AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಮಗುವಿನ ನಿರೀಕ್ಷೆಯಲ್ಲಿ ಕವಿತಾ ಗೌಡ-ಚಂದನ್​; ಸಿಹಿ ಸುದ್ದಿ ನೀಡಿದ ಜೋಡಿ

ನಟಿ ಕವಿತಾ ಗೌಡ ಹಾಗೂ ಚಂದನ್​ ಕುಮಾರ್​ ದಂಪತಿಯ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವುದಾಗಿ ಈ ದಂಪತಿ ತಿಳಿಸಿದ್ದಾರೆ. ಈ ಜೋಡಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಚಂದನ್​ ಕುಮಾರ್​ ಮತ್ತು ಕವಿತಾ ಗೌಡ ಅವರು ಜನಪ್ರಿಯತೆ ಹೊಂದಿದ್ದಾರೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ಕವಿತಾ ಗೌಡ-ಚಂದನ್​; ಸಿಹಿ ಸುದ್ದಿ ನೀಡಿದ ಜೋಡಿ
ಕವಿತಾ ಗೌಡ, ಚಂದನ್​ ಕುಮಾರ್​
ಮದನ್​ ಕುಮಾರ್​
|

Updated on: May 05, 2024 | 6:27 PM

Share

ಕಿರುತೆರೆಯ ಖ್ಯಾತ ನಟಿ ಕವಿತಾ ಗೌಡ (Kavitha Gowda) ಅವರು ಇಂದು (ಮೇ 5) ಸಿಹಿ ಸುದ್ದಿ ನೀಡಿದ್ದಾರೆ. ಪತಿ ಚಂದನ್​ ಕುಮಾರ್​ ಜೊತೆ ಇರುವ ಹೊಸ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ತಾವು ಪ್ರಗ್ನೆಂಟ್​ (Kavitha Gowda Pregnant) ಎಂಬುದನ್ನು ಅವರು ಖಚಿತಪಡಿಸಿದ್ದಾರೆ. ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವ ಕವಿತಾ ಗೌಡ ಮತ್ತು ಚಂದನ್​ ಕುಮಾರ್ (Chandan Kumar)​ ದಂಪತಿಗೆ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಧಾರಾವಾಹಿ, ರಿಯಾಲಿಟಿ ಶೋ ಹಾಗೂ ಸಿನಿಮಾಗಳ ಮೂಲಕ ಚಂದನ್​ ಕುಮಾರ್​ ಮತ್ತು ಕವಿತಾ ಗೌಡ ಅವರು ಜನಪ್ರಿಯತೆ ಪಡೆದಿದ್ದಾರೆ.

ಕವಿತಾ ಗೌಡ ಅವರು 2013ರಿಂದಲೂ ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಯ ಸೀರಿಯಲ್​ಗಳಲ್ಲೂ ಅವರು ನಟಿಸಿದ್ದಾರೆ. ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಿಂದ ಅವರಿಗೆ ಹೆಚ್ಚು ಖ್ಯಾತಿ ಸಿಕ್ಕಿತು. ‘ಬಿಗ್​ ಬಾಸ್​ ಕನ್ನಡ ಸೀಸನ್​ 6’ ಕಾರ್ಯಕ್ರಮದಲ್ಲಿ ಸ್ಪರ್ಧಿಸುವ ಮೂಲಕ ಇನ್ನಷ್ಟು ಫೇಮಸ್​ ಆದರು. 2021ರಲ್ಲಿ ಅವರು ಚಂದನ್​ ಕುಮಾರ್​ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಇದನ್ನೂ ಓದಿ: ಪ್ರೆಗ್ನೆಂಟ್​ ಎಂದು ಗಾಸಿಪ್​ ಹಬ್ಬಿಸಿದವರಿಗೆ ತಿರುಗೇಟು ನೀಡಿದ ಪರಿಣೀತಿ ಚೋಪ್ರಾ

ಚಂದನ್​ ಕುಮಾರ್​ ಕೂಡ ಹಲವು ಸೀರಿಯಲ್​ಗಳಲ್ಲಿ ನಟಿಸಿ ಮನೆಮಾತಾಗಿದ್ದಾರೆ. ಕವಿತಾ ಗೌಡ ಮತ್ತು ಚಂದನ್​ ಕುಮಾರ್​ ಪರಸ್ಪರ ಪ್ರೀತಿಸಿ ಮದುವೆ ಆದರು. ನಟನೆ ಮಾತ್ರವಲ್ಲದೇ ಹೋಟೆಲ್​ ಬಿಸ್ನೆಸ್​ನಲ್ಲೂ ಈ ದಂಪತಿ ತೊಡಗಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವ ಅವರು ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಮಗುವಿನ ಆಗಮನವನ್ನು ಈ ದಂಪತಿ ಎದುರು ನೋಡುತ್ತಿದ್ದಾರೆ.

ವಿಶೇಷ ಏನೆಂದರೆ, ಚಂದನ್​ ಕುಮಾರ್​ ಮತ್ತು ಕವಿತಾ ಗೌಡ ಅವರು ಶೇರ್​ ಮಾಡಿಕೊಂಡಿರುವ ಫೋಟೋವನ್ನು ಜೂಮ್​ ಮಾಡಿ ನೋಡಿದರೆ ಅದರಲ್ಲಿ ಪ್ರೆಗ್ನೆನ್ಸಿ ಸ್ಕ್ಯಾನ್​ ಕಾಪಿ ಕಾಣಿಸುತ್ತಿದೆ. ಕಿರುತೆರೆಯ ಅನೇಕ ಸೆಲೆಬ್ರಿಟಿಗಳು ಈ ಪೋಸ್ಟ್​ಗೆ ಕಮೆಂಟ್​ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ. ನೇಹಾ ಗೌಡ, ಗೀತಾ ಭಾರತಿ ಭಟ್​, ವಿನಯ್​ ಗೌಡ, ಶ್ವೇತಾ ಚಂಗಪ್ಪ ಮುಂತಾದವರು ವಿಶ್​ ಮಾಡಿದ್ದಾರೆ. ಪ್ರಗ್ನೆಂಟ್​ ಆಗಿರುವುದರಿಂದ ಕವಿತಾ ಕೌಡ ಅವರು ಒಂದಷ್ಟು ಸಮಯ ಬಣ್ಣದ ಲೋಕದಿಂದ ಬ್ರೇಕ್​ ಪಡೆಯಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ