AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಾಗಲ್ಲ ಸರ್​..’ ಎಂದು ಅಮಿತಾಭ್​ಗೆ ನಟನೆ ಹೇಳಿಕೊಟ್ಟ ದೀಪಿಕಾ, ಫರ್ಹಾ ಖಾನ್​; ವಿಡಿಯೋ ವೈರಲ್​

‘ಓಂ ಶಾಂತಿ ಓಂ’ ಸಿನಿಮಾದಲ್ಲಿನ ಒಂದು ದೃಶ್ಯವನ್ನು ದೀಪಿಕಾ ಪಡುಕೋಣೆ ಅಭಿನಯಿಸಿ ತೋರಿಸಿದರು. ಅದನ್ನು ಅಮಿತಾಭ್​ ಅನುಕರಿಸಬೇಕಿತ್ತು. ಅದಕ್ಕಾಗಿ ಅವರು ತುಂಬ ಕಷ್ಟಪಟ್ಟರು.

‘ಹಾಗಲ್ಲ ಸರ್​..’ ಎಂದು ಅಮಿತಾಭ್​ಗೆ ನಟನೆ ಹೇಳಿಕೊಟ್ಟ ದೀಪಿಕಾ, ಫರ್ಹಾ ಖಾನ್​; ವಿಡಿಯೋ ವೈರಲ್​
ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 05, 2021 | 4:24 PM

ಭಾರತೀಯ ಚಿತ್ರರಂಗದಲ್ಲಿ ನಟ ಅಮಿತಾಭ್​ ಬಚ್ಚನ್​ಗೆ ಸಾಟಿ ಆಗಬಲ್ಲ ಇನ್ನೋರ್ವ ನಟನಿಲ್ಲ. ಅಭಿನಯದಲ್ಲಿ ಹಲವು ದಶಕಗಳ ಅನುಭವ ಹೊಂದಿರುವ ಅವರ ಜೊತೆ ಒಮ್ಮೆಯಾದರೂ ತೆರೆಹಂಚಿಕೊಳ್ಳಬೇಕು ಎಂದು ಬಯಸುತ್ತಾರೆ ಎಲ್ಲ ಕಲಾವಿದರು. ಅಂಥ ದಿಗ್ಗಜ ನಟನಿಗೆ ನಿನ್ನೆ ಮೊನ್ನೆ ಬಂದ ನಟಿ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕಿ ಫರ್ಹಾ ಖಾನ್​ ನಟನೆ ಹೇಳಿಕೊಡುವುದು ಎಂದರೆ ಏನರ್ಥ? ಅಚ್ಚರಿ ಎನಿಸಿದರೂ ಇಂಥ ಒಂದು ಘಟನೆ ನಡೆದಿದೆ. ಅದಕ್ಕೆ ವೇದಿಕೆ ಆಗಿದ್ದು ‘ಕೌನ್​ ಬನೇಗಾ ಕರೋಡ್​ಪತಿ’ ರಿಯಾಲಿಟಿ ಶೋ.

ಕಿರುತೆರೆಯ ಫೇಮಸ್​ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಕೌನ್​ ಬನೇಗಾ ಕರೋಡ್​ಪತಿ ಶೋ ಈಗ 13ನೇ ಸೀಸನ್​ ಆರಂಭಿಸಿದೆ. ಇದರಲ್ಲಿ ಶಾಂದಾರ್​ ಶುಕ್ರವಾರ್​ ಎಂಬ ಎಪಿಸೋಡ್​ ಪರಿಚಯಿಸಲಾಗಿದೆ. ಪ್ರತಿ ಶುಕ್ರವಾರ ಪ್ರಸಾರ ಆಗುವ ಈ ವಿಶೇಷ ಸಂಚಿಕೆಯಲ್ಲಿ ಹೆಸರಾಂತ ಸೆಲೆಬ್ರಿಟಿಗಳು ಭಾಗವಹಿಸುತ್ತಾರೆ. ದೀಪಿಕಾ ಪಡುಕೋಣೆ ಮತ್ತು ಫರ್ಹಾ ಖಾನ್​ ಅವರಿಗೂ ಅಂಥ ಅವಕಾಶ ಸಿಕ್ಕಿದೆ. ಈ ವೇಳೆ ಇವರಿಬ್ಬರೂ ಸೇರಿಕೊಂಡು ಅಮಿತಾಭ್​ಗೆ ನಟನೆ ಹೇಳಿಕೊಟ್ಟಿದ್ದಾರೆ!

‘ನಿಮ್ಮ ಸಿನಿಮಾಗಳಲ್ಲಿ ನನ್ನನ್ನು ಆಯ್ಕೆ ಮಾಡಿಕೊಳ್ಳಬೇಕು ಅಂತ ನಿಮಗೆ ಒಮ್ಮೆಯೂ ಅನಿಸಲಿಲ್ಲವೇ’ ಎಂದು ಫರ್ಹಾ ಖಾನ್​ಗೆ ಅಮಿತಾಭ್​ ತಮಾಷೆ ಮಾಡಿದರು. ‘ಅದು ಎಲ್ಲರ ಕನಸಾಗಿರುತ್ತದೆ ಸರ್​’ ಎಂದು ಫರ್ಹಾ ಖಾನ್​ ಉತ್ತರಿಸಿದರು. ‘ನಿಜ ಹೇಳಿ’ ಎಂದು ಬಿಗ್​ ಬಿ ಒತ್ತಾಯಿಸಿದರು. ‘ಹಾಗಾದರೆ ಈಗಲೇ ಒಂದು ದೃಶ್ಯಕ್ಕೆ ಆಡಿಷನ್​ ಮಾಡೋಣ’ ಎಂದು ಫರ್ಹಾ ಖಾನ್​ ಸಜ್ಜಾದರು.

‘ಓಂ ಶಾಂತಿ ಓಂ’ ಸಿನಿಮಾದಲ್ಲಿನ ಒಂದು ದೃಶ್ಯವನ್ನು ದೀಪಿಕಾ ಅಭಿನಯಿಸಿ ತೋರಿಸಿದರು. ಅದನ್ನು ಅಮಿತಾಭ್​ ಅನುಕರಿಸಬೇಕಿತ್ತು. ಅದಕ್ಕಾಗಿ ಅವರು ತುಂಬ ಕಷ್ಟಪಟ್ಟರು. ‘ಹಾಗಲ್ಲ ಸರ್​.. ಹೀಗೆ ಮಾಡಬೇಕು’ ಎಂದು ಅಮಿತಾಭ್​ಗೆ ದೀಪಿಕಾ ಮತ್ತು ಫರ್ಹಾ ನಟನೆ ಹೇಳಿಕೊಟ್ಟರು. ಸದ್ಯ ಈ ಪ್ರೋಮೋವನ್ನು ಸೋನಿ ವಾಹಿನಿ ಹಂಚಿಕೊಂಡಿದೆ. ಸೆ.10ರಂದು ರಾತ್ರಿ 9 ಗಂಟೆಗೆ ಈ ಸಂಚಿಕೆ ಪ್ರಸಾರ ಆಗಲಿದೆ.

2007ರಲ್ಲಿ ತೆರೆಕಂಡ ‘ಓಂ ಶಾಂತಿ ಓಂ’ ಚಿತ್ರಕ್ಕೆ ಫರ್ಹಾ ಖಾನ್​ ನಿರ್ದೇಶನ ಮಾಡಿದ್ದರು. ಅದು ಬಾಲಿವುಡ್​ನಲ್ಲಿ ದೀಪಿಕಾ ನಟಿಸಿದ ಮೊದಲ ಸಿನಿಮಾ. ಆ ಚಿತ್ರದಲ್ಲಿ ಶಾರುಖ್​ ಖಾನ್​ ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ದೀಪಿಕಾಗೆ ಸಿಕ್ಕಿತ್ತು.

ಇದನ್ನೂ ಓದಿ:

‘ಕರೋಡ್​ಪತಿ’ ಶೋನಲ್ಲಿ ಗಂಗೂಲಿ, ಸೆಹ್ವಾಗ್​; ಅಮಿತಾಭ್​ ಎದುರು ಕ್ರಿಕೆಟ್​ ದಿಗ್ಗಜರ ಸಖತ್ ಮಸ್ತಿ

ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡ ಅಮಿತಾಭ್​ ಬಚ್ಚನ್

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ