ ಕಾರ್ತಿಕ್.

ಫ್ರೆಂಡ್​ಶಿಪ್ ಹೆಸರಲ್ಲಿ ಕಾರ್ತಿಕ್ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎನ್ನುವ ಆರೊಪ ಬಂತು. ‘ಕಾರ್ತಿಕ್ ಅವರ ಲೋಟವನ್ನೂ ತನಿಷಾ ತೊಳದುಕೊಡುತ್ತಾರೆ’ ಎಂಬಿತ್ಯಾದಿ ಆರೋಪಗಳು ಬಂದವು. ಈ ಆರೋಪವನ್ನು ಕಾರ್ತಿಕ್ ಒಪ್ಪಿಲ್ಲ. ಆ ಬಳಿಕ ನಾಮಿನೇಷನ್ ಪ್ರಕ್ರಿಯೆ ನಡೆಯಿತು. ಎಲ್ಲರೂ ಒಂದು ಥರ್ಮಕೋಲ್ ಹಾರ್ಟ್ ಹಿಡಿದು ನಿಲ್ಲುತ್ತಾರೆ. ನಾಮಿನೇಟ್ ಮಾಡುವಾಗ ಆ ಹಾರ್ಟ್​ಗೆ ಚಾಕುವಿನಿಂದ ಚುಚ್ಚಬೇಕು. ಕಾರ್ತಿಕ್​ ಅವರು ತನಿಷಾನ ನಾಮಿನೇಟ್ ಮಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದರು. ಕಾರ್ತಿಕ್ ತಮ್ಮ ಹೆಸರನ್ನು ತೆಗೆದುಕೊಂಡಿದ್ದು ನೋಡಿ ಎಲ್ಲರಿಗೂ ಶಾಕ್ ಆಯಿತು. ತನಿಷಾ ಕಣ್ಣಲ್ಲಿ ನೀರು ತುಂಬಿತು. ‘ಹಾರ್ಟ್​ಗೆ ನಿಧಾನವಾಗಿ ಚುಚ್ಚು. ಈಗಾಗಲೇ ಡೀಪ್ ಆಗಿ ಚಾಕು ಹೋಗಿದೆ’ ಎಂದರು ತನಿಷಾ.

ಇದನ್ನೂ ಓದಿ: ಮೊದಲು ಸಂಗೀತಾ, ನಂತರ ನಮ್ರತಾ ಜತೆ ಕ್ಲೋಸ್​ ಆದ ಕಾರ್ತಿಕ್​ಗೆ ಸುದೀಪ್​ ಹೇಳಿದ್ದೇನು?

ಮೊದಲಿನಿಂದಲೂ ಇಬ್ಬರೂ ಒಳ್ಳೆಯ ಬಾಂಡ್ ಶೇರ್ ಮಾಡಿಕೊಳ್ಳುತ್ತಾ ಬರುತ್ತಿದ್ದಾರೆ. ಹಾಗಿದ್ದರೂ ಕಾರ್ತಿಕ್ ತಮ್ಮ ಹೆಸರನ್ನು ತೆಗೆದುಕೊಂಡಿದ್ದು ತನಿಷಾಗೆ ಬೇಸರ ತರಿಸಿದೆ. ಮತ್ತೊಂದು ವಿಚಾರ ಎಂದರೆ ಈ ವಾರ ತನಿಷಾಗೆ ಬಿದ್ದಿದ್ದು ಒಂದೇ ವೋಟ್. ಅದೂ ಕಾರ್ತಿಕ್​ನಿಂದ. ಒಂದೊಮ್ಮೆ ಅವರು ವೋಟ್ ಮಾಡದೇ ಇದ್ದಿದ್ದರೆ ತನಿಷಾ ಸೇವ್ ಆಗುತ್ತಿದ್ದರು.

ಈ ಬಗ್ಗೆ ವಿನಯ್, ನಮ್ರತಾ ಹಾಗೂ ಸಂಗೀತಾ ಚರ್ಚೆ ಮಾಡಿದ್ದಾರೆ. ‘ನಾವು ಫ್ರೆಂಡ್​ಶಿಪ್ ಕಾರ್ಡ್ ಎಂದು ಹೇಳಿದ್ದಕ್ಕೆ ಕಾರ್ತಿಕ್ ಈ ರೀತಿ ಮಾಡಿದ್ದಾರೆ. ಆರೋಪ ಸುಳ್ಳು ಎಂಬುದನ್ನು ತೋರಿಸುವುದು ಅವರ ಉದ್ದೇಶ’ ಎಂದು ಅವರು ಅಭಿಪ್ರಾಯಪಟ್ಟರು. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಉಚಿತವಾಗಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು