AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ‘ಈ ಸಲದ ಬಿಗ್​ ಬಾಸ್​ ಬೇಸರ ತಂದಿದೆ’; ಅಸಮಾಧಾನಕ್ಕೆ ಕಾರಣ ತಿಳಿಸಿದ ಮಾಜಿ ಸ್ಪರ್ಧಿ ಕಾವ್ಯಾ ಶಾಸ್ತ್ರಿ

‘ಇದು ನಿಮ್ಮ ಮಗುವಿನ ಮನಸ್ಸಿನ ಮೇಲೆ ಪ್ರತೀಕೂಲ ಪರಿಣಾಮ ಬೀರುತ್ತದೆ ಹಾಗೂ ಅವರು ಈ ಸ್ವಭಾವದ ಅನುಕರಣೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ’ ಎಂದು ಕಾವ್ಯಾ ಶಾಸ್ತ್ರಿ ಹೇಳಿದ್ದಾರೆ. ಬಿಗ್ ಬಾಸ್​ ಕನ್ನಡ 10ನೇ ಸೀಸನ್​ ಬಗ್ಗೆ ಅವರು ಹಂಚಿಕೊಂಡಿರುವ ಅಭಿಪ್ರಾಯಕ್ಕೆ ಅನೇಕರು ಸಹಮತ ಸೂಚಿಸಿದ್ದಾರೆ. ಕಮೆಂಟ್​ಗಳ ಮೂಲಕ ನೆಟ್ಟಿಗರು ತಮ್ಮ ಅನಿಸಿಕೆ ತಿಳಿಸಿದ್ದಾರೆ.

Bigg Boss Kannada: ‘ಈ ಸಲದ ಬಿಗ್​ ಬಾಸ್​ ಬೇಸರ ತಂದಿದೆ’; ಅಸಮಾಧಾನಕ್ಕೆ ಕಾರಣ ತಿಳಿಸಿದ ಮಾಜಿ ಸ್ಪರ್ಧಿ ಕಾವ್ಯಾ ಶಾಸ್ತ್ರಿ
ಕಾವ್ಯಾ ಶಾಸ್ತ್ರಿ
ಮದನ್​ ಕುಮಾರ್​
|

Updated on:Nov 02, 2023 | 4:19 PM

Share

ನಟಿ ಕಾವ್ಯಾ ಶಾಸ್ತ್ರಿ (Kavya Shastry) ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada Season 10) ಶೋ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಸೀಸನ್​ನಲ್ಲಿ ಕೆಲವು ಸ್ಪರ್ಧಿಗಳು ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಅವರು ತಕರಾರು ಎತ್ತಿದ್ದಾರೆ. ಅಲ್ಲದೇ ಮಕ್ಕಳಿಗೆ ಈ ಶೋ ಸೂಕ್ತ ಅಲ್ಲ ಎಂದು ಕೂಡ ಹೇಳಿದ್ದಾರೆ.

‘ಈ ಸಲದ ಕನ್ನಡದ ಬಿಗ್​ ಬಾಸ್‌ ಸೀಸನ್‌ ನಿಜಕ್ಕೂ ಬೇಸರ ತಂದಿದೆ. ಶೋನಲ್ಲಿ ಉಳಿಯೋ ಭರದಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದನೆ, ಚಾರಿತ್ರ್ಯ ವಧೆ, ಹೆಣ್ಣುಮಕ್ಕಳ ಮೇಲೆ ಏಕವಚನದ ಬಳಕೆ, ಮಾನಸಿಕವಾಗಿ ಇತರರನ್ನು ಕುಗ್ಗಿಸುವ ಪ್ರಯತ್ನ, ಜೋರುಧ್ವನಿಯಲ್ಲಿ ಗದರುವುದು, ಹೆದರಿಸುವುದು, ಇವೆಲ್ಲವೂ ಹೆಚ್ಚಾಗಿದೆ. ಚಿಕ್ಕ ಮಕ್ಕಳಿರುವ ತಂದೆ-ತಾಯಂದಿರು ದಯವಿಟ್ಟು ಇಂತಹ ಕಾರ್ಯಕ್ರಮಗಳನ್ನು ಚಿಕ್ಕ ಮಕ್ಕಳ ಎದುರು ನೋಡದಿರಿ. ಇದು ನಿಮ್ಮ ಮಗುವಿನ ಮನಸ್ಸಿನ ಮೇಲೆ ಪ್ರತೀಕೂಲ ಪರಿಣಾಮ ಬೀರುತ್ತದೆ ಹಾಗೂ ಅವರು ಈ ಸ್ವಭಾವದ ಅನುಕರಣೆ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ’ ಎಂದು ಕಾವ್ಯಾ ಶಾಸ್ತ್ರಿ ಅವರು ಬರೆದುಕೊಂಡಿದ್ದಾರೆ.

‘ನಾನು ಯಾವುದೇ ಕಾರ್ಯಕ್ರಮದ ವಿರುದ್ಧವಾಗಿಲ್ಲ. ಚಿಕ್ಕ ಮಕ್ಕಳನ್ನು ಹೊಂದಿರುವ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದೇನೆ. ಯಾವ ವಯೋಮಾನದ ಪ್ರೇಕ್ಷಕರಿಗೆ ಇದು ಸೂಕ್ತ ಎಂಬ ಸೂಚನೆಯನ್ನು ಸೀರಿಯಲ್​ಗಳು ಕೂಡ ನೀಡುತ್ತವೆ. ಆದರೂ ಆ ಸೂಚನೆಯಲ್ಲಿ ನಿರ್ಲಕ್ಷಿಸಿ ನಾವು ಮನೆಯಲ್ಲಿ ಅದನ್ನು ವೀಕ್ಷಿಸುತ್ತೇವೆ. ನಿಮ್ಮ ಮಗು ಉದ್ದೇಶಪೂರ್ವಕವಾಗಿ ಇಂಥ ನೆಗೆಟಿವ್​ ಕಂಟೆಂಟ್​ ನೋಡದೇ ಇರಬಹುದು. ಕೇವಲ ಆಡಿಯೋ ಕೂಡ ಮಗುವಿನ ಮೇಲೆ ಪರಿಣಾಮ ಬೀರಬಹುದು. ನಿಮ್ಮ ಎನರ್ಜಿ ಮತ್ತು ಮಕ್ಕಳ ಬಗ್ಗೆ ಕಾಳಜಿ ವಹಿಸಿ’ ಎಂದು ಕಾವ್ಯಾ ಶಾಸ್ತ್ರಿ ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ವಿನಯ್​ ಗೌಡ ಕಾಲು ಇಟ್ಟಲ್ಲೆಲ್ಲ ಬರೀ ಜಗಳ

ಕನ್ನಡದ ಕಿರುತೆರೆ ಮತ್ತು ಸಿನಿಮಾಗಳಲ್ಲಿ ಕಾವ್ಯಾ ಶಾಸ್ತ್ರಿ ಅವರು ಗುರುತಿಸಿಕೊಂಡಿದ್ದಾರೆ. ನಟಿಯಾಗಿ, ನಿರೂಪಕಿಯಾಗಿ ಅವರು ಹೆಸರು ಗಳಿಸಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 4’ ಶೋನಲ್ಲಿ ಅವರು ಸ್ಪರ್ಧಿ ಆಗಿದ್ದರು. ಬಿಗ್ ಬಾಸ್​ 10ನೇ ಸೀಸನ್​ ಬಗ್ಗೆ ಕಾವ್ಯಾ ಶಾಸ್ತ್ರಿ ಹಂಚಿಕೊಂಡಿರುವ ಅಭಿಪ್ರಾಯಕ್ಕೆ ಅನೇಕರು ಸಹಮತ ಸೂಚಿಸಿದ್ದಾರೆ. ಕಮೆಂಟ್​ಗಳ ಮೂಲಕ ನೆಟ್ಟಿಗರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಉಚಿತ್ರವಾಗಿ ಈ ಶೋ ಪ್ರಸಾರ ಆಗುತ್ತಿದೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರತಿ ದಿನದ ಸಂಚಿಕೆ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:05 pm, Thu, 2 November 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ