‘ನಾನು ರೂಲ್ಸ್​​ನ ಸೆಟ್​​ ಮಾಡ್ತೀನಿ’; ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಕಾರ್ತಿಕ್ ಮಹೇಶ್

‘ಬಿಗ್ ಬಾಸ್ ಕನ್ನಡ ಸೀಸನ್ 10’ ಜನವರಿ ತಿಂಗಳ ಅಂತ್ಯದ ವೇಳೆಗೆ ಪೂರ್ಣಗೊಂಡಿತ್ತು. ಕಾರ್ತಿಕ್ ಮಹೇಶ್ ಅವರು ಸದ್ಯ ‘ರಾಮರಸ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೆಲ ತಿಂಗಳ ಹಿಂದೆ ಈ ಚಿತ್ರದ ಇಂಟ್ರೋಡಕ್ಷನ್ ವಿಡಿಯೋ ರಿಲೀಸ್ ಮಾಡಲಾಗಿತ್ತು. ಈಗ ರಿಯಾಲಿಟಿ ಶೋಗೆ ಅವರು ಹೋಸ್ಟ್ ಆಗಿದ್ದಾರೆ.

‘ನಾನು ರೂಲ್ಸ್​​ನ ಸೆಟ್​​ ಮಾಡ್ತೀನಿ’; ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಕಾರ್ತಿಕ್ ಮಹೇಶ್
ಕಾರ್ತಿಕ್ ಮಹೇಶ್
Follow us
|

Updated on: Sep 09, 2024 | 7:30 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ ವಿನ್ನರ್ ಕಾರ್ತಿಕ್ ಮಹೇಶ್ ಅವರು ದೊಡ್ಡ ಮಟ್ಟದ ಖ್ಯಾತಿ ಗಳಿಸಿಕೊಂಡಿದ್ದಾರೆ. ಅವರು ‘ರಾಮರಸ’ ಹೆಸರಿನ ಸಿನಿಮಾ ಕೂಡ ಸಹಿ ಮಾಡಿದ್ದು, ಶೂಟ್ ನಡೆಯುತ್ತಿದೆ. ಈಗ ಅವರು ರಿಯಾಲಿಟಿ ಶೋ ಒಂದಕ್ಕೆ ಹೋಸ್ಟ್ ಆಗಿ ಆಯ್ಕೆ ಆಗಿದ್ದಾರೆ. ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗಲಿರೋ ರಿಯಾಲಿಟಿ ಶೋನ ನೇತೃತ್ವವನ್ನು ಕಾರ್ತಿಕ್ ವಹಿಸಿಕೊಂಡಿದ್ದಾರೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಖುಷಿಯಾಗಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಕೆಲವು ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿವೆ. ಅವುಗಳ ಸಾಲಿಗೆ ಈಗ ಹೊಸ ಶೋ ಸೇರ್ಪಡೆ ಆಗಿದೆ. ಅದುವೇ ‘ಸುವರ್ಣ ಸೆಲೆಬ್ರಿಟಿ ಲೀಗ್’. ಸೆಪ್ಟೆಂಬರ್ 15ರಿಂದ ರಾತ್ರಿ 7 ಗಂಟೆಗೆ ಈ ಶೋ ಪ್ರಸಾರ ಕಾಣುತ್ತಿದೆ. ಇದರಲ್ಲಿ ಮತ್ತೊಂದು ವಿಶೇಷ ಎಂದರೆ ಕಿರುತೆರೆ ಕಲಾವಿದರ ಜೊತೆಗೆ ಕೆಲವು ಮಾಜಿ ಬಿಗ್ ಬಾಸ್ ಸ್ಪರ್ಧಿಗಳು ಬರುತ್ತಿದ್ದಾರೆ.

ಹೌದು, ವಿನಯ್ ಗೌಡ, ತನಿಷಾ ಕುಪ್ಪಂಡ, ನಮ್ರತಾ ಗೌಡ, ರಕ್ಷಕ್ ಬುಲೆಟ್, ಪ್ರಿಯಾಂಕಾ ಈ ಶೋನಲ್ಲಿ ಇರಲಿದ್ದಾರೆ. ‘ಎದುರಾಳಿಗಳ ಹುಟ್ಟಡಗಿಸೋದಕ್ಕೆ ಆನೆ ಬರ್ತಿದೆ, ಹುಶಾರು’ ಎನ್ನುತ್ತಾರೆ ವಿನಯ್ ಗೌಡ. ‘ಜಗತ್ತಿನಲ್ಲಿ ಮೂರು ತರಹದ ಜನರು ಇರುತ್ತಾರೆ. ಒಬ್ಬರು ರೂಲ್ಸ್​ನ ಬ್ರೇಕ್ ಮಾಡೋರು, ಒಬ್ಬರು ಫಾಲೋ ಮಾಡೋರು. ಮೂರನೆಯವನು ನಾನು ರೂಲ್ಸ್​ನ ಸೆಟ್ ಮಾಡುವವನು’ ಎಂದಿದ್ದಾರೆ ಕಾರ್ತಿಕ್.

ಇದನ್ನೂ ಓದಿ: ಬಿಗ್ ಬಾಸ್ ಮುಗಿದ ಏಳು ತಿಂಗಳ ಬಳಿಕ ಕಾರ್ತಿಕ್ ಮಹೇಶ್​ಗೆ ಸಿಕ್ತು ಕಾರು; ಇದರ ವಿಶೇಷತೆಗಳೇನು?

ಈ ರಿಯಾಲಿಟಿ ಶೋನಲ್ಲಿ ಎರಡು ಟೀಂ ಇದೆ. ಎರಡು ಟೀಂಗಳಿಗೆ ನಾನಾ ರೀತಿಯ ಟಾಸ್ಕ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಕಲರ್ಸ್ ಕನ್ನಡದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ಸಿದ್ಧತೆ ನಡೆಯುತ್ತಿದೆ. ಹೊಸ ರಿಯಾಲಿಟಿ ಶೋಗಾಗಿ ಬಿಗ್ ಬಾಸ್ ಮನೆ ಸಿದ್ಧಗೊಳ್ಳುತ್ತಿದೆ. ಶೀಘ್ರವೇ ಕಲರ್ಸ್ ಕನ್ನಡದಲ್ಲಿ ಪ್ರೋಮೋ ರಿಲೀಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ