ನಾನು ಕಳಪೆ ಆಗಬೇಕು: ಬಿಗ್​ ಬಾಸ್ ಮನೆಯಲ್ಲಿ ಕಾವ್ಯಾ ಶೈವ ವಿಚಿತ್ರ ಆಸೆ

ಬಿಗ್ ಬಾಸ್ ಫಿನಾಲೆ ವಾರದಲ್ಲಿ ಕಾವ್ಯಾ ಶೈವ ಅವರು ಕಳಪೆ ಪಟ್ಟ ಪಡೆದು ಜೈಲಿಗೆ ಹೋಗಲು ನಿರ್ಧರಿಸಿದ್ದಾರೆ. ಅವರು ಈ ರೀತಿ ನಿರ್ಧಾರ ಮಾಡಲು ಕಾರಣ ಕೂಡ ಇದೆ. ಅದನ್ನು ಕ್ಯಾಮರಾ ಎದುರು ಅವರು ಹೇಳಿಕೊಂಡಿದ್ದಾರೆ. ಇನ್ನುಳಿದ ಸ್ಪರ್ಧಿಗಳು ಬೇರೆ ಬೇರೆ ಆಸೆಗಳನ್ನು ಬಿಗ್ ಬಾಸ್ ಮುಂದೆ ಇಟ್ಟಿದ್ದಾರೆ. ಶೀಘ್ರವೇ ಅವೆಲ್ಲ ಈಡೇರಲಿವೆ.

ನಾನು ಕಳಪೆ ಆಗಬೇಕು: ಬಿಗ್​ ಬಾಸ್ ಮನೆಯಲ್ಲಿ ಕಾವ್ಯಾ ಶೈವ ವಿಚಿತ್ರ ಆಸೆ
Kavya Shaiva

Updated on: Jan 13, 2026 | 10:39 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (BBK 12 Finale) ಜನವರಿ 17 ಮತ್ತು 18ರಂದು ನಡೆಯಲಿದೆ. ಈ ಫಿನಾಲೆ ವಾರದಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಡೆಯಲಿದೆ. ಅದಕ್ಕೂ ಮುನ್ನ ಎಲ್ಲ ಸ್ಪರ್ಧಿಗಳಿಗೆ ಕೆಲವು ವಿಶೇಷ ಸಲವತ್ತುಗಳನ್ನು ನೀಡಲಾಗಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ (Kavya Shaiva), ಧ್ರುವಂತ್, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಧನುಷ್ ಮತ್ತು ಗಿಲ್ಲಿ ನಟ (Gilli Nata) ಅವರು ಇದ್ದಾರೆ. ಇವರೆಲ್ಲರ ಒಂದು ಆಸೆಯನ್ನು ಈಡೇರಿಸುವುದಾಗಿ ಬಿಗ್ ಬಾಸ್ ಹೇಳಿದ್ದಾರೆ. ಕಾವ್ಯಾ ಶೈವ ಅವರು ಒಂದು ವಿಚಿತ್ರ ಆಸೆಯನ್ನು ಹೇಳಿಕೊಂಡಿದ್ದಾರೆ.

ಬಿಗ್ ಬಾಸ್ ನೀಡಿರುವ ಅವಕಾಶದ ಅನುಸಾರ ಸ್ಪರ್ಧಿಗಳು ತಲಾ 3 ಆಸೆಗಳನ್ನು ಹೇಳಬೇಕು. ಅದರಲ್ಲಿ ಸಾಧ್ಯವಾದ ಆಸೆಯನ್ನು ಬಿಗ್ ಬಾಸ್ ಈಡೇರಿಸುತ್ತಾರೆ. ಆಗ ಕಾವ್ಯಾ ಅವರು ತಮ್ಮ ಮೂರು ಆಸೆಗಳನ್ನು ಕ್ಯಾಮೆರಾ ಹೇಳಿಕೊಂಡರು. ‘ನನ್ನ ತಮ್ಮ ಮತ್ತೆ ಬಿಗ್ ಬಾಸ್ ಮನೆಗೆ ಬರಬೇಕು. ಬಿಗ್ ಬಾಸ್ ಮನೆಯಲ್ಲಿ ನಾನು ಒಂದು ಸಿನಿಮಾ ನೋಡಬೇಕು. ನಾನು ಕಳಪೆ ಆಗಿ ಜೈಲಿಗೆ ಹೋಗಬೇಕು’ ಎಂದು 3 ಆಸೆಗಳನ್ನು ಕಾವ್ಯಾ ತಿಳಿಸಿದರು.

ಮೊದಲ ಎರಡು ಆಸೆಗಳು ಚೆನ್ನಾಗಿಯೇ ಇವೆ. ಆದರೆ ಮೂರನೇ ಆಸೆ ಸ್ವಲ್ಪ ಸ್ವಲ್ಪ ವಿಚಿತ್ರವಾಗಿದೆ. ಯಾಕೆಂದರೆ, ಬಿಗ್ ಬಾಸ್ ಮನೆಯಲ್ಲಿ ಯಾರೂ ಕೂಡ ಕಳಪೆ ಪಡೆದು ಜೈಲಿಗೆ ಹೋಗಬೇಕು ಅಂತ ಬಯಸಲ್ಲ. ಕಳಪೆ ಪಟ್ಟದಿಂದ ತಪ್ಪಿಸಿಕೊಳ್ಳಬೇಕು ಎಂದೇ ಬಯಸುತ್ತಾರೆ. ಆದರೆ ಕಾವ್ಯಾ ಅವರು ತಾವು ಕೊನೇ ದಿನಗಳಲ್ಲಿ ಕಳಪೆ ಆಗಬೇಕು ಎಂದು ಆಸೆಪಟ್ಟಿದ್ದಾರೆ.

ಕಾವ್ಯಾ ಅವರ ಈ ಆಸೆಗೂ ಕಾರಣ ಇದೆ. ಬಿಗ್ ಬಾಸ್ ಮನೆಯಲ್ಲಿ ಅವರು ಎಲ್ಲ ಅನುಭವವನ್ನೂ ಪಡೆದುಕೊಂಡಿದ್ದಾರೆ. ಉತ್ತಮ ಪಡೆದಿದ್ದಾರೆ, ಕ್ಯಾಪ್ಟನ್ ಆಗಿದ್ದಾರೆ. ಆದರೆ ಜೈಲಿನ ಅನುಭವ ಹೇಗೆ ಇರುತ್ತದೆ ಎಂಬುದು ಅವರಿಗೆ ತಿಳಿದಿಲ್ಲ. ಅದರ ಅನುಭವವನ್ನೂ ಕೂಡ ಪಡೆಯಬೇಕು ಎಂಬುದು ಅವರ ಆಸೆ. ಹಾಗಾಗಿ ಅವರು ಬಿಗ್ ಬಾಸ್ ಎದುರು ಆಸೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ: ವಿಡಿಯೋ

ಮಗನ ಜೊತೆ ಸ್ವಿಮಿಂಗ್ ಪೂಲ್​ನಲ್ಲಿ ಆಟ ಆಡಬೇಕು, ಬಿಗ್ ಬಾಸ್ ಟಿವಿಯಲ್ಲಿ ಸಿನಿಮಾ ನೋಡಬೇಕು, ಮನೆಯವರ ಜೊತೆ ಇಷ್ಟದ ಅಡುಗೆ ಮಾಡಿಕೊಂಡು ತಿನ್ನಬೇಕು ಎಂದು ಮ್ಯೂಟೆಂಟ್ ರಘು ಅವರು ಆಸೆ ಹೇಳಿಕೊಂಡಿದ್ದಾರೆ. ನಲ್ಲಿ ಮೂಳೆ ತಿಂದು ಮಲಗಬೇಕು, ಟಿವಿಯಲ್ಲಿ ಸಿನಿಮಾ ನೋಡಬೇಕು ಎಂದು ಗಿಲ್ಲಿ ನಟ ಅವರು ಆಸೆಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us