AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಸ್ಟ್ರಾಂಗ್ ಎನಿಸಿಕೊಂಡು ಎಡವುತ್ತಿದ್ದಾರೆ ಈ ಸ್ಪರ್ಧಿಗಳು..

ಆರಂಭದಲ್ಲಿ ಸ್ಟ್ರಾಂಗ್ ಎನಿಸಿಕೊಂಡ ಸ್ಪರ್ಧಿಗಳು ಇತ್ತೀಚಿಗಿನ ದಿನಗಳಲ್ಲಿ ಸಾಕಷ್ಟು ಎಡವುತ್ತಿದ್ದಾರೆ. ಅವರು ಈಗ ತಿದ್ದುಕೊಳ್ಳದೇ ಇದ್ದರೆ ಫಿನಾಲೆಯಲ್ಲಿ ಕಪ್​ ಎತ್ತಬೇಕು ಎನ್ನುವ ಕನಸು ನಾಶ ಆಗಲಿದೆ. ಅವರು ಯಾರು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್​ನಲ್ಲಿ ಸ್ಟ್ರಾಂಗ್ ಎನಿಸಿಕೊಂಡು ಎಡವುತ್ತಿದ್ದಾರೆ ಈ ಸ್ಪರ್ಧಿಗಳು..
ಬಿಗ್ ಬಾಸ್​ನಲ್ಲಿ ಸ್ಟ್ರಾಂಗ್ ಎನಿಸಿಕೊಂಡು ಎಡವುತ್ತಿದ್ದಾರೆ ಈ ಸ್ಪರ್ಧಿಗಳು..
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Jan 11, 2024 | 1:01 PM

Share

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧೆ ಜೋರಾಗಿದೆ. ಈಗ ಸದ್ಯ ಉಳಿದಿರೋದು ಎಂಟು ಮಂದಿ ಮಾತ್ರ. ಈ ಪೈಕಿ ಫಿನಾಲೆಗೆ ಉಳಿಯೋದು ಮೂವರು ಮಾತ್ರ. ಅವರು ಯಾರು ಎನ್ನುವ ಲೆಕ್ಕಾಚಾರ ಜೋರಾಗಿದೆ. ಅತ್ತ ಬಿಗ್ ಬಾಸ್ (Bigg Boss) ಮನೆಯಲ್ಲೂ ಸ್ಪರ್ಧೆ ಜೋರಾಗಿದೆ. ಆರಂಭದಲ್ಲಿ ಸ್ಟ್ರಾಂಗ್ ಎನಿಸಿಕೊಂಡ ಸ್ಪರ್ಧಿಗಳು ಇತ್ತೀಚಿಗಿನ ದಿನಗಳಲ್ಲಿ ಸಾಕಷ್ಟು ಎಡವುತ್ತಿದ್ದಾರೆ. ಅವರು ಈಗ ತಿದ್ದುಕೊಳ್ಳದೇ ಇದ್ದರೆ ಫಿನಾಲೆಯಲ್ಲಿ ಕಪ್​ ಎತ್ತಬೇಕು ಎನ್ನುವ ಕನಸು ನಾಶ ಆಗಲಿದೆ. ಅವರು ಯಾರು ಎನ್ನುವ ಬಗ್ಗೆ ಇಲ್ಲಿದೆ ವಿವರ.

ಕಾರ್ತಿಕ್ ಮಹೇಶ್

ಕಾರ್ತಿಕ್ ಮಹೇಶ್ ಅವರು ಸಾಕಷ್ಟು ಎಡವುತ್ತಿದ್ದಾರೆ. ಅವರು ಆರಂಭದಲ್ಲಿ ಸ್ಟ್ರಾಂಗ್ ಎನಿಸಿಕೊಂಡಿದ್ದರು. ಆದರೆ, ಇತ್ತೀಚೆಗೆ ಅವರು ಮೊದಲಿನ ರೀತಿ ಇಲ್ಲ. ಆರಂಭದಲ್ಲಿ ಸಂಗೀತಾ ಜೊತೆ ಇದ್ದಾಗ ಎಲ್ಲರಿಗೂ ಇಷ್ಟ ಆಗುತ್ತಿದ್ದರು. ಆದರೆ, ದಿನ ಕಳೆದಂತೆ ಅವರು ಬದಲಾದರು. ಸಂಗೀತಾ ಜೊತೆ ಮನಸ್ತಾಪ ಉಂಟಾಗಿದೆ. ಈಗ ಸಂಗೀತಾ ಅವರಿಂದ ದೂರವೇ ಇದ್ದಾರೆ. ತನಿಷಾಗೆ ಕಾರ್ತಿಕ್​ನಿಂದ ನೋವಾಗಿದೆ. ನಮ್ರತಾ ಜೊತೆ ಫ್ಲರ್ಟ್ ಮಾಡುತ್ತಿದ್ದಾರೆ. ಇದು ಅನೇಕರಿಗೆ ಇಷ್ಟ ಆಗುತ್ತಿಲ್ಲ. ಅವರಿಗೆ ಆಟದ ಮೇಲೆ ಗಮನ ಕಡಿಮೆ ಆಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಅವರು ಆಟ ಬದಲಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ.

ತನಿಷಾ ಕುಪ್ಪಂಡ

ತನಿಷಾ ಕುಪ್ಪಂಡ ಅವರು ಆರಂಭದಲ್ಲಿ ಸಾಕಷ್ಟು ಸ್ಟ್ರಾಂಗ್ ಎನಿಸಿಕೊಂಡಿದ್ದರು. ಆದರೆ, ಈಗ ಅವರ ಆಟದ ವರಸೆ ಬದಲಾಗಿದೆ. ಅವರ ಕಾಲಿಗೆ ಏಟಾದ ಬಳಿಕ ಕೊಂಚ ಡಲ್ ಆಗಿದ್ದಾರೆ. ಅವರ ಹೆಸರು ಈ ವಾರದ ನಾಮಿನೇಷನ್ ಲಿಸ್ಟ್​ನಲ್ಲಿ ಇದೆ. ಅವರಿಗೆ ಎಲಿಮಿನೇಷನ್ ಭಯ ಕಾಡಿದೆ. ಅವರು ಮತ್ತೆ ಮೊದಲಿನ ಫಾರ್ಮ್​ಗೆ ಮರಳಬೇಕಿದೆ.

ನಮ್ರತಾ ಗೌಡ

ನಮ್ರತಾ ಗೌಡ ಅವರು ಬಿಗ್ ಬಾಸ್​ಗೆ ಬಂದಾಗ ‘ವಿನಯ್ ಚಮಚಾ’ ಎಂಬ ಕುಖ್ಯಾತಿ ಪಡೆದರು. ಆ ಬಳಿಕ ಅವರು ವಿನಯ್ ಅವರಿಂದ ಅಂತರ ಕಾಯ್ದುಕೊಂಡರು. ಅಲ್ಲಿಂದ ಅವರು ಶೈನ್ ಆಗಲು ಆರಂಭಿಸಿದರು. ಕಳೆದ ಹಲವು ವಾರಗಳಿಂದ ಅವರ ಹೆಸರು ನಾಮಿನೇಷನ್​ನಲ್ಲಿ ಇರಲಿಲ್ಲ. ಆದರೆ, ಈ ವಾರ ಅವರು ನಾಮಿನೇಟ್ ಆಗಿದ್ದಾರೆ. ಈ ಬೆನ್ನಲ್ಲೇ ಅವರು ಕಣ್ಣೀರು ಹಾಕಲು ಆರಂಭಿಸಿದ್ದಾರೆ. ‘ಈ ಮನೆಯಿಂದ ನಾನು ಹೋಗಬೇಕು’ ಎಂದು ಅತ್ತಿದ್ದಾರೆ. ಬಹುಶಃ ಅವರಿಗೆ ಎಲಿಮಿನೇಷನ್ ಭಯ ಕಾಡಿದೆ ಎನ್ನಲಾಗುತ್ತಿದೆ. ಈ ವಾರ ಹಲವು ಅವಕಾಶ ಸಿಕ್ಕರೂ ಟಾಸ್ಕ್ ಆಡಲು ಅವರ ಬಳಿ ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಅವರು ಚಾರ್ಮ್ ಹೆಚ್ಚಿಸಿಕೊಳ್ಳಬೇಕಿದೆ.

ಇದನ್ನೂ ಓದಿ: ಜಗಳಕ್ಕೆ ಬಂದ ಕಾರ್ತಿಕ್​ಗೆ ಸರಿಯಾಗಿ ತಿರುಗೇಟು ಕೊಟ್ಟ ಸಂಗೀತಾ ಶೃಂಗೇರಿ

 ವಿನಯ್ ಗೌಡ

ಡ್ರೋನ್ ಪ್ರತಾಪ್ ಹೇಳಿದಂತೆ ವಿನಯ್ ಅವರ ನಾಲಿಗೆಗೆ ಲಗಾಮು ಬೀಳಬೇಕು. ಅವರು ಮಾತಿನಲ್ಲಿ ಪದೇ ಪದೇ ಎಡವುತ್ತಿದ್ದಾರೆ. ವಿನಯ್ ಗೌಡ ಅವರು ಮಾತನಾಡುವ ಭರದಲ್ಲಿ ಕೆಟ್ಟ ಪದ ಬಳಕೆ ಮಾಡುತ್ತಾರೆ. ಇದನ್ನು ಅವರು ನಿಯಂತ್ರಿಸಿಕೊಳ್ಳಬೇಕಿದೆ. ಉಳಿದ ಎಲ್ಲಾ ವಿಚಾರಗಳಲ್ಲಿ ಮಿಂಚುವ ವಿನಯ್ ಇದೊಂದು ವಿಚಾರದಿಂದ ಹಿನ್ನಡೆ ಅನುಭವಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Thu, 11 January 24

ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ