AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವಳ ಕೆನ್ನೆಗೆ ಹೊಡೆದುಬಿಟ್ಟೆ’; 8 ವರ್ಷಗಳ ಪ್ರೀತಿ ಕಳೆದುಕೊಂಡ ಕಥೆ ಹೇಳಿದ ಕಾರ್ತಿಕ್

ಕಾರ್ತಿಕ್ ಅವರು ಬಿಗ್ ಬಾಸ್​ನಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ‘ಡೊಳ್ಳು’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರು ತಮ್ಮ ಜೀವನದಲ್ಲಾದ ಕಹಿ ಘಟನೆ ನೆನಪಿಸಿಕೊಂಡಿದ್ದಾರೆ.

‘ಅವಳ ಕೆನ್ನೆಗೆ ಹೊಡೆದುಬಿಟ್ಟೆ’; 8 ವರ್ಷಗಳ ಪ್ರೀತಿ ಕಳೆದುಕೊಂಡ ಕಥೆ ಹೇಳಿದ ಕಾರ್ತಿಕ್
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Oct 26, 2023 | 7:32 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಮೂರನೇ ವಾರ ಪೂರ್ಣಗೊಳ್ಳುತ್ತಾ ಬಂದಿದೆ. ಪ್ರತಿ ವಾರ ಒಬ್ಬರು ಎಲಿಮಿನೇಟ್ ಆಗುತ್ತಿದ್ದಾರೆ. ಇವುಗಳ ಮಧ್ಯೆ ಬಿಗ್ ಬಾಸ್​ನಲ್ಲಿ ಹಲವು ರೀತಿಯ ಟಾಸ್ಕ್ ಹಾಗೂ ಚಟುವಟಿಕೆಗಳನ್ನು ನೀಡಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಬಿಗ್ ಬಾಸ್ ಸ್ಪರ್ಧಿಗಳಿಗೆ ಕ್ಷಮೆ ಕೇಳುವ ಅವಕಾಶವನ್ನು ಬಿಗ್ ಬಾಸ್ ನೀಡಿದ್ದರು. ಸಂಗೀತಾ ಶೃಂಗೇರಿ (Sangeetha Sringeri), ವಿನಯ್ ಸೇರಿದಂತೆ ಅನೇಕರು ತಾವು ಜೀವನದಲ್ಲಿ ಮಾಡಿದ ತಪ್ಪನ್ನು ನೆನೆದು ಕ್ಷಮೆ ಕೇಳಿದ್ದಾರೆ. ಕೆಲ ವರ್ಷಗಳ ಹಿಂದೆ ಕಾರ್ತಿಕ್ ಮಹೇಶ್ ಅವರ ಎಂಟು ವರ್ಷದ ಪ್ರೀತಿ ಕೊನೆಯಾಗಿತ್ತು. ಆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಕಾರ್ತಿಕ್ ಅವರು ಬಿಗ್ ಬಾಸ್​ನಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ‘ಡೊಳ್ಳು’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರು ತಮ್ಮ ಜೀವನದಲ್ಲಾದ ಕಹಿ ಘಟನೆ ನೆನಪಿಸಿಕೊಂಡಿದ್ದಾರೆ.

‘2021ರ ಏಪ್ರಿಲ್​ನಲ್ಲಿ ಅಪ್ಪ ತೀರಿ ಹೋದರು. ಇದಾದ ನಾಲ್ಕೇ ತಿಂಗಳಿಗೆ 8 ವರ್ಷದ ರಿಲೇಶನ್​ಶಿಪ್ ಮುರಿದು ಬಿತ್ತು. ಈ ಘಟನೆ ನಡೆದ ಒಂದು ತಿಂಗಳಿಗೆ 13 ವರ್ಷದಿಂದ ಸಾಕಿದ ನಾಯಿ ಸತ್ತು ಹೋಯಿತು. ಆ ಬಳಿಕ ಹೊಟ್ಟೆಯಲ್ಲಿ ಅಲ್ಸರ್ ಆಯ್ತು. ಚೆನ್ನಾಗಿ ದುಡಿಯುತ್ತಿದ್ದೇನೆ ಎಂದುಕೊಳ್ಳುವಾಗ ಇಷ್ಟೆಲ್ಲ ಆಯ್ತು’ ಎಂದು ದುಃಖ ಹೊರಹಾಕಿದ್ದಾರೆ ಕಾರ್ತಿಕ್.

‘ಒಂದು ಪ್ರೀತಿ ಮುರಿದು ಬೀಳೋಕೆ ಇಬ್ಬರೂ ಕಾರಣರಾಗಿರುತ್ತಾರೆ. ಆದರೆ, ಈ 8 ವರ್ಷದ ರಿಲೇಶನ್​ಶಿಪ್ ಬ್ರೇಕಪ್ ಆಗೋಕೆ ಹೆಚ್ಚಿನ ಪಾಲು ನನ್ನದೆ. ನಾನು ಅವಳ ಕೆನ್ನೆಗೆ ಹೊಡೆದೆ. ಆ ವಿಷಯಕ್ಕೆ ಕ್ಷಮೆ ಕೇಳಿದ್ದೀನಿ. ಮನಸ್ಸಿಂದ ಹೇಳಿಲ್ಲ ಎಂದು ಅವಳಿಗೆ ಅನಿಸಿದೆ. ನಾನು ಮನಸಾರೆ ಕ್ಷಮೆ ಕೇಳುತ್ತೇನೆ’ ಎಂದರು ಕಾರ್ತಿಕ್.

ಇದನ್ನೂ ಓದಿ: ‘ನೀನು ಫೇಕ್​’; ಜೊತೆಯಾಗಿದ್ದ ಕಾರ್ತಿಕ್ ಹಾಗೂ ಸಂಗೀತಾ ಮಧ್ಯೆ ಮೂಡಿತು ವೈಮನಸ್ಸು

2021ರಲ್ಲಿ ತಂದೆಗೆ ಅನಾರೋಗ್ಯ ಕಾಡಿದಾಗ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು ಕಾರ್ತಿಕ್. ‘ಅಪ್ಪನ ಉಳಿಸಿಕೊಂಡು ಬರ್ತೀನಿ ಎಂದು ಅಮ್ಮನಿಗೆ ಪ್ರಾಮಿಸ್ ಮಾಡಿದ್ದೆ. ಆದರೆ, ಅದು ಸಾಧ್ಯವಾಗಲಿಲ್ಲ. ಅಮ್ಮನಿಗೆ ಒಂಟಿತನ ಕಾಡುತ್ತದೆ’ ಎಂದಿದ್ದಾರೆ ಕಾರ್ತಿಕ್. ಕಲರ್ಸ್ ಕನ್ನಡ ವಾಹಿನಿಯಲ್ಲಿ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್