AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KBC 13: ಕರೋಡ್​ಪತಿ ಹಾಟ್​ಸೀಟ್​ನಲ್ಲಿ ಗಂಗೂಲಿ, ಸೆಹ್ವಾಗ್​? ​13ನೇ ಸೀಸನ್​ ನಿರೂಪಣೆಗೆ ಅಮಿತಾಭ್​ ರೆಡಿ

Kaun Banega Crorepati 13: ‘ಕೌನ್​ ಬನೇಗಾ ಕರೋಡ್​ಪತಿ’ 13ನೇ ಸೀಸನ್​ನಲ್ಲಿ ಅನೇಕ ಹೊಸ ಫೀಚರ್​ಗಳನ್ನು ಪರಿಚಯಿಸಲಾಗುತ್ತಿದೆ. ಅದರ ಝಲಕ್​ ತೋರಿಸಲು ಈಗಾಗಲೇ ಕೆಲವು ಪ್ರೋಮೋಗಳನ್ನು ಹಂಚಿಕೊಳ್ಳಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ರಾತ್ರಿ 9 ಗಂಟೆಗೆ ಈ ಶೋ ಪ್ರಸಾರ ಆಗಲಿದೆ.

KBC 13: ಕರೋಡ್​ಪತಿ ಹಾಟ್​ಸೀಟ್​ನಲ್ಲಿ ಗಂಗೂಲಿ, ಸೆಹ್ವಾಗ್​? ​13ನೇ ಸೀಸನ್​ ನಿರೂಪಣೆಗೆ ಅಮಿತಾಭ್​ ರೆಡಿ
ವೀರೇಂದ್ರ ಸೆಹ್ವಾಗ್​, ಅಮಿತಾಭ್​ ಬಚ್ಚನ್​, ಸೌರವ್​ ಗಂಗೂಲಿ
TV9 Web
| Edited By: |

Updated on:Aug 19, 2021 | 2:34 PM

Share

ಜನಪ್ರಿಯ ‘ಕೌನ್​ ಬನೇಗಾ ಕರೋಡ್​ಪತಿ’ (Kaun Banega Crorepati) ಕ್ವಿಜ್​ ಕಾರ್ಯಕ್ರಮ ಈವರೆಗೆ ಯಶಸ್ವಿಯಾಗಿ 12 ಸೀಸನ್​ಗಳನ್ನು ಮುಗಿಸಿದೆ. ಈಗ 13ನೇ ಸೀಸನ್​ಗೆ (KBC 13) ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಜ್ಞಾನ, ಪುರಾಣ, ರಾಜಕೀಯ, ಸಿನಿಮಾ, ಕ್ರೀಡೆ, ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುತ್ತ ವೀಕ್ಷಕರ ಜ್ಞಾನ ಹೆಚ್ಚಿಸುವ ಈ ಶೋಗೆ ದೊಡ್ಡ ಪ್ರೇಕ್ಷಕವರ್ಗವಿದೆ. ಅಮಿತಾಭ್​ ಬಚ್ಚನ್​ (Amitabh Bachchan) ನಿರೂಪಣೆಯಲ್ಲಿ ಮೂಡಿಬರಲಿರುವ ಕೌನ್​ ಬನೇಗಾ ಕರೋಡ್​ಪತಿ ಕಾರ್ಯಕ್ರಮದ 13ನೇ ಸೀಸನ್​ನಲ್ಲಿ ಸೌರವ್​ ಗಂಗೂಲಿ (Sourav Ganguly) ಮತ್ತು ವೀರೇಂದ್ರ ಸೆಹ್ವಾಗ್​ (Virender Sehwag) ಅವರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಈಗ ಕೇಳಿಬಂದಿದೆ.

ಆ.23ರಿಂದ ಕೌನ್​ ಬನೇಗಾ ಕರೋಡ್​ಪತಿ 13ನೇ ಸೀಸನ್​ ಪ್ರಾರಂಭ ಆಗಲಿದೆ. ಕಳೆದ ಸೀಸಿನ್​ನಲ್ಲಿ ‘ಕರಮ್​ ವೀರ್’ ಎಪಿಸೋಡ್​ ಫೇಮಸ್​ ಆಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜನರನ್ನು ಈ ಸಂಚಿಕೆಗಳಿಗೆ ಅತಿಥಿಗಳಾಗಿ ಕರೆತರಲಾಗುತ್ತಿತ್ತು. ಅದರ ಬದಲು ಈ ಬಾರಿ ‘ಶಾಂದರ್​ ಶುಕ್ರವಾರ್​’ ಎಪಿಸೋಡ್​ ಪರಿಚಯಿಸಲಾಗುತ್ತಿದೆ. ಇದರಲ್ಲಿ ಭಾರತ ಕ್ರಿಕೆಟ್​ ದಿಗ್ಗಜರಾದ ಸೌರವ್​ ಗಂಗೂಲಿ ಮತ್ತು ವೀರೇಂದ್ರ ಸೆಹ್ವಾಗ್​ ಅವರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಸೌರವ್​ ಗಂಗೂಲಿ ಮತ್ತು ವೀರೇಂದ್ರ ಸೆಹ್ವಾಗ್​ ಭಾಗವಹಿಸುವ ಎಪಿಸೋಡ್​ ಆ.27ರಂದು ಪ್ರಸಾರವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಸೋನಿ ವಾಹಿನಿ ಸದ್ಯ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿಲ್ಲ. ಅವರಿಬ್ಬರನ್ನು ಹಾಟ್​ಸೀಟ್​ನಲ್ಲಿ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಇಬ್ಬರ ಪೈಕಿ ಯಾರು ಹೆಚ್ಚು ಹಣ ಗಳಿಸುತ್ತಾರೆ ಎಂಬುದನ್ನು ತಿಳಿದುಕೊಳ್ಳುವ ಕೌತುಕ ವೀಕ್ಷಕರಲ್ಲಿ ಮೂಡಿದೆ.

ಈ ಸೀಸನ್​ನಲ್ಲಿ ಅನೇಕ ಹೊಸ ಫೀಚರ್​ಗಳನ್ನು ಪರಿಚಯಿಸಲಾಗುತ್ತಿದೆ. ಅದರ ಝಲಕ್​ ತೋರಿಸಲು ಈಗಾಗಲೇ ಕೆಲವು ಪ್ರೋಮೋಗಳನ್ನು ಹಂಚಿಕೊಳ್ಳಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ರಾತ್ರಿ 9 ಗಂಟೆಗೆ ಈ ಶೋ ಪ್ರಸಾರ ಆಗಲಿದೆ.

ಕೊರೊನಾ ವೈರಸ್​ ಮೊದಲನೇ ಅಲೆ ಕಾರಣದಿಂದ 12ನೇ ಸೀಸನ್​ಗೆ ಕೆಲವು ಅಡೆಚಣೆಗಳು ಉಂಟಾಗಿದ್ದವು, ಸ್ವತಃ ಅಮಿತಾಭ್​ ಬಚ್ಚನ್​ ಅವರು ಕೊವಿಡ್​ನಿಂದ ಚೇತರಿಸಿಕೊಂಡ ನಂತರವೇ ಶೋ ನಿರೂಪಣೆ ಆರಂಭಿಸಿದ್ದರು. ಸರ್ಕಾರ ಜಾರಿಗೊಳಿಸಿದ್ದ ಕೊವಿಡ್​ ಗೈಡ್​ಲೈನ್ಸ್​ ಪ್ರಕಾರ ಸ್ಟುಡಿಯೋದಲ್ಲಿ ಆಡಿಯನ್ಸ್​ ಇಲ್ಲದೆ ಚಿತ್ರೀಕರಣ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಆಡಿಯನ್ಸ್​ ಭಾಗವಹಿಸುತ್ತಿದ್ದಾರೆ.

ಇದನ್ನೂ ಓದಿ:

ಅಮಿತಾಭ್​ ಬಚ್ಚನ್‌ ನನ್ನ ಪಾತ್ರ ಮೆಚ್ಚಿದ್ದರು, ಅದೇ ನನಗೆ ದೊಡ್ಡ ಪ್ರಶಸ್ತಿ; ವೈಜನಾಥ್ ಬಿರಾದಾರ್

ಪತ್ನಿ ಜಯಾ ಬಗ್ಗೆ ಅಮಿತಾಭ್​ ಬಚ್ಚನ್​ ಬಹಿರಂಗವಾಗಿ ಹೇಳಿಕೊಂಡ 5 ವಿಶೇಷ ಮಾತುಗಳು ಇಲ್ಲಿವೆ

Published On - 12:20 pm, Thu, 19 August 21

3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್