AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ರೂಲ್ಸ್​​ನ ಸೆಟ್​​ ಮಾಡ್ತೀನಿ’; ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಕಾರ್ತಿಕ್ ಮಹೇಶ್

‘ಬಿಗ್ ಬಾಸ್ ಕನ್ನಡ ಸೀಸನ್ 10’ ಜನವರಿ ತಿಂಗಳ ಅಂತ್ಯದ ವೇಳೆಗೆ ಪೂರ್ಣಗೊಂಡಿತ್ತು. ಕಾರ್ತಿಕ್ ಮಹೇಶ್ ಅವರು ಸದ್ಯ ‘ರಾಮರಸ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕೆಲ ತಿಂಗಳ ಹಿಂದೆ ಈ ಚಿತ್ರದ ಇಂಟ್ರೋಡಕ್ಷನ್ ವಿಡಿಯೋ ರಿಲೀಸ್ ಮಾಡಲಾಗಿತ್ತು. ಈಗ ರಿಯಾಲಿಟಿ ಶೋಗೆ ಅವರು ಹೋಸ್ಟ್ ಆಗಿದ್ದಾರೆ.

‘ನಾನು ರೂಲ್ಸ್​​ನ ಸೆಟ್​​ ಮಾಡ್ತೀನಿ’; ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಕಾರ್ತಿಕ್ ಮಹೇಶ್
ಕಾರ್ತಿಕ್ ಮಹೇಶ್
ರಾಜೇಶ್ ದುಗ್ಗುಮನೆ
|

Updated on: Sep 09, 2024 | 7:30 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ವಿನ್ನರ್ ಕಾರ್ತಿಕ್ ಮಹೇಶ್ ಅವರು ದೊಡ್ಡ ಮಟ್ಟದ ಖ್ಯಾತಿ ಗಳಿಸಿಕೊಂಡಿದ್ದಾರೆ. ಅವರು ‘ರಾಮರಸ’ ಹೆಸರಿನ ಸಿನಿಮಾ ಕೂಡ ಸಹಿ ಮಾಡಿದ್ದು, ಶೂಟ್ ನಡೆಯುತ್ತಿದೆ. ಈಗ ಅವರು ರಿಯಾಲಿಟಿ ಶೋ ಒಂದಕ್ಕೆ ಹೋಸ್ಟ್ ಆಗಿ ಆಯ್ಕೆ ಆಗಿದ್ದಾರೆ. ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗಲಿರೋ ರಿಯಾಲಿಟಿ ಶೋನ ನೇತೃತ್ವವನ್ನು ಕಾರ್ತಿಕ್ ವಹಿಸಿಕೊಂಡಿದ್ದಾರೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಖುಷಿಯಾಗಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಕೆಲವು ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿವೆ. ಅವುಗಳ ಸಾಲಿಗೆ ಈಗ ಹೊಸ ಶೋ ಸೇರ್ಪಡೆ ಆಗಿದೆ. ಅದುವೇ ‘ಸುವರ್ಣ ಸೆಲೆಬ್ರಿಟಿ ಲೀಗ್’. ಸೆಪ್ಟೆಂಬರ್ 15ರಿಂದ ರಾತ್ರಿ 7 ಗಂಟೆಗೆ ಈ ಶೋ ಪ್ರಸಾರ ಕಾಣುತ್ತಿದೆ. ಇದರಲ್ಲಿ ಮತ್ತೊಂದು ವಿಶೇಷ ಎಂದರೆ ಕಿರುತೆರೆ ಕಲಾವಿದರ ಜೊತೆಗೆ ಕೆಲವು ಮಾಜಿ ಬಿಗ್ ಬಾಸ್ ಸ್ಪರ್ಧಿಗಳು ಬರುತ್ತಿದ್ದಾರೆ.

ಹೌದು, ವಿನಯ್ ಗೌಡ, ತನಿಷಾ ಕುಪ್ಪಂಡ, ನಮ್ರತಾ ಗೌಡ, ರಕ್ಷಕ್ ಬುಲೆಟ್, ಪ್ರಿಯಾಂಕಾ ಈ ಶೋನಲ್ಲಿ ಇರಲಿದ್ದಾರೆ. ‘ಎದುರಾಳಿಗಳ ಹುಟ್ಟಡಗಿಸೋದಕ್ಕೆ ಆನೆ ಬರ್ತಿದೆ, ಹುಶಾರು’ ಎನ್ನುತ್ತಾರೆ ವಿನಯ್ ಗೌಡ. ‘ಜಗತ್ತಿನಲ್ಲಿ ಮೂರು ತರಹದ ಜನರು ಇರುತ್ತಾರೆ. ಒಬ್ಬರು ರೂಲ್ಸ್​ನ ಬ್ರೇಕ್ ಮಾಡೋರು, ಒಬ್ಬರು ಫಾಲೋ ಮಾಡೋರು. ಮೂರನೆಯವನು ನಾನು ರೂಲ್ಸ್​ನ ಸೆಟ್ ಮಾಡುವವನು’ ಎಂದಿದ್ದಾರೆ ಕಾರ್ತಿಕ್.

ಇದನ್ನೂ ಓದಿ: ಬಿಗ್ ಬಾಸ್ ಮುಗಿದ ಏಳು ತಿಂಗಳ ಬಳಿಕ ಕಾರ್ತಿಕ್ ಮಹೇಶ್​ಗೆ ಸಿಕ್ತು ಕಾರು; ಇದರ ವಿಶೇಷತೆಗಳೇನು?

ಈ ರಿಯಾಲಿಟಿ ಶೋನಲ್ಲಿ ಎರಡು ಟೀಂ ಇದೆ. ಎರಡು ಟೀಂಗಳಿಗೆ ನಾನಾ ರೀತಿಯ ಟಾಸ್ಕ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಕಲರ್ಸ್ ಕನ್ನಡದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ಸಿದ್ಧತೆ ನಡೆಯುತ್ತಿದೆ. ಹೊಸ ರಿಯಾಲಿಟಿ ಶೋಗಾಗಿ ಬಿಗ್ ಬಾಸ್ ಮನೆ ಸಿದ್ಧಗೊಳ್ಳುತ್ತಿದೆ. ಶೀಘ್ರವೇ ಕಲರ್ಸ್ ಕನ್ನಡದಲ್ಲಿ ಪ್ರೋಮೋ ರಿಲೀಸ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ