AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನರಸಿ ರಾಧೆ’ ನಟಿ ಕೌಸ್ತುಭ ಅವರ ಮೈನಸ್​ ಪಾಯಿಂಟ್​ ಏನು? ಬಿಗ್​ ಬಾಸ್​ ಮನೆಯಲ್ಲಿ ಸತ್ಯ ಬಾಯ್ಟಿಟ್ಟ ಇಂಚರ

‘ನನ್ನರಸಿ ರಾಧೆ’ ಧಾರಾವಾಹಿಯ ಕೌಸ್ತುಭ ಎರಡನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಮೊದಲ ಸ್ಪರ್ಧಿಯಾಗಿ ಮನೆ ಪ್ರವೇಶಿಸಿದ್ದು ಅಕುಲ್​.

‘ನನ್ನರಸಿ ರಾಧೆ’ ನಟಿ ಕೌಸ್ತುಭ ಅವರ ಮೈನಸ್​ ಪಾಯಿಂಟ್​ ಏನು? ಬಿಗ್​ ಬಾಸ್​ ಮನೆಯಲ್ಲಿ ಸತ್ಯ ಬಾಯ್ಟಿಟ್ಟ ಇಂಚರ
Kaustubha Mani Inchara Talks About her Big Minus Point
TV9 Web
| Edited By: |

Updated on:Aug 14, 2021 | 5:15 PM

Share

‘ನನ್ನರಸಿ ರಾಧೆ’ ಧಾರಾವಾಹಿ ಮೂಲಕ ಇಂಚರ ಎಂದೇ ಹೆಚ್ಚು ಪರಿಚಿತರಾದವರು ಕೌಸ್ತುಭ. ‘ನನ್ನರಸಿ ರಾಧೆ’ ಧಾರಾವಾಹಿಯಲ್ಲಿ ತುಂಬಾನೇ ಮುಗ್ಧ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ ಅವರು. ಅಗಸ್ತ್ಯ ಮತ್ತು ಇಂಚರ ಕಾಂಬಿನೇಷನ್​ ಎಲ್ಲರಿಗೂ ಇಷ್ಟವಾಗಿದೆ. ಕೌಸ್ತುಭ ಮಾಡಿರುವ ಇಂಚರ ಪಾತ್ರ ತುಂಬಾ ಜನರಿಗೆ ಇಷ್ಟವಾಗಿದೆ. ಈಗ ಅವರು ದೊಡ್ಡ ಮೈನಸ್​ ಪಾಯಿಂಟ್​ ಹೇಳಿಕೊಂಡಿದ್ದಾರೆ.

ಬಿಗ್​ ಬಾಸ್​ ಮಿನಿ ಸೀಸನ್​ ಆರು ದಿನಗಳ ಕಾಲ ನಡೆಯಲಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇಷ್ಟು ದಿನ ಕೇವಲ ಹೊರಗಿನಿಂದ ಬಿಗ್​ ಬಾಸ್​ ಮನೆ ನೋಡುತ್ತಿದ್ದ ಸೀರಿಯಲ್​ ಕಲಾವಿದರಿಗೆ ಬಿಗ್​ ಬಾಸ್​ ಮನೆ ಒಳಗೆ ಕಾಲಿಡುವ ಅವಕಾಶ ಸಿಕ್ಕಿದೆ. ಶನಿವಾರ (ಆಗಸ್ಟ್​ 14) ಈ ಕಾರ್ಯಕ್ರಮ ಪ್ರಸಾರವಾಗುತ್ತಿದೆ.

‘ನನ್ನರಸಿ ರಾಧೆ’ ಧಾರಾವಾಹಿಯ ಕೌಸ್ತುಭ ಎರಡನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಮೊದಲ ಸ್ಪರ್ಧಿಯಾಗಿ ಮನೆ ಪ್ರವೇಶಿಸಿದ್ದು ಅಕುಲ್​. ಮನೆಗೆ ಬಂದ ಎಲ್ಲಾ ಸದಸ್ಯರನ್ನು ಅಕುಲ್​ ಮಾತನಾಡಿಸಿದ್ದಾರೆ. ಈ ವೇಳೆ ಕೌಸ್ತುಭ ಅವರು ಅಕುಲ್​ ಜತೆ ಒಂದಷ್ಟು ವಿಚಾರ ಹಂಚಿಕೊಂಡಿದ್ದಾರೆ.

ನಿಮಗೆ ಕೋಪ ಬೇಗ ಬರುತ್ತದೆಯಂತೆ ನಿಜವೇ ಎಂದು ಕೌಸ್ತುಭ ಅವರನ್ನು ಪ್ರಶ್ನೆ ಮಾಡಿದರು ಅಕುಲ್​. ಇದನ್ನು ಕೌಸ್ತುಭ ಒಪ್ಪಿಕೊಂಡಿದ್ದಾರೆ. ‘ನನಗೆ ಕೋಪ ತುಂಬಾ ಬೇಗ ಬರುತ್ತದೆ. ಬಂದ ಕೋಪ ಹಾಗೆಯೇ ಉಳಿಯುತ್ತದೆ. ಬೇಗ ಹೋಗಲ್ಲ. ಕೋಪ ಕೂಡ ನಾನ್​ ಸ್ಟಾಪ್​. ನಾನು ಜಗಳ ಆಡೋದು ತುಂಬಾ ಕಡಿಮೆ. ನಾನು ಕ್ಲೋಸ್​ ಇದ್ರಷ್ಟೇ ಜಗಳ ಆಡ್ತೀನಿ’ ಎನ್ನುವ ಮೂಲಕ ಕೌಸ್ತುಭ ತಮ್ಮ ಮೈನಸ್​ ಪಾಯಿಂಟ್​ ಹೇಳಿಕೊಂಡರು. ಬೇಗ ಕೋಪ ಬಂದು ಅದು ತಡವಾಗಿ ತಣ್ಣಗಾಗುವುದರಿಂದ ಅವರ ಸುತ್ತಮುತ್ತ ಇರುವವರಿಗೆ ಕೆಲವೊಮ್ಮೆ ತೊಂದರೆ ಆದ ಉದಾಹರಣೆ ಇದೆಯಂತೆ,.

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಮಿನಿ ಬಿಗ್​ ಬಾಸ್​ ಆರಂಭವಾಗಿದೆ. ಕಲರ್ಸ್​ ಕನ್ನಡ ವಾಹಿನಿ ಸೀರಿಯಲ್​ನಲ್ಲಿ ನಟಿಸುತ್ತಿರುವ ಕಲಾವಿದರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿರೋದು ವಿಶೇಷ. ಕೊನೆಯ ಎಪಿಸೋಡ್​ಅನ್ನು ಕಿಚ್ಚ ಸುದೀಪ್​ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: ಜಾತಿ ನಿಂದನೆ ಆರೋಪದಡಿ ಬಿಗ್​ ಬಾಸ್​ ಸ್ಪರ್ಧಿ ಅರೆಸ್ಟ್​; ಬಂಧನಕ್ಕೂ ಮೊದಲು ರಂಪಾಟ ಮಾಡಿದ ನಟಿ

ಬಿಗ್​ ಬಾಸ್​ ಮಿನಿ ಸೀಸನ್​ ನಿರೂಪಣೆಗೆ ಸುದೀಪ್​ ಬರೋದು ಪಕ್ಕಾ; ಆದರೆ ಯಾವಾಗ?

Published On - 5:14 pm, Sat, 14 August 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ