ಚಂದನ್ ಪತ್ನಿ ಕವಿತಾ ಗೌಡ ತೆಲುಗು ಸೀರಿಯಲ್ ತೊರೆದಿದ್ದೇಕೆ? ನಟಿ ಬಿಚ್ಚಿಟ್ರು ಅಸಲಿ ವಿಚಾರ

ಕವಿತಾ ಗೌಡ ಅವರು ಒಂದು ತೆಲುಗು ಧಾರಾವಾಹಿಯಲ್ಲಿ ಮಾತ್ರ ನಟಿಸಿದ್ದಾರೆ. ಆ ಬಳಿಕ ಯಾವುದೇ ತೆಲುಗು ಸೀರಿಯಲ್​ನಲ್ಲಿ ನಟಿಸಿಲ್ಲ. ಹೀಗೇಕೆ ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

ಚಂದನ್ ಪತ್ನಿ ಕವಿತಾ ಗೌಡ ತೆಲುಗು ಸೀರಿಯಲ್ ತೊರೆದಿದ್ದೇಕೆ? ನಟಿ ಬಿಚ್ಚಿಟ್ರು ಅಸಲಿ ವಿಚಾರ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 01, 2022 | 10:39 PM

ತೆಲುಗು ಕಿರುತೆರೆಯಲ್ಲಿ ಕನ್ನಡದ ಸಾಕಷ್ಟು ಕಲಾವಿದರು ನಟಿಸುತ್ತಿದ್ದಾರೆ. ಆ ಪೈಕಿ ಚಂದನ್ ಕುಮಾರ್ (Chandan Kumar) ಕೂಡ ಒಬ್ಬರು. ತೆಲುಗು ಕಿರುತೆರೆಯವರು ಕನ್ನಡಿಗರನ್ನು ಸಹಿಸುತ್ತಿಲ್ಲ ಎಂಬ ಮಾತನ್ನು ಚಂದನ್ ಕುಮಾರ್ ಆಡಿದ್ದಾರೆ. ತಮ್ಮ ಮೇಲೆ ಆದ ಹಲ್ಲೆ ಉದ್ದೇಶ ಪೂರ್ವಕ ಎಂಬುದು ಅವರ ಆರೋಪ. ಇಂದು (ಆಗಸ್ಟ್ 1) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಅವರು ಹಲವು ವಿಚಾರಗಳಿಗೆ ಸ್ಪಷ್ಟನೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಅವರ ಪತ್ನಿ ಕವಿತಾ ಗೌಡ (Kavitha Gowda) ಕೂಡ ಇದ್ದರು. ತಾವು ತೆಲುಗು ಕಿರುತೆರೆ ಲೋಕ ತೊರೆದಿದ್ದು ಏಕೆ ಎಂಬುದನ್ನು ಅವರು ವಿವರಿಸಿದ್ದಾರೆ.

ಕವಿತಾ ಗೌಡ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದರು. ಕನ್ನಡದ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಮೂಲಕ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಅವರು ಒಂದು ತೆಲುಗು ಧಾರಾವಾಹಿಯಲ್ಲಿ ಮಾತ್ರ ನಟಿಸಿದ್ದಾರೆ. ಆ ಬಳಿಕ ಯಾವುದೇ ತೆಲುಗು ಸೀರಿಯಲ್​ನಲ್ಲಿ ನಟಿಸಿಲ್ಲ. ಹೀಗೇಕೆ ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಪತಿಗೆ ಆದ ಅನ್ಯಾಯದ ಬಗ್ಗೆ ಬೇಸರ ಹೊರ ಹಾಕಿದ್ದಾರೆ.

ಪತಿ ಮೇಲೆ ಆದ ಹಲ್ಲೆ ಬಗ್ಗೆ ಮಾತನಾಡಿರುವ ಕವಿತಾ ಗೌಡ, ‘ಈ ವಿಚಾರದಲ್ಲಿ ನಾನು ಮಾತ್ರ ಸುಮ್ಮನೆ ಇರುವುದಿಲ್ಲ. ನನಗೆ ಮೊದಲು ಚಂದನ್ ಘಟನೆ ಬಗ್ಗೆ ಹೇಳಿರಲಿಲ್ಲ. ಬೇರೆ ಕಡೆಯಿಂದ ಆ ಬಗ್ಗೆ ಗೊತ್ತಾಯ್ತು. ಎಲ್ಲವೂ ಮಾತಲ್ಲಿ ಇರಬೇಕು. ಅದನ್ನು ಬಿಟ್ಟು ಹಲ್ಲೆ ಹೇಗೆ ಮಾಡಿದ್ರು? ಆ ಮೂರು ಜನ ಕ್ಷಮೆ ಕೇಳಬೇಕು. ಅಲ್ಲಿದ್ದ ನಮ್ಮವರೇ ನಮಗೆ ಸಪೋರ್ಟ್ ಮಾಡಲಿಲ್ಲ ಅನ್ನೋ ಬಗ್ಗೆ ಬೇಸರ ಇದೆ’ ಎಂದಿದ್ದಾರೆ ಕವಿತಾ ಗೌಡ.

ಇದನ್ನೂ ಓದಿ
Image
‘ನಾನು ಮತ್ತೆ ಆ ಧಾರಾವಾಹಿ ಮಾಡಲ್ಲ’; ತೆಲುಗು ಸೀರಿಯಲ್​ನಿಂದ ಹೊರ ಬರುವ ನಿರ್ಧಾರ ತೆಗೆದುಕೊಂಡ ಚಂದನ್ ಕುಮಾರ್
Image
‘ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು’; ವಿವಾದದ ಬಳಿಕ ಹೊಸ ಪೋಸ್ಟ್ ಹಾಕಿದ ಚಂದನ್ ಕುಮಾರ್
Image
Chandan Kumar: ನಟ ಚಂದನ್​ ಕುಮಾರ್​ ಮೇಲೆ ಹಲ್ಲೆ: ವೈರಲ್​ ವಿಡಿಯೋದಲ್ಲಿದೆ ಕಪಾಳಮೋಕ್ಷದ ದೃಶ್ಯ
Image
Chandan Kumar: ಕನ್ನಡದ ನಟ ಚಂದನ್​ ಕುಮಾರ್​ಗೆ ತೆಲುಗು ಧಾರಾವಾಹಿ ಶೂಟಿಂಗ್​ ಸೆಟ್​ನಲ್ಲಿ ಹಲ್ಲೆ; ವಿಡಿಯೋ ವೈರಲ್​

ಇದನ್ನೂ ಓದಿ: ಸೆಲ್ಫಿ ಕೇಳಿ ನಟಿ ಕವಿತಾ ಗೌಡ ಅವರನ್ನು ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು!; ವೈರಲ್ ವಿಡಿಯೋದ ಅಸಲಿಯತ್ತೇನು?

ತೆಲುಗು ಕಿರುತೆರೆ ಲೋಕ ತೊರೆದಿದ್ದು ಏಕೆ ಎಂಬ ಬಗ್ಗೆ ಕವಿತಾ ಗೌಡ ಮಾತನಾಡಿದ್ದಾರೆ. ‘ತೆಲುಗಿನಲ್ಲಿ ಕೆಲಸ ಮಾಡುವಾಗ ನನಗೆ ಕಂಫರ್ಟಬಲ್ ಅನಿಸಲಿಲ್ಲ. ಅದಕ್ಕೆ ನಾನು ಅಲ್ಲಿ ಕೆಲಸ ಮಾಡಲಿಲ್ಲ’ ಎಂದಿದ್ದಾರೆ ಕವಿತಾ ಗೌಡ. ‘ಶ್ರೀಮತಿ ಶ್ರೀನಿವಾಸ್​’ ಧಾರಾವಾಹಿಯಲ್ಲಿ ಚಂದನ್ ನಟಿಸುತ್ತಿದ್ದರು. ಈ ಧಾರಾವಾಹಿ ಸೆಟ್​ನಲ್ಲೇ ಕಿರಿಕ್ ಆಗಿತ್ತು. ಈ ಧಾರಾವಾಹಿಯಿಂದ ಹೊರ ಬರುವ ನಿರ್ಧಾರಕ್ಕೆ ಚಂದನ್ ಬಂದಿದ್ದಾರೆ. ಗಂಡನ ನಿರ್ಧಾರವನ್ನು ಕವಿತಾ ಬೆಂಬಲಿಸಿದ್ದಾರೆ.

Published On - 10:36 pm, Mon, 1 August 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು