AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನರಸಿ ರಾಧೆ’ ನಟಿ ಕೌಸ್ತುಭ ಅವರ ಮೈನಸ್​ ಪಾಯಿಂಟ್​ ಏನು? ಬಿಗ್​ ಬಾಸ್​ ಮನೆಯಲ್ಲಿ ಸತ್ಯ ಬಾಯ್ಟಿಟ್ಟ ಇಂಚರ

‘ನನ್ನರಸಿ ರಾಧೆ’ ಧಾರಾವಾಹಿಯ ಕೌಸ್ತುಭ ಎರಡನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಮೊದಲ ಸ್ಪರ್ಧಿಯಾಗಿ ಮನೆ ಪ್ರವೇಶಿಸಿದ್ದು ಅಕುಲ್​.

‘ನನ್ನರಸಿ ರಾಧೆ’ ನಟಿ ಕೌಸ್ತುಭ ಅವರ ಮೈನಸ್​ ಪಾಯಿಂಟ್​ ಏನು? ಬಿಗ್​ ಬಾಸ್​ ಮನೆಯಲ್ಲಿ ಸತ್ಯ ಬಾಯ್ಟಿಟ್ಟ ಇಂಚರ
Kaustubha Mani Inchara Talks About her Big Minus Point
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 14, 2021 | 5:15 PM

Share

‘ನನ್ನರಸಿ ರಾಧೆ’ ಧಾರಾವಾಹಿ ಮೂಲಕ ಇಂಚರ ಎಂದೇ ಹೆಚ್ಚು ಪರಿಚಿತರಾದವರು ಕೌಸ್ತುಭ. ‘ನನ್ನರಸಿ ರಾಧೆ’ ಧಾರಾವಾಹಿಯಲ್ಲಿ ತುಂಬಾನೇ ಮುಗ್ಧ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ ಅವರು. ಅಗಸ್ತ್ಯ ಮತ್ತು ಇಂಚರ ಕಾಂಬಿನೇಷನ್​ ಎಲ್ಲರಿಗೂ ಇಷ್ಟವಾಗಿದೆ. ಕೌಸ್ತುಭ ಮಾಡಿರುವ ಇಂಚರ ಪಾತ್ರ ತುಂಬಾ ಜನರಿಗೆ ಇಷ್ಟವಾಗಿದೆ. ಈಗ ಅವರು ದೊಡ್ಡ ಮೈನಸ್​ ಪಾಯಿಂಟ್​ ಹೇಳಿಕೊಂಡಿದ್ದಾರೆ.

ಬಿಗ್​ ಬಾಸ್​ ಮಿನಿ ಸೀಸನ್​ ಆರು ದಿನಗಳ ಕಾಲ ನಡೆಯಲಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇಷ್ಟು ದಿನ ಕೇವಲ ಹೊರಗಿನಿಂದ ಬಿಗ್​ ಬಾಸ್​ ಮನೆ ನೋಡುತ್ತಿದ್ದ ಸೀರಿಯಲ್​ ಕಲಾವಿದರಿಗೆ ಬಿಗ್​ ಬಾಸ್​ ಮನೆ ಒಳಗೆ ಕಾಲಿಡುವ ಅವಕಾಶ ಸಿಕ್ಕಿದೆ. ಶನಿವಾರ (ಆಗಸ್ಟ್​ 14) ಈ ಕಾರ್ಯಕ್ರಮ ಪ್ರಸಾರವಾಗುತ್ತಿದೆ.

‘ನನ್ನರಸಿ ರಾಧೆ’ ಧಾರಾವಾಹಿಯ ಕೌಸ್ತುಭ ಎರಡನೇ ಸ್ಪರ್ಧಿಯಾಗಿ ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಮೊದಲ ಸ್ಪರ್ಧಿಯಾಗಿ ಮನೆ ಪ್ರವೇಶಿಸಿದ್ದು ಅಕುಲ್​. ಮನೆಗೆ ಬಂದ ಎಲ್ಲಾ ಸದಸ್ಯರನ್ನು ಅಕುಲ್​ ಮಾತನಾಡಿಸಿದ್ದಾರೆ. ಈ ವೇಳೆ ಕೌಸ್ತುಭ ಅವರು ಅಕುಲ್​ ಜತೆ ಒಂದಷ್ಟು ವಿಚಾರ ಹಂಚಿಕೊಂಡಿದ್ದಾರೆ.

ನಿಮಗೆ ಕೋಪ ಬೇಗ ಬರುತ್ತದೆಯಂತೆ ನಿಜವೇ ಎಂದು ಕೌಸ್ತುಭ ಅವರನ್ನು ಪ್ರಶ್ನೆ ಮಾಡಿದರು ಅಕುಲ್​. ಇದನ್ನು ಕೌಸ್ತುಭ ಒಪ್ಪಿಕೊಂಡಿದ್ದಾರೆ. ‘ನನಗೆ ಕೋಪ ತುಂಬಾ ಬೇಗ ಬರುತ್ತದೆ. ಬಂದ ಕೋಪ ಹಾಗೆಯೇ ಉಳಿಯುತ್ತದೆ. ಬೇಗ ಹೋಗಲ್ಲ. ಕೋಪ ಕೂಡ ನಾನ್​ ಸ್ಟಾಪ್​. ನಾನು ಜಗಳ ಆಡೋದು ತುಂಬಾ ಕಡಿಮೆ. ನಾನು ಕ್ಲೋಸ್​ ಇದ್ರಷ್ಟೇ ಜಗಳ ಆಡ್ತೀನಿ’ ಎನ್ನುವ ಮೂಲಕ ಕೌಸ್ತುಭ ತಮ್ಮ ಮೈನಸ್​ ಪಾಯಿಂಟ್​ ಹೇಳಿಕೊಂಡರು. ಬೇಗ ಕೋಪ ಬಂದು ಅದು ತಡವಾಗಿ ತಣ್ಣಗಾಗುವುದರಿಂದ ಅವರ ಸುತ್ತಮುತ್ತ ಇರುವವರಿಗೆ ಕೆಲವೊಮ್ಮೆ ತೊಂದರೆ ಆದ ಉದಾಹರಣೆ ಇದೆಯಂತೆ,.

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಮಿನಿ ಬಿಗ್​ ಬಾಸ್​ ಆರಂಭವಾಗಿದೆ. ಕಲರ್ಸ್​ ಕನ್ನಡ ವಾಹಿನಿ ಸೀರಿಯಲ್​ನಲ್ಲಿ ನಟಿಸುತ್ತಿರುವ ಕಲಾವಿದರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿರೋದು ವಿಶೇಷ. ಕೊನೆಯ ಎಪಿಸೋಡ್​ಅನ್ನು ಕಿಚ್ಚ ಸುದೀಪ್​ ನಡೆಸಿಕೊಡಲಿದ್ದಾರೆ.

ಇದನ್ನೂ ಓದಿ: ಜಾತಿ ನಿಂದನೆ ಆರೋಪದಡಿ ಬಿಗ್​ ಬಾಸ್​ ಸ್ಪರ್ಧಿ ಅರೆಸ್ಟ್​; ಬಂಧನಕ್ಕೂ ಮೊದಲು ರಂಪಾಟ ಮಾಡಿದ ನಟಿ

ಬಿಗ್​ ಬಾಸ್​ ಮಿನಿ ಸೀಸನ್​ ನಿರೂಪಣೆಗೆ ಸುದೀಪ್​ ಬರೋದು ಪಕ್ಕಾ; ಆದರೆ ಯಾವಾಗ?

Published On - 5:14 pm, Sat, 14 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ